spot_img
spot_img

ಕುರಿ ಮಾಂಸದ ಹೆಸರಲ್ಲಿ ನಾಯಿ ಮಾಂಸ ಸಾಗಾಟ ಆರೋಪ: ಹಿಂದುಪರ ಕಾರ್ಯಕರ್ತರು ಆಕ್ರೋಶ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ರೈಲ್ವೆ ನಿಲ್ದಾಣಕ್ಕೆ ಪ್ರತಿನಿತ್ಯ ಸಾವಿರಾರು ಕೆಜಿ ನಾಯಿ ಮಾಂಸ ಬರುತ್ತಿದ್ದು ಅದನ್ನು ಕುರಿ ಮಾಂಸದಲ್ಲಿ ಬೆರೆಸಲಾಗುತ್ತಿದೆ. ಇದನ್ನ ನಗರದಲ್ಲಿರುವ ಬಹುತೇಕ ಹೋಟೆಲ್​ಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಸಂಬಂಧ ಶುಕ್ರವಾರ (ಜೂನ್ 26) ಸಂಜೆ ಹಿಂದೂ ಸಂಘಟನೆಯ ಕಾರ್ಯರ್ತರು ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಕ್ರಾಂತಿವೀರ ಸಂಗೊಳ್ಳಿ ರೈಲು ನಿಲ್ದಾಣದಲ್ಲಿ ಜೈಪುರದಿಂದ ಬಂದ ರೈಲಿನ ಮೇಲೆ ದಾಳಿ ನಡೆಸಿ ಮಾಂಸ ತುಂಬಿದ್ದ ಚೀಲಗಳನ್ನು ತೆಗೆದು ಆಕ್ರೋಶ ಹೊರಹಾಕಿದರು.

ಇದೇ ವೇಳೆ ಸ್ಥಳಕ್ಕಾಗಮಿಸಿದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಇದು ನಾಯಿ ಮಂಸವಲ್ಲ, ಕುರಿ ಮಾಂಸ ಎಂದು ಹೇಳಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು ಮಾಂಸದ ಚೀಲಗಳು ಹಾಗೂ ಕೆಲವರನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಮಾತನಾಡಿರುವ ಪುನೀತ್ ಕೆರೆಹಳ್ಳಿ, ಜೈಪುರದಿಂದ ಮಟನ್ ಅಂತ ಹೇಳಿ ಬೇರೆ ಮಾಂಸ ತಂದಿದ್ದಾರೆ. ಬೇರೆ ಮಾಂಸದ ಜೊತೆ ನಾಯಿ ಮಾಂಸವನ್ನೂ ತಂದಿದ್ದಾರೆ. ಇದು ರಸಲ್ ಮಾರ್ಕೆಟ್‌ಗೆ ಹೋಗುತ್ತದೆ. ಮಾಂಸ ತಂದು ಅದಕ್ಕೆ ಮೀನು ಎಂದು ಏಕೆ ಬೋರ್ಡ್ ಹಾಕಿದ್ದಾರೆ. ನಾಯಿ ಮಾಂಸವೇ ಇರಬೇಕು ಅನ್ನೋ ಅನುಮಾನವಿದೆ. ಬಿಬಿಎಂಪಿ ಅಧಿಕಾರಿಗಳು ಬರಬೇಕು. ಇಲ್ಲೇ ಮಾಂಸ ಸೀಜ್ ಮಾಡಬೇಕು. ಯಾವ ಮಾಂಸ ಅಂತಾ ಗೊತ್ತಾಗಬೇಕು. ಕನಿಷ್ಠ 4 ದಿನದ ಹಿಂದೆ ಕಟ್ ಮಾಡಿರುವ ಮಾಂಸವಿದು. ಇದನ್ನ ಐಸ್ ಬಾಕ್ಸ್‌ನಲ್ಲಿ ತಂದಿರುವುದಕ್ಕೆ ಅನುಮತಿ ಇದೆಯಾ ಇದರ ಬಗ್ಗೆ ಅನುಮಾನ ಇದೆ ಎಂದು ಆರೋಪಿಸಿದ್ದಾರೆ.

ಈ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್, ಪುನೀತ್ ಕೆರೆಹಳ್ಳಿ ರೋಲ್ ಕಾಲ್ ಮಾಡಲು ಬಂದಿದ್ದ. ರೋಲ್ ಕಾಲ್‌ಗೆ ಅವಕಾಶ ಕೊಟ್ಟಿಲ್ಲ ಎಂದು ಕುರಿ ಮಾಂಸದ ಜತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ್ದಾನೆ. ಇದು ಅಕ್ರಮ ಬ್ಯುಸಿನೆಸ್ ಅಲ್ಲ. ನಮ್ಮ ಬಳಿ ಎಲ್ಲ ಸರ್ಟಿಫಿಕೇಟ್ ಇದೆ. ಎಲ್ಲ ಬಾಕ್ಸ್​ಗಳಲ್ಲಿ ಕುರಿ ಮಾಂಸ ಮಾತ್ರವಿದೆ. ನಾವು 12 ವರ್ಷದಿಂದ ಈ ಬ್ಯುಸಿನೆಸ್ ಮಾಡುತ್ತಿದ್ದೇವೆ. ಅವರೇ ಬಾಕ್ಸ್ ತೆರೆದಿದ್ದಾರೆ, ಕುರಿ ಮಾಂಸ ನೋಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿರಿ: Paris Olympics 2024: ಸ್ಪರ್ಧೆಯಲ್ಲಿ ಯಾರು ಕಣಕ್ಕೆ?

WhatsApp Group Join Now
Telegram Group Join Now
Instagram