spot_img
spot_img

ನಕಲಿ ಕಟ್ಟಡ ಕಾರ್ಮಿಕ ಕಾರ್ಡ್ ರದ್ದು: ಸಚಿವ ಲಾಡ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಳಗಾವಿ: ಮುಂದಿನ ನಾಲ್ಕೈದು ತಿಂಗಳಲ್ಲಿ ಶೇ.70ರಿಂದ 80ರಷ್ಟು ನಕಲಿ ಕಟ್ಟಡ ಕಾರ್ಮಿಕ ಕಾರ್ಡ್​ಗಳನ್ನು ರದ್ದು ಮಾಡುತ್ತೇವೆ ಎಂದು ಸಚಿವ ಸಂತೋಷ್​ ಲಾಡ್ ತಿಳಿಸಿದರು.

“ಕಾರ್ಮಿಕ ಇಲಾಖೆಯಿಂದ ‘ಅಂಬೇಡ್ಕರ್ ಸೇವಾ ಕೇಂದ್ರ’ ಎಂಬ ನೂತನ ಕಾರ್ಯಕ್ರಮಕ್ಕೆ ಜನವರಿ ಅಥವಾ ಫೆಬ್ರವರಿಯಲ್ಲಿ ಚಾಲನೆ ಸಿಗಲಿದೆ. ಈಗಾಗಲೇ 58 ಲಕ್ಷ ಇದ್ದ ಕಟ್ಟಡ ಕಾರ್ಮಿಕ ಕಾರ್ಡ್​ಗಳನ್ನು 38 ಲಕ್ಷಕ್ಕೆ ತಂದಿದ್ದೇವೆ” ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್​ ಲಾಡ್​ ತಿಳಿಸಿದ್ದಾರೆ. ನಗರದಲ್ಲಿಂದು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

“ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷಗಳಿಗೆ ಸರ್ಕಾರ ಸಮರ್ಪಕ ಉತ್ತರ ನೀಡುತ್ತದೆ. ಬಿಜೆಪಿಯವರಿಗೆ ನಾವು ಸದನದಲ್ಲಿ ಮಾತನಾಡಲು ಹೆಚ್ಚು ಅವಕಾಶ ನೀಡಿದ್ದೇವೆ. ಬಿಜೆಪಿ ನಾಯಕರು ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಬಗ್ಗೆ ಚರ್ಚೆಗೆ ಆಸಕ್ತಿ ತೋರಿಸಲಿ. ಅಭಿವೃದ್ಧಿ ಬಿಟ್ಟು ಬಿಜೆಪಿಯವರು ಕೇವಲ ವಿವಾದಾತ್ಮಕ ಹಾಗೂ ರಾಜಕೀಯ ವಿಷಯಗಳ ಕುರಿತು ಚರ್ಚೆಗೆ ಹೋಗ್ತಾರೆ” ಎಂದು ಹೇಳಿದರು.

“43 ವಿಭಾಗಗಳಲ್ಲಿ 43 ವಾಹನಗಳು ಸಂಚರಿಸಲಿವೆ. ಇಲಾಖೆಯ ಪ್ರತಿನಿಧಿಗಳು ನಮ್ಮ ಇಲಾಖೆಯಿಂದ ಲಾಭ ಪಡೆದ ಫಲಾನುಭವಿಗಳನ್ನು ಭೇಟಿಯಾಗಿ ಮಾಹಿತಿ ಕಲೆ ಹಾಕಲಿದ್ದಾರೆ. ಜೊತೆಗೆ, ನಕಲಿ ಕಾರ್ಮಿಕ ಕಾರ್ಡ್​ಗಳನ್ನು ಪತ್ತೆ ಹಚ್ಚಿ ಅವುಗಳನ್ನು ರದ್ದು ಮಾಡುತ್ತೇವೆ. ನಾಲ್ಕೈದು ತಿಂಗಳಲ್ಲಿ ಶೇ.70 ರಿಂದ 80ರಷ್ಟು ನಕಲಿ ಕಟ್ಟಡ ಕಾರ್ಮಿಕ ಕಾರ್ಡ್​ಗಳನ್ನು ರದ್ದು ಮಾಡುತ್ತೇವೆ” ಎಂದರು.

“ಕಾಂಗ್ರೆಸ್ ಸರ್ಕಾರ ಪಂಚಮಸಾಲಿ ಸೇರಿದಂತೆ ಯಾವುದೇ ಹೋರಾಟಕ್ಕೆ ಅಡ್ಡಿಪಡಿಸುತ್ತಿಲ್ಲ. ಯಾರೇ ಆಗಲಿ ಅಧಿಕಾರದಲ್ಲಿ ಇದ್ದಾಗ ಪ್ರತಿಭಟನೆಗಳು ನಡೆಯುವುದು ಸಹಜ ಪ್ರಕ್ರಿಯೆ. ಆ ಪ್ರತಿಭಟನೆಗಳು ಪ್ರಜಾಪ್ರಭುತ್ವದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಾಗುವಂತೆ ಮಾಡುತ್ತವೆ” ಎಂದು ತಿಳಿಸಿದರು.

 

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

HIGH COURT : ಚಾಮರಾಜಪೇಟೆ ಪಶು ವೈದ್ಯಕೀಯ ಆಸ್ಪತ್ರೆ ಜಾಗ ಮೊರಾರ್ಜಿ ಶಾಲೆಗೆ ಹಸ್ತಾಂತರ

Bangalore News: HIGH COURT ಪ್ರಕರಣ ಸಂಬಂಧ ವಕೀಲ ಗಿರೀಶ್ ಭಾರದ್ವಾಜ್​ ​ ಹಾಗೂ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ...

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...