spot_img
spot_img

ನಟ ಅಲ್ಲು ಅರ್ಜುನ್ ಮತ್ತೆ ನಟ ಕಿಚ್ಚ ಸುದೀಪ್ ಸಂಬಂಧ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕಾಲ್ತುಳಿತ ಪ್ರಕರಣದಲ್ಲಿ ತಮಿಳು ನಟ ಅಲ್ಲು ಅರ್ಜುನ್ ಬಂಧನವಾಗಿದ್ದರ ಬಗ್ಗೆ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ನಟ ಅಲ್ಲು ಅರ್ಜುನ್ ಬೆನ್ನಿಗೆ ನಿಂತ ಕಿಚ್ಚ ಸುದೀಪ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಸುದೀಪ್ ಅವರು, ‘ಯಾವ ಸ್ಟಾರ್ ಕೂಡ ಫ್ಯಾನ್ಸ್‌ಗೆ ಹೀಗೆ ಮಾಡಿ ಅಂತ ಹೇಳಲ್ಲ. ಅಭಿಮಾನಿಗಳು ಏನೇ ಮಾಡಿದರೂ ಕೂಡ ಅವರು ಅದನ್ನು ಪ್ರೀತಿಯಿಂದ ಮಾಡುತ್ತಾರೆ.
ನನ್ನ ಸಿನಿಮಾ ರಿಲೀಸ್ ವೇಳೆ ಕೂಡ ಕಟೌಟ್‌ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿ ಹೋಗಿದ್ದರು. ಇವೆಲ್ಲಾ ಕೈ ಮೀರಿ ನಡೆಯುವಂತಹ ಸಂದರ್ಭಗಳು. ನಮ್ಮ ಕೈಯಲ್ಲಿ ಏನೂ ಕೂಡ ಇರುವುದಿಲ್ಲ.

ಏನೂ ಕೂಡ ಇರುವುದಿಲ್ಲ. ಇದರಲ್ಲಿ ಯಾರ ತಪ್ಪೂ ಕೂಡ ಇರಲ್ಲ. ಸಂದರ್ಭ ರಾಂಗ್ ಆಗಿರುತ್ತೆ’ ಎಂದು ಘಟನೆ ಬಗ್ಗೆ ವಿಷಾದವನ್ನು ವ್ಯಕ್ತಪಡಿಸಿದರು. ನಾವು ಫ್ಯಾನ್ಸ್‌ಗೆ ಹುಷಾರ್‌ ಆಗಿ ಇರಿ ಎಂದು ಪದೇ ಪದೇ ಹೇಳುತ್ತಲೇ ಇರುತ್ತೇವೆ.

ಡಿಸೆಂಬರ್ 5ರಂದು ಪುಷ್ಪಾ-2 ಸಿನಿಮಾ ವಿಶ್ವದಾದ್ಯಂತ ಭರ್ಜರಿಯಾಗಿ ತೆರೆಕಂಡಿದೆ. ಈ ದಿನ ಹೈದ್ರಾಬಾದ್‌ನ ಸಂಧ್ಯಾ ಥಿಯೇಟರ್‌ಗೆ ಪುಷ್ಪಾ-2 ಸಿನಿಮಾ ನೋಡಲು ಆಗಮಿಸಿದ್ದ ರೇವತಿ ಎನ್ನುವ ಮಹಿಳೆ ಕಾಲ್ತುಳಿತದಿಂದ ಸಾವನ್ನಪ್ಪಿದ್ದರು. ಸಂಧ್ಯಾ ಥಿಯೇಟರ್‌ಗೆ ಅಂದು ನಟ ಅಲ್ಲು ಅರ್ಜುನ್ ಏಕಾಏಕಿ ಭೇಟಿ ನೀಡಿದ್ದಕ್ಕೆ ಅಭಿಮಾನಿಗಳ ನೂಕುನುಗ್ಗಲು ಉಂಟಾಗಿದೆ. ಇದರಿಂದಾಗಿ ರೇವತಿ ಎನ್ನುವ ಮಹಿಳೆ ಕಾಲ್ತುಳಿತದಿಂದ ಸಾವನ್ನಪ್ಪಿದ್ದರು.

ಸಂಧ್ಯಾ ಥಿಯೇಟರ್‌ಗೆ ಅಂದು ನಟ ಅಲ್ಲು ಅರ್ಜುನ್ ಏಕಾಏಕಿ ಭೇಟಿ ನೀಡಿದ್ದಕ್ಕೆ ಅಭಿಮಾನಿಗಳ ನೂಕುನುಗ್ಗಲು ಉಂಟಾಗಿದೆ. ಯಾವುದೇ ಮುಂಜಾಗ್ರತೆ ಕ್ರಮ ಇಲ್ಲದೆ ನಟ ಅರ್ಜುನ್ ಥಿಯೇಟರ್‌ಗೆ ಬಂದಿದ್ದರಿಂದ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಉಂಟಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದರು.

