spot_img
spot_img

ದಲಿತೇತರ ಮಹಿಳೆ ಮತ್ತು ದಲಿತ ಪುರುಷನ ಮಾಡುವೆ ರದ್ದು : ಸುಪ್ರೀಂ ಕೋರ್ಟ್ ತೀರ್ಪು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನವದೆಹಲಿ: ಸಂವಿಧಾನದ 142ನೇ ವಿಧಿಯಡಿ ತನ್ನ ವಿಶೇಷಾಧಿಕಾರವನ್ನು ಬಳಸಿಕೊಂಡು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ.

ದಲಿತೇತರ ಮಹಿಳೆ ಮತ್ತು ದಲಿತ ಪುರುಷನ ನಡುವಿನ ಮದುವೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಕಳೆದ ಆರು ವರ್ಷಗಳಿಂದ ತಾಯಿಯೊಂದಿಗೆ ಇರುವ ಅಪ್ರಾಪ್ತ ಮಕ್ಕಳಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆಯುವಂತೆ ಪತಿಗೆ ಗುರುವಾರ ಆದೇಶಿಸಿದೆ.

ಸುಪ್ರೀಂ ಕೋರ್ಟ್ ಅನೇಕ ತೀರ್ಪುಗಳಲ್ಲಿ ಈ ತತ್ವವನ್ನು ಪುನರುಚ್ಚರಿಸಿದೆ ಮತ್ತು 2018 ರಲ್ಲಿ ನೀಡಲಾದ ತೀರ್ಪೊಂದರಲ್ಲಿ, “ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆ ಮತ್ತು ಪರಿಶಿಷ್ಟ ಜಾತಿಯ (ಸಮುದಾಯ) ವ್ಯಕ್ತಿಯನ್ನು ಮದುವೆಯಾಗುವ ಮೂಲಕ ಜಾತಿಯನ್ನು ಬದಲಾಯಿಸಲಾಗುವುದಿಲ್ಲ ಎಂಬುದರಲ್ಲಿ ಯಾವುದೇ ವಿವಾದವಿಲ್ಲ. ಮಹಿಳೆಯೊಬ್ಬಳ ಪತಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಕಾರಣಕ್ಕೇ ಆಕೆಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಲು ಸಾಧ್ಯವಿಲ್ಲ.” ಎಂದು ಹೇಳಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠ, ಜೂಹಿ ಪೋರಿಯಾ ನೀ ಜವಾಲ್ಕರ್ ಮತ್ತು ಪ್ರದೀಪ್ ಪೋರಿಯಾ ದಂಪತಿಗೆ ವಿಚ್ಚೇದನ ಮಂಜೂರು ಮಾಡಿದ್ದು ದಲಿತೇತರ ಮಹಿಳೆಯೊಬ್ಬಳು ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಮದುವೆಯಾದ ಮಾತ್ರಕ್ಕೆ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಲು ಸಾಧ್ಯವಿಲ್ಲವಾದರೂ ಪರಿಶಿಷ್ಟ ಜಾತಿಯ ಪುರುಷನಿಗೆ ಜನಿಸಿದ ಅವರ ಮಕ್ಕಳು ಎಸ್​ಸಿ ಟ್ಯಾಗ್​ಗೆ ಅರ್ಹರಾಗಿರುತ್ತಾರೆ ಎಂದು ಅಭಿಪ್ರಾಯ ಪಟ್ಟಿದೆ.

ಪ್ರಸ್ತುತ ಪ್ರಕರಣದಲ್ಲಿ, ಹನ್ನೊಂದು ವರ್ಷದ ಮಗ ಮತ್ತು ಆರು ವರ್ಷದ ಮಗಳು ಕಳೆದ ಆರು ವರ್ಷಗಳಿಂದ ರಾಯ್ಪುರದ ತನ್ನ ಹೆತ್ತವರ ಮನೆಯಲ್ಲಿ ದಲಿತೇತರ ಮಹಿಳೆಯೊಂದಿಗೆ ವಾಸಿಸುತ್ತಿದ್ದಾರೆ. ಸದ್ಯ ದಂಪತಿಗೆ ಸುಪ್ರೀಂ ಕೋರ್ಟ್ ವಿಚ್ಛೇದನ ಮಂಜೂರು ಮಾಡಿದ್ದು, ಮಕ್ಕಳು ದಲಿತೇತರ ಕುಟುಂಬದಲ್ಲಿಯೇ ಇರಲಿದ್ದಾರೆ. ಆದಾಗ್ಯೂ ಸರ್ಕಾರದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಮತ್ತು ಉದ್ಯೋಗದ ಉದ್ದೇಶಕ್ಕಾಗಿ ಅವರನ್ನು ಪರಿಶಿಷ್ಟ ಜಾತಿಗೆ ಸೇರಿದವರೆಂದೇ ಪರಿಗಣಿಸಲಾಗುತ್ತದೆ.

ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಆರು ತಿಂಗಳೊಳಗೆ ಇಬ್ಬರು ಮಕ್ಕಳಿಗೆ ಎಸ್​ಸಿ ಪ್ರಮಾಣಪತ್ರಗಳನ್ನು ಪಡೆಯುವಂತೆ ಪತಿಗೆ ನ್ಯಾಯಮೂರ್ತಿ ಕಾಂತ್ ನೇತೃತ್ವದ ನ್ಯಾಯಪೀಠ ಸೂಚಿಸಿತು.

