spot_img
spot_img

ರೇಣುಕಾಸ್ವಾಮಿ ಕೇಸ್‌ನಲ್ಲಿ ನಟ ದರ್ಶನ್‌ ಅರೆಸ್ಟ್ ಆಗಿದ್ದು ; ರಿಯಲ್ ಸ್ಟಾರ್ ಉಪೇಂದ್ರ ಹೇಳಿದ್ದೆನು.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ರೇಣುಕಾಸ್ವಾಮಿ ಕೇಸ್‌ನಲ್ಲಿ ನಟ ದರ್ಶನ್‌ ಅರೆಸ್ಟ್ ಆಗಿ 3 ತಿಂಗಳುಗಳೇ ಕಳೆದಿದೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟ ಯಾವಾಗ ರಿಲೀಸ್ ಆಗ್ತಾರೆ. ದಾಸನಿಗೆ ಬಿಡುಗಡೆಯ ಬಾಗಿಲು ಯಾವಾಗ ತೆರೆಯುತ್ತೆ ಅನ್ನೋದು ಕಾಯುತ್ತಿದ್ದಾರೆ. ಫ್ಯಾನ್ಸ್‌ಗಳ ಒದ್ದಾಟ ಒಂದು ಕಡೆಯಾದ್ರೆ  ಸ್ಯಾಂಡಲ್‌ವುಡ್‌ಗೂ ದರ್ಶನ್ ಅರೆಸ್ಟ್ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ.

ಇದನ್ನೂ ಓದಿ : BSNL: ಪ್ರತಿದಿನ 2GB ಡೇಟಾ.. ದಿನಕ್ಕೆ 7 ರೂಪಾಯಿಯಂತೆ 75 ದಿನಗಳ ವ್ಯಾಲಿಡಿಟಿ

ರಿಯಲ್ ಸ್ಟಾರ್ ಉಪೇಂದ್ರ ಅವರು ನಟ ದರ್ಶನ್ ಅರೆಸ್ಟ್ ಆದ ಬಳಿಕ ಈ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ಮೌನ ಮುರಿದಿರುವ ಉಪೇಂದ್ರ ಅವರು ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ.

ಸ್ಯಾಂಡಲ್‌ವುಡ್ ಸ್ಟಾರ್‌ ಆಗಿ ನಟ ದರ್ಶನ್ ಅರೆಸ್ಟ್‌ ಬಗ್ಗೆ ನಟ ಉಪೇಂದ್ರ ಅವರು ಮುಕ್ತವಾಗಿ ಮಾತನಾಡಿದ್ದಾರೆ. ಖಂಡಿತವಾಗಿ ಈ ಪ್ರಕರಣದಿಂದ ಎಲ್ಲರಿಗೂ  ನೋವಾಗಿದೆ. ಸದ್ಯದಲ್ಲೇ ತೀರ್ಪು ಬರುತ್ತೆ ಕಾದು ನೋಡೋಣ ಎಂದು ಪ್ರತಿಕ್ರಿಯಿಸಿದ್ದಾರೆ.

ಏನಂದ್ರೆ ಎಲ್ಲರಿಗೂ ನೋವಾಗಿದೆ. ಒಂದು ಅಂತು ಸತ್ಯ. ಇಂಡಸ್ಟ್ರಿಯಲ್ಲಿ ಇರುವವರಿಗೂ ಎಲ್ಲರಿಗೂ  ನೋವಾಗಿದೆ. ಯಾಕಂದ್ರೆ ನಾವೆಲ್ಲಾ ಒಂದೇ ಫ್ಯಾಮಿಲಿ. ಯಾರದೇ ತಪ್ಪಾಗಲಿ, ಸರಿಯಾಗಲಿ ನೋವಂತೂ ಎಲ್ಲರಿಗೂ ಆಗುತ್ತೆ. ಜನಗಳಿಗೂ ಅದೇ ಭಾವನೆ ಇದೆ.

ಇದನ್ನೂ ಓದಿ : ಜಮ್ಮು-ಕಾಶ್ಮೀರ ಚುನಾವಣೆ: ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವು ಇತರ ಸರ್ಕಾರಗಳಿಗಿಂತ ಉತ್ತಮವಾಗಿದೆ.

ಈ ಘಟನೆ ಆಗಬಾರದು ಅನ್ನೋದು ಎಲ್ಲರಲ್ಲೂ ಇದೆ. ಇನ್ನೂ ತನಿಖೆ ನಡೆಯುತ್ತಿದೆ. ಮಾಧ್ಯಮಗಳಲ್ಲಿ ತೋರಿಸುತ್ತಾ ಇರೋದನ್ನೇ ನಾವು ನೋಡುತ್ತಾ ಇದ್ದೇವೆ. ಈ ವಿಚಾರದಲ್ಲಿ ನಾವು ಜಡ್ಜ್‌ಮೆಂಟ್ ಕೊಡೋಕೆ ಆಗಲ್ಲ. ಇವ್ರು ಸರಿ ಇವ್ರು ತಪ್ಪು ಅಂತ ಹೇಳೋಕೆ ಆಗಲ್ಲ. ಸದ್ಯದಲ್ಲೇ ತೀರ್ಪು ಬರುತ್ತೆ.

ನಾವೆಲ್ಲಾ ಒಪ್ಪಿಕೊಳ್ಳಲೇ ಬೇಕು. ಒಂದು ನ್ಯಾಯ ವ್ಯವಸ್ಥೆ ಇದೆ. ಕೋರ್ಟ್‌ಗೆ ನಾವು ಗೌರವ ಕೊಡಬೇಕು. ಖಂಡಿತ ಒಂದು ರಿಸಲ್ಟ್ ಹೊರ ಬರುತ್ತೆ. ಅದಕ್ಕೆ ನಾವು ಕಾಯಬೇಕು ಅದನ್ನೇ ನಾವು ಮಾಡುತ್ತಿದ್ದೇವೆ ಅಷ್ಟೇ ಎಂದು ಉಪೇಂದ್ರ ಹೇಳಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...