ಬಳಿಕ ಪೊಲೀಸರು ನಟನಿಗೆ ನೋಟೀಸ್ ಕಳುಹಿಸಿದ್ದರು. ಆದರೆ ಈ ನೋಟೀಸ್‌ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಇದ್ದಿದ್ದರಿಂದ ನಟನ ಮನೆಗೆ ಪೊಲೀಸರು ಕಳೆದ ದಿನ (ಡಿಸೆಂಬರ್ 13) ಅರ್ಜುನ್ ಅವರನ್ನು ಬಂದಿಸಿದ್ದರು. ಹೈದರಾಬಾದ್ ನ್ಯಾಯಾಲಯವು ಅಲ್ಲು ಅರ್ಜುನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲು ಆದೇಶಿಸಿತ್ತು.

ಕಳೆದ ದಿನ ರಾತ್ರಿ ಜೈಲಿನಲ್ಲಿದ್ದ ನಟ ಬಂಧನವಾಗಿ 24 ಗಂಟೆಗಳಲ್ಲಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದಾರೆ.

ಅಲ್ಲು ಅರ್ಜುನ್ ಅವರನ್ನು ಕರೆದೊಯ್ಯಲು ಅವರ ತಂದೆ ಮತ್ತು ಮಾವ ಹೈದರಾಬಾದ್‌ನ ಚಂಚಲಗುಡ ಕೇಂದ್ರ ಕಾರಾಗೃಹಕ್ಕೆ ತಲುಪಿದ್ದರು.

ನಿನ್ನೆಯೇ ಈ ಪ್ರಕರಣದಲ್ಲಿ ಅಲ್ಲು ಅರ್ಜುನ್‌ಗೆ ಜಾಮೀನು ಸಿಕ್ಕಿತ್ತು. ಆದರೆ ಇದಾದ ನಂತರವೂ ರಾತ್ರಿ ಜೈಲಿನಲ್ಲೇ ಕಳೆಯಬೇಕಾಯಿತು. ತಮ್ಮ ನೆಚ್ಚಿನ ನಟ ಜೈಲಿನಿಂದ ಹೊರಬರುತ್ತಿದ್ದಂತೆ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MAHA KUMBH MELA TOUR PACKAGE : ಎಚ್ಚರ.. ಎಚ್ಚರ… ಮಹಾ ಕುಂಭಮೇಳದ ಪ್ರವಾಸದ ಪ್ಯಾಕೇಜ್ ಹೆಸರಿನಲ್ಲಿ ವಂಚನೆ

Bangalore News: MAHA KUMBH MELA TOUR PACKAGE ಯಾತ್ರಿಗಳ ಈ ಆಸೆಯನ್ನೇ ಬಂಡವಾಳ ಮಾಡಿಕೊಂಡಿರುವವರು ಇದೀಗ ವಂಚನೆಗೆ ಇಳಿದಿದ್ದಾರೆ. ಈ ಹಿನ್ನೆಲೆ ಪ್ರಯಾಗ್​ರಾಜ್​ ಪ್ರವಾಸಕ್ಕೆ...

BSNL RS 99 PLAN : ಕೇವಲ 99 ರೂ.ಗೆ ಅನ್ಲಿಮಿಟೆಡ್ ಕಾಲಿಂಗ್ ಪ್ಲಾನ್ ತಂದ ಬಿಎಸ್ಎನ್ಎಲ್!

BSNL 99 Plan: ಬಿಎಸ್​ಎನ್​ಎಲ್​ ತಮ್ಮ ಗ್ರಾಹಕರಿಗೆ ಶುಭ ಸುದ್ದಿ ನೀಡಿದೆ. ಈ ಆಫರ್​ ಎರಡು ಸಿಮ್‌ಗಳನ್ನು ಬಳಸುವ ಗ್ರಾಹಕರಿಗೆ ಉಪಯುಕ್ತ. ಭಾರತ್ ಸಂಚಾರ್ ನಿಗಮ್...

WORLD CANCER DAY : ಶಿವಣ್ಣ To ಸಂಜಯ್ ದತ್ – ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು

Shivanna News: ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ ಕ್ಯಾನ್ಸರ್​​ ಗೆದ್ದು ಬಂದಿದ್ದಾರೆ. 2024ರ ಡಿಸೆಂಬರ್ 24ರಂದು ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೊಳಗಾದ ಸ್ಯಾಂಡಲ್​ವುಡ್​ನ ಖ್ಯಾತ ನಟ, ಅಲ್ಲೇ ಕೆಲ...

AARADHYA BACHCHAN : ಆರೋಗ್ಯದ ಕುರಿತು ಸುಳ್ಳು ಮಾಹಿತಿ

New Delhi News: ತಮ್ಮ ಆರೋಗ್ಯದ ಕುರಿತು ಸುಳ್ಳು ಮಾಹಿತಿ ಪ್ರಕಟಿಸಿದ ಕೆಲವು ಯೂಟ್ಯೂಬ್ ಚಾನೆಲ್‌ಗಳು ಮತ್ತು ವೆಬ್‌ಸೈಟ್‌ಗಳ ವಿರುದ್ಧ ಐಶ್ವರ್ಯಾ ರೈ ಪುತ್ರಿ AARADHYA...