ಪ್ರವೇಶ ಮತ್ತು ಬೋಧನಾ ಶುಲ್ಕ, ಊಟ ಮತ್ತು ವಸತಿ ವೆಚ್ಚಗಳು ಸೇರಿದಂತೆ ಸ್ನಾತಕೋತ್ತರ ಪದವಿಯವರೆಗೆ ಅವರ ಶಿಕ್ಷಣದ ಎಲ್ಲಾ ವೆಚ್ಚಗಳನ್ನು ತಂದೆಯೇ ಭರಿಸುತ್ತಾರೆ ಎಂದು ಅದು ಹೇಳಿದೆ.

ಕುತೂಹಲಕಾರಿ ಸಂಗತಿಯೆಂದರೆ, ಮುಂದಿನ ವರ್ಷ ಆಗಸ್ಟ್ 31 ರೊಳಗೆ ಮಹಿಳೆಯ ವೈಯಕ್ತಿಕ ಬಳಕೆಗಾಗಿ ದ್ವಿಚಕ್ರ ವಾಹನವೊಂದನ್ನು ಖರೀದಿಸಿ ನೀಡುವಂತೆ ವಿಚ್ಛೇದನಕ್ಕಾಗಿ ಷರತ್ತು ಹಾಕಲಾಗಿದೆ. ಪರಸ್ಪರರ ವಿರುದ್ಧ ಪಕ್ಷಗಳು ದಾಖಲಿಸಿದ ಅಡ್ಡ-ಎಫ್ಐಆರ್ ಮತ್ತು ಪ್ರಕರಣಗಳನ್ನು ನ್ಯಾಯಪೀಠ ರದ್ದುಗೊಳಿಸಿತು.

ಮಹಿಳೆ ಮತ್ತು ಮಕ್ಕಳ ಜೀವನಪರ್ಯಂತ ನಿರ್ವಹಣೆಗಾಗಿ ಪುರುಷನು ಮಹಿಳೆಗೆ ಒಂದು ಬಾರಿಯ ಪರಿಹಾರವಾಗಿ ಈಗಾಗಲೇ 42 ಲಕ್ಷ ರೂ. ಪಾವತಿಸಿದ್ದಾನೆ. ಅಲ್ಲದೆ ವ್ಯಕ್ತಿಯು ರಾಯ್ಪುರದಲ್ಲಿ ತನ್ನ ಒಡೆತನದಲ್ಲಿರುವ ಪ್ಲಾಟ್ ಒಂದನ್ನು ಸಹ ಮಹಿಳೆಗೆ ನೀಡಬೇಕಿದೆ.

ತಂದೆಯು ನಿಯಮಿತವಾಗಿ ಮಕ್ಕಳನ್ನು ಭೇಟಿ ಮಾಡಲು ಅನುಕೂಲ ಮಾಡಿಕೊಡಬೇಕು, ಅವರನ್ನು ರಜೆಯ ಮೇಲೆ ಕರೆದೊಯ್ಯಲು ಅವಕಾಶ ನೀಡಬೇಕು ಮತ್ತು ಅವರ ನಡುವೆ ಉತ್ತಮ ಸಂಬಂಧವನ್ನು ಬೆಳೆಸಬೇಕು ಎಂದು ಸುಪ್ರೀಂ ಕೋರ್ಟ್ ಮಹಿಳೆಗೆ ನಿರ್ದೇಶನ ನೀಡಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RAVI BASRUR : ‘ಪ್ರತಿಭೆಗಳನ್ನು ಪ್ರೋತ್ಸಾಹಿಸಿ, ನಿಮ್ಮ ಹೆಸರೇಳಿ ಬದುಕೊಳ್ತಾರೆ’

Bagalkote News: ಸಿದ್ದನಕೊಳ್ಳ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರಂಭ ಜರುಗಿತು. ಜ್ಯೋತಿ ಬೆಳಗಿಸುವ ಮೂಲಕ ಶಾಸಕ...

BUS FIRE INCIDENT : ಹೊತ್ತಿ ಉರಿದ ಬಸ್, ತೆಲಂಗಾಣದ ಓರ್ವ ಸಾವು

Mathura (Uttar Pradesh) News: ಉತ್ತರಪ್ರದೇಶದ ಮಥುರಾದಲ್ಲಿ ತೆಲಂಗಾಣದ 50ಕ್ಕೂ ಹೆಚ್ಚು ಜನರಿದ್ದ BUS​ವೊಂದು ಬೆಂಕಿಗಾಹುತಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.ತೆಲಂಗಾಣದ ಜನರಿಂದ ತುಂಬಿದ್ದ ಬಸ್​ವೊಂದು ಮಥುರಾದಲ್ಲಿ...

NEW PRESIDENT FOR KPCC : ಕೆಪಿಸಿಸಿಗೆ ಪೂರ್ಣ ಪ್ರಮಾಣದ ಹೊಸ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಲಿ

Bangalore News: ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನನ್ನನ್ನು ನಾನು NEW PRESIDENT FOR KPCC ಎಂದು ಮಾಡಿ ಎಂದು ಹೇಳಿಲ್ಲ. ನಾವುಗಳೆಲ್ಲ ಸಚಿವರಾದ...

HOMEOWNERS NOTE TO THIEVES : ಸಂಕ್ರಾಂತಿಗೆ ಊರಿಗೆ ಹೋಗುವಾಗ ಜಾಣತನ ಮೆರೆದ ಮನೆ ಮಾಲೀಕ

Hyderabad News: ಈ ರೀತಿಯ ವಿಚಿತ್ರ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುವ ಜೊತೆಗೆ ಮನೆ ಮಾಲೀಕನ ಹಾಸ್ಯ ಮತ್ತು ಬುದ್ದಿವಂತಿಕೆಗೆ ಮೆಚ್ಚುಗೆ ಕೂಡ ವ್ಯಕ್ತವಾಗುತ್ತಿದೆ.ಇಂತಹುದೇ...