spot_img
spot_img

ತಿರುಪತಿಗೆ ಮುಡಿ ಕೊಟ್ಟ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ

spot_img
spot_img

Share post:

ಅನಾರೋಗ್ಯ ಹಿನ್ನೆಲೆ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿರುವ ಶಿವಣ್ಣ, ಕುಟುಂಬ ಹಾಗೂ ಆಪ್ತರ ಜೊತೆಗೆ ತಿರುಪತಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದಾರೆ.

ಹ್ಯಾಟ್ರಿಕ್​ ಹೀರೋ ಶಿವ ರಾಜ್​ಕುಮಾರ್ ಪತ್ನಿ ಗೀತಾ ಜೊತೆಗೆ ತಿರುಪತಿಗೆ ಭೇಟಿ ನೀಡಿದ್ದು, ತಿಮ್ಮಪ್ಪನಿಗೆ ​ಮುಡಿ ಕೊಟ್ಟು ಬಂದಿದ್ದಾರೆ. ಚಿಕಿತ್ಸೆಗಾಗಿ ವಿದೇಶಕ್ಕೆ ಹಾರುವ ಮುನ್ನ ಕುಟುಂಬ ಹಾಗೂ ಆಪ್ತರ ಜೊತೆಗೆ ತಿರುಪತಿಗೆ ಭೇಟಿ ನೀಡಿ ವಿಶೇಷ ಪೂಜೆಯನ್ನೂ ಸಲ್ಲಿಸಿದ್ದಾರೆ.

ಯಂಗ್​ ಆ್ಯಂಡ್ ಎನರ್ಜಟಿಕ್​ ಆಗಿರುವ ಶಿವಣ್ಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅದರ ಚಿಕಿತ್ಸೆಗಾಗಿ ಸದ್ಯದಲ್ಲೇ ವಿದೇಶಕ್ಕೆ ತೆರಳಲಿದ್ದಾರೆ. ಈ ಕಾರಣಕ್ಕೆ ಹ್ಯಾಟ್ರಿಕ್ ಹೀರೋ ತಮ್ಮ ನೆಚ್ಚಿನ ದೇವಸ್ಥಾನಗಳಿಗೆ ಭೇಟಿ ಕೊಡುತ್ತಿದ್ದಾರೆ. ಇತ್ತೀಚೆಗೆ ಶಿವಣ್ಣ ಅಭಿನಯದ ಭೈರತಿ ರಣಗಲ್​ ಇತ್ತೀಚೆಗೆ ರಿಲೀಸ್ ಆಗಿ, ಸೂಪರ್​ ಹಿಟ್​ ಆಗಿತ್ತು. ಇನ್ನೂ ಕೆಲವು ಕಮಿಟ್​ ಆದ ಸಿನಿಮಾಗಳ ಶೂಟಿಂಗ್ ಅನ್ನು ಈಗಾಗಲೇ​ ಮುಗಿಸಿರುವ ಸೆಂಚುರಿ ಸ್ಟಾರ್​, ಸ್ವಲ್ಪ ದಿನಗಳ ಕಾಲ ಶೂಟಿಂಗ್​ನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಚಿಕಿತ್ಸೆ ನಂತರ ಸಂಪೂರ್ಣ ಚೇತರಿಕೆ ನಂತರ ಮತ್ತೆ ಸಿನಿಮಾಗೆ ಮರಳಲಿದ್ದಾರೆ.

ಸದ್ಯ ಮುಡಿ ಕೊಟ್ಟ ನಂತರ ಅವರ ಲುಕ್​ ನೋಡಿ ಅಭಿಮಾನಿಗಳು ಆಶ್ಚರ್ಯಪಟ್ಟಿದ್ದಾರೆ. ಇದೀಗ ಕುಟುಂಬ ಹಾಗೂ ಆಪ್ತರ ಜೊತೆಗೆ ತಿರುಪತಿಗೆ ಆಗಮಿಸಿ ಶಿವರಾಜ್​ಕುಮಾರ್​ ದೇವರ ಆಶೀರ್ವಾದ ಪಡೆದರು. ಅನಾರೋಗ್ಯ ಹಿನ್ನೆಲೆ ಕರುನಾಡ ಚಕ್ರವರ್ತಿ ತಿರುಪತಿ ದೇವಸ್ಥಾನಕ್ಕೆ ಭೇಟಿಕೊಟ್ಟು ಮುಡಿಕೊಟ್ಟು ಹರಕೆ ತೀರಿಸಿದ್ದಾರೆ. ಈ ಸಂದರ್ಭದಲ್ಲಿ ಶಿವಣ್ಣ ಅವರ ಎರಡನೇ ಮಗಳು ನಿವೇದಿತಾ ಹಾಗು ನಿರ್ಮಾಪಕ ಕೆ. ಪಿ. ಶ್ರೀಕಾಂತ್ ಜೊತೆಗಿದ್ದರು.

ಸದ್ಯ ಕನ್ನಡ ಚಿತ್ರರಂಗದಲ್ಲಿ ಸಾಲು ಸಾಲು ಸಿನಿಮಾಗಳನ್ನು ನಟ ಶಿವರಾಜ್​ಕುಮಾರ್ ಒಪ್ಪಿಕೊಂಡಿದ್ದಾರೆ. ಇವರ ಗೆಳೆಯರಿಬ್ಬರು ಹೇಳುವ ಹಾಗೇ.. ಶಿವಣ್ಣನ ಕೈಯಲ್ಲಿ ಅರ್ಜುನ್ ಜನ್ಯ ನಿರ್ದೇಶನದ 45, ಹೇಮಂತ್ ರಾವ್ ನಿರ್ದೇಶನದ ಭೈರವನ‌ ಕೊನೆ ಪಾಠ, ತಮಿಳು ನಿರ್ದೇಶಕನ‌ ಜೊತೆ ಹೆಸರಿಡದ ಚಿತ್ರ ಹೀಗೆ 8 ರಿಂದ 10 ಸಿನಿಮಾಗಳು ಇವೆ. ಇಷ್ಟು ಸಿನಿಮಾಗಳಲ್ಲಿ ಸದ್ಯ ಶಿವರಾಜ್​ಕುಮಾರ್ ಭೈರತಿ ರಣಗಲ್ ಹಾಗು 45 ಸಿನಿಮಾದ ಬಹುತೇಕ ಕೆಲಸಗಳನ್ನು ಮುಗಿಸಿ ಆರೋಗ್ಯ ಸಮಸ್ಯೆ ಹಿನ್ನೆಲೆ ಅಮೆರಿಕಕ್ಕೆ ತೆರಳುತ್ತಿದ್ದಾರೆ‌. ಇನ್ನು ಶಿವಣ್ಣನ ಆರೋಗ್ಯ ಸಮಸ್ಯೆಗೆ ಕಳೆದ ವರ್ಷದಿಂದ ಮನೆಯಲ್ಲಿ ಥೆರಪಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಟುಂಬ ಸಮೇತ ಅಮೆರಿಕಕ್ಕೆ ಹೋಗಿ, ಅಲ್ಲಿ ಒಂದು ತಿಂಗಳ ಕಾಲ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ತಮ್ಮ ಪ್ರೀತಿಯ ಶಿವಣ್ಣ ಚಿಕಿತ್ಸೆ ಪಡೆದು ಆದಷ್ಟು ಬೇಗ ಗುಣಮುಖರಾಗಿ ಬೆಂಗಳೂರಿಗೆ ವಾಪಸ್​ ಬರಲಿ ಎನ್ನುವುದು ಅವರ ಅಭಿಮಾನಿಗಳ ಪ್ರಾರ್ಥನೆಯಾಗಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...