spot_img
spot_img

AAMIR KHAN : ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಆ ದಿನವನ್ನು ಎಂದಿಗೂ ಮರೆಯಲಾಗದು

spot_img
spot_img

Share post:

Hyderabad News:

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ನಡೆದ ಇಂಗ್ಲೆಂಡ್​ ವಿರುದ್ಧದ ರೋಚಕ 5ನೇ ಟಿ20 ಪಂದ್ಯಕ್ಕೆ ನಟ AAMIR KHAN ​ ಕೂಡಾ ಸಾಕ್ಷಿಯಾಗಿದ್ದರು. ಈ ಪಂದ್ಯದ ಕುರಿತು ಅವರು ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ್ದಾರೆ​.

“ಟೀಮ್ ಇಂಡಿಯಾ ಮೈದಾನಕ್ಕೆ ಕಾಲಿಟ್ಟಾಗ ನನ್ನ ಮನದಲ್ಲಿ ಗೊತ್ತಿಲ್ಲದೆ ಖುಷಿ ಹುಟ್ಟಿಕೊಳ್ಳುತ್ತದೆ. ನಾನೂ ಕೂಡಾ ತಂಡದ ಸದಸ್ಯನೆಂದೇ ಪರಿಗಣಿಸುತ್ತೇನೆ. ಅದು ನನಗೆ ಹೆಮ್ಮೆ. ಆದರೆ ನನ್ನ ಜೀವಮಾನದಲ್ಲಿ ಮರೆಯಲಾರದ ದಿವೊಂದಿದೆ. ಅದು 2011ರ ವಿಶ್ವಕಪ್ ಫೈನಲ್. ಅದನ್ನೆಂದಿಗೂ ಮರೆಯಲಾರೆ. ಶ್ರೀಲಂಕಾ ವಿರುದ್ಧದ ಫೈನಲ್​ ಪಂದ್ಯದಲ್ಲಿ ಭಾರತ ಅದ್ಭುತ ಗೆಲುವು ಸಾಧಿಸಿದ ಆ ದಿನ ತುಂಬಾ ವಿಶೇಷವಾಗಿತ್ತು” ಎಂದರು.

ಇಂಗ್ಲೆಂಡ್​ ವಿರುದ್ಧ ಶನಿವಾರ ನಡೆದ 5ನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯ ನೋಡಲು ಸಾಕಷ್ಟು ಸೆಲೆಬ್ರಿಟಿಗಳು ಮತ್ತು ಗಣ್ಯರು ಆಗಮಿಸಿದ್ದರು. ಈ ಪೈಕಿ ಬಾಲಿವುಡ್ ನಟ AAMIR KHAN ಕೂಡಾ ಒಬ್ಬರು.

ಬಳಿಕ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಕುರಿತು ಮಾತನಾಡುತ್ತಾ, “ಸಚಿನ್ ಕ್ರಿಕೆಟ್‌ನಿಂದ ನಿವೃತ್ತರಾಗುವ ಮೊದಲು ಅವರ ಕೊನೆಯ ಪಂದ್ಯವನ್ನು ನಾನೂ ನೋಡಿದ್ದೆ. ಅವರ ಆಟ ಅದ್ಭುತ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಅವರೆಂದಿಗೂ ನನ್ನ ನೆಚ್ಚಿನ ಕ್ರಿಕೆಟಿಗ” ಎಂದು ಹೇಳಿದರು.

Match Highlights:

ಭಾರತ ನೀಡಿದ್ದ ಈ​ ಗುರಿ ಬೆನ್ನಟ್ಟಿದ ಇಂಗ್ಲೆಂಡ್​ 97 ರನ್​ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು​ ಕಳೆದುಕೊಂಡು ಇನ್ನಿಂಗ್ಸ್​ ಮುಗಿಸಿತು. ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ್ದ ಭಾರತೀಯರು, ಬೌಲಿಂಗ್​ನಲ್ಲೂ ಆರ್ಭಟಿಸಿದರು. ಮೊಹಮ್ಮದ್​ ಶಮಿ 3 ವಿಕೆಟ್​ ಉರುಳಿಸಿದರೆ, ವರುಣ್​ ಚಕ್ರವರ್ತಿ, ಶಿವಂ ದುಬೆ, ಅಭಿಷೇಕ್​ ಶರ್ಮಾ ತಲಾ 2 ವಿಕೆಟ್​ ಹಾಗು ರವಿ ಬಿಷ್ಣೋಯಿ 1 ವಿಕೆಟ್​ ಸಾಧನೆ ಮಾಡಿದರು.

ಭಾರತ-ಇಂಗ್ಲೆಂಡ್​ ನಡುವಿನ 5 ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ಭರ್ಜರಿಯಾಗಿ ಜಯಿಸಿ 4-1ರ ಅಂತರದಿಂದ ಸರಣಿ ವಶಪಡಿಸಿಕೊಂಡಿತು. AAMIR KHAN ಈ ಪಂದ್ಯದಲ್ಲಿ ಭಾರತದ ಬ್ಯಾಟರ್​ ಅಭಿಷೇಕ್​ ಶರ್ಮಾ ಸ್ಫೋಟಕ ಬ್ಯಾಟಿಂಗ್​ ಮೂಲಕ ಗಮನ ಸೆಳೆದರು.

ಕೇವಲ 37 ಎಸೆತಗಳಲ್ಲೆ ಶತಕ ಸಿಡಿಸಿ ದಾಖಲೆ ಬರೆದರು. ಅಭಿಷೇಕ್ ಬ್ಯಾಟಿಂಗ್​ ಬಲದಿಂದ ತಂಡ 20 ಓವರ್​​ಗಳಲ್ಲಿ 9 ವಿಕೆಟ್​ ಕಳೆದುಕೊಂಡು 247 ರನ್‌ಗಳ ಬೃಹತ್ ಟಾರ್ಗೆಟ್‌ ನೀಡಿತ್ತು.

ಇದನ್ನು ಓದಿರಿ : Maa Tujhe Salaam: Chhattisgarh Labourer Visits Meenakshi Amman Temple To Unite People

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...