spot_img
spot_img

ದೆಹಲಿಯಲ್ಲಿ ವಾಯುಮಾಲಿನ್ಯ ‘ತೀವ್ರ ಕಳಪೆ’ ಮಟ್ಟದಲ್ಲೇ ಮುಂದುವರಿಕೆ

spot_img
spot_img

Share post:

ನವದೆಹಲಿ: ದೆಹಲಿಯಲ್ಲಿ ಕಳಪೆ ವಾಯುಮಾಲಿನ್ಯದ ಸ್ಥಿತಿ ಮುಂದುವರಿದಿದ್ದು, ಸತತ ಆರನೇ ದಿನವೂ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಅತ್ಯಂತ ಕಳಪೆ ವಿಭಾಗದಲ್ಲಿದೆ. ಶುಕ್ರವಾರ ಬೆಳಗ್ಗೆ 7 ಗಂಟೆಗೆ ರಾಜಧಾನಿಯ ಸರಾಸರಿ ಎಕ್ಯೂಐ 332 ದಾಖಲಾಗಿದ್ದು, ಕೆಲ ಪ್ರದೇಶಗಳಲ್ಲಿ ಮಾಲಿನ್ಯವು ‘ತೀವ್ರ ಕಳಪೆ’ ಮಿತಿಯಾದ 400 ಅನ್ನು ದಾಟಿದೆ. ದೆಹಲಿಯಲ್ಲಿನ ವಾಯುಮಾಲಿನ್ಯವು ತೀರಾ ಕಳಪೆ ಮಟ್ಟದಲ್ಲಿ ಮುಂದುವರೆದಿದೆ.

ರಾಷ್ಟ್ರೀಯ ರಾಜಧಾನಿ ಪ್ರದೇಶದ (ಎನ್​ಸಿಆರ್) ಇತರ ನಗರಗಳಲ್ಲಿಯೂ ಗಾಳಿಯ ಗುಣಮಟ್ಟ ಹದಗೆಟ್ಟಿದೆ. ಅಧಿಕೃತ ಮಾಹಿತಿಯ ಪ್ರಕಾರ, ಗ್ರೇಟರ್ ನೋಯ್ಡಾದಲ್ಲಿ 272, ಗಾಜಿಯಾಬಾದ್​ನಲ್ಲಿ 258, ನೋಯ್ಡಾದಲ್ಲಿ 249, ಗುರುಗ್ರಾಮ್​​ನಲ್ಲಿ 258 ಮತ್ತು ಫರಿದಾಬಾದ್​ನಲ್ಲಿ 166 ಎಕ್ಯೂಐ ಇತ್ತು. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ, 0 ರಿಂದ 50 ರ ನಡುವಿನ ಎಕ್ಯೂಐ ಅನ್ನು ‘ಉತ್ತಮ’, 51-100 ‘ತೃಪ್ತಿಕರ’, 101-200 ‘ಮಧ್ಯಮ’, 201-300 ‘ಕಳಪೆ’, 301-400 ‘ತುಂಬಾ ಕಳಪೆ’, 401-450 ‘ತೀವ್ರ ಕಳಪೆ’ ಮತ್ತು 450 ಕ್ಕಿಂತ ಹೆಚ್ಚು ‘ತೀವ್ರ ಪ್ಲಸ್ ಕಳಪೆ’ ಎಂದು ಪರಿಗಣಿಸಲಾಗುತ್ತದೆ.

ಈ ಅಂಕಿಅಂಶಗಳು ಅನಾರೋಗ್ಯಕರ ಮಾಲಿನ್ಯದ ಮಟ್ಟವನ್ನು ಸೂಚಿಸುತ್ತಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಲಕ್ಷಾಂತರ ಜನರ ಮೇಲೆ ವಾಯುಮಾಲಿನ್ಯದ ದುಷ್ಪರಿಣಾಮ ಉಂಟಾಗುತ್ತಿದೆ.

ದೆಹಲಿಯಲ್ಲಿ ಗುರುವಾರ ರಾತ್ರಿ ಋತುವಿನ ಅತ್ಯಧಿಕ ಚಳಿಯ ವಾತಾವರಣ ದಾಖಲಾಗಿದೆ. ಗುರುವಾರ ರಾತ್ರಿ ಕನಿಷ್ಠ ತಾಪಮಾನವು 10.1 ಡಿಗ್ರಿ ಸೆಲ್ಸಿಯಸ್​ಗೆ ಇಳಿದಿತ್ತು ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ವರದಿ ಮಾಡಿದೆ.

ಭೌತಿಕ ತರಗತಿಗಳನ್ನು ಮುಂದುವರಿಸಲು ಅನುಮತಿ ನೀಡಿರುವ ನ್ಯಾಯಾಲಯ, ಎಕ್ಯೂಐ ಮಟ್ಟದಲ್ಲಿ ಸ್ಥಿರವಾದ ಇಳಿಕೆಯಾಗುವವರೆಗೆ ಜಿಆರ್​ಎಪಿ -3 ಅಥವಾ ಜಿಆರ್​ಎಪಿ -2 ಅಡಿಯಲ್ಲಿ ನಿರ್ಬಂಧಗಳನ್ನು ಸಡಿಲಿಸಲು ನ್ಯಾಯಾಲಯ ನಿರಾಕರಿಸಿತು.

ಕಟ್ಟಡ ನಿರ್ಮಾಣ ಕಾಮಗಾರಿಗಳು ಸ್ಥಗಿತಗೊಂಡಿದ್ದರಿಂದ ಬಾಧಿತರಾಗುವ ಕಾರ್ಮಿಕರಿಗೆ ಕಾರ್ಮಿಕ ಸೆಸ್ ಮೂಲಕ ಪರಿಹಾರ ನೀಡುವಂತೆ ಅದು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಪ್ರಸ್ತುತ ವಾಯುಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿರುವ ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳ ನಿರ್ಮಾಣ ಚಟುವಟಿಕೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ.

ಅಪಾಯಕಾರಿ ಮಾಲಿನ್ಯ ಮಟ್ಟವನ್ನು ನಿಭಾಯಿಸಲು, ಶಾಲೆಗಳಿಗೆ ಸಂಬಂಧಿಸಿದವುಗಳನ್ನು ಹೊರತುಪಡಿಸಿ ಎಲ್ಲಾ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ (ಜಿಆರ್​ಎಪಿ) -4 ಕ್ರಮಗಳು ಡಿಸೆಂಬರ್ 2 ರಂದು ಮುಂದಿನ ವಿಚಾರಣೆಯವರೆಗೆ ಜಾರಿಯಲ್ಲಿರುತ್ತವೆ ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ನ್ಯಾಯಾಲಯವು ಕಟ್ಟುನಿಟ್ಟಾದ ಜಾರಿಯ ಅಗತ್ಯವನ್ನು ಒತ್ತಿಹೇಳಿದ್ದು, ಜಿಆರ್​ಎಪಿ -4 ಮಾರ್ಗಸೂಚಿಗಳ ಅನುಷ್ಠಾನದಲ್ಲಿ ಲೋಪಗಳಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ. ಇಂಥ ವೈಫಲ್ಯಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅದು ಎಚ್ಚರಿಸಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...