spot_img
spot_img

ACTRESS MEGHNA : ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಮೇಘನಾ.. ಹುಡುಗ ಯಾರು?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Actress Meghna:

ಮದುವೆ ಸೀಸನ್ ಬಂದಿದ್ದೇ ಬಂದಿದ್ದು ಸ್ಯಾಂಡಲ್‌ವುಡ್‌ನಲ್ಲಿ ವಿವಾಹ ಸಮಾರಂಭಗಳು ಜೋರಾಗಿ ನಡೆಯುತ್ತಿವೆ. ಸಿನಿಮಾ, ಧಾರಾವಾಹಿಗಳ ಶೂಟಿಂಗ್​ಗಳ ಮಧ್ಯೆ ನಟ, ನಟಿಯರು ವಿವಾಹ ಕಾರ್ಯಕ್ರಮಗಳಿಗೂ ಹೋಗಿ ಬರುತ್ತಿದ್ದಾರೆ. ಹಳದಿ ಶಾಸ್ತ್ರ ಮಾಡಿಕೊಂಡ ಬೆನ್ನಲ್ಲೇ ಸೀತಾರಾಮ ಧಾರಾವಾಹಿಯ ACTRESS MEGHNA ಶಂಕರಪ್ಪ- ಜಯಂತ್‌ ಹೊಸ ಜೀವನಕ್ಕೆ ವೆಲ್​ಕಮ್ ಹೇಳಿದ್ದಾರೆ.

ಸೀತಾರಾಮ ಧಾರಾವಾಹಿಯ ಕ್ಯೂಟ್​ ಬೆಡಗಿ ಪ್ರಿಯಾ ಯಾರಿಗೇ ಗೊತ್ತಿಲ್ಲ. ಬಿಂದಾಸ್​ ಪ್ರಿಯಾ ಅವರು ತರ್ಲೆ, ತಮಾಷೆ ಅಭಿನಯಕ್ಕೆ ವೀಕ್ಷಕರು ಮನಸೋತಿದ್ದಾರೆ.​​ ಪ್ರಿಯಾ ಅಶೋಕ ರೀಲ್ ಮದುವೆ ಅಂದ, ಚಂದವಾಗಿ ಮೂಡಿ ಬಂದಿತ್ತು. ಸೀತಾರಾಮ ಧಾರಾವಾಹಿಯಲ್ಲಿ ಅಶೋಕನ ಮನದರಸಿಯಾಗಿರುವ ACTRESS MEGHNA ಶಂಕರಪ್ಪ ಇದೀಗ ನಿಜ ಜೀವನದಲ್ಲೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ACTRESS MEGHNA ರೀಲ್ ಅಲ್ಲಿ ಮದುವೆಗಿಂತ ರಿಯಾಲ್ ಆಗಿ ಪ್ರಿಯಾ ಅಲಿಯಾಸ್ ಮೇಘನಾ ಶಂಕರಪ್ಪ ಅದ್ಧೂರಿಯಾಗಿ ಮದುವೆ ಆಗಿದ್ದಾರೆ. ಸ್ಯಾಂಡಲ್‌ವುಡ್‌ನ ನಟಿ ರಕ್ಷಿತಾಪ್ರೇಮ್‌ ಸಹೋದರ ರಾಣಾ- ರಕ್ಷಿತಾರನ್ನ ವಿವಾಹ ಆಗಿದ್ದಾರೆ.

ಹಿರಿಯ ನಟಿ ಜಯಮಾಲಾ ಅವರ ಪುತ್ರಿ ಸೌಂದರ್ಯ ಅವರ ಮದುವೆ ಕೂಡ ಸಂಭ್ರಮದಿಂದ ನೆರವೇರಿದೆ. ಇದರ ಬೆನ್ನಲ್ಲೇ ಸೀತಾರಾಮ ಧಾರಾವಾಹಿಯ ನಟಿ ಮೇಘನಾ ಶಂಕರಪ್ಪ ಅವರು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಇನ್ನೇನು ಮೂರ್ನಾಲ್ಕು ದಿನಗಳಲ್ಲಿ ಡಾಲಿ ಧನಂಜಯ್-ಧನ್ಯಾತಾ ಮೈಸೂರಿನಲ್ಲಿ ವಿವಾಹವಾಗಲಿದ್ದಾರೆ. ಜಯಂತ್‌ ಅವರು ಬೆಂಗಳೂರಿನವರೇ ಆಗಿದ್ದಾರೆ.

ಮೇಘನಾ ಅವರು ಸದಾ ಸೋಶಿಯಲ್‌ ಮೀಡಿಯಾದಲ್ಲಿ ಸಖತ್ ಆಕ್ಟಿವ್‌ ಆಗಿರುತ್ತಾರೆ. ಅರಿಶಿಣ ಶಾಸ್ತ್ರ, ಮೆಹೆಂದಿ, ಸಂಗೀತ, ಪ್ರಿ ವೆಡ್ಡಿಂಗ್‌ ಕಾರ್ಯಕ್ರಮದ ವಿಡಿಯೋಗಳನ್ನು ಶೇರ್ ಮಾಡಿದ್ದರು. ಈಗ ವಿವಾಹ ಸಮಾರಂಭದ ವಿಡಿಯೋಗಳನ್ನು ಹಂಚಿಕೊಳ್ಳಬೇಕಿದೆ. ಆದರೂ ಇವರ ಮದುವೆಯ ಕೆಲ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಇಂಜಿನಿಯರ್ ಆಗಿರುವ ಜಯಂತ್‌ ಅವರ ಜೊತೆ ಮೇಘನಾ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಪಕ್ಕಾ ಅರೇಂಜ್‌ ಮ್ಯಾರೇಜ್‌ ಆಗಿರುವ ಈ ಜೋಡಿ ಮದುವೆಯಲ್ಲಿ ಗೋಲ್ಡ್​ ಕಲರ್ ಡ್ರೆಸ್​ನಲ್ಲಿ ಮಿಂಚಿದ್ದಾರೆ. ಎರಡು ಕುಟುಂಬದ ಹಿರಿಯರ ಸಮ್ಮುಖದಲ್ಲಿ ಇಬ್ಬರು ಹಸೆಮಣೆಗೆ ಏರಿದ್ದಾರೆ. ಮದುವೆಗೆ ಸ್ನೇಹಿತರು, ಸಂಬಂಧಿಗಳು, ಕಿರುತೆರೆಯ ನಟ, ನಟಿಯರು ಆಗಮಿಸಿ ಶುಭ ಹಾರೈಸಿದ್ದಾರೆ.

ಇದನ್ನು ಓದಿರಿ : PlayStation Apologises For Online Network Outage, Offers 5 Days Plus Extension: Step To Fix The Issue

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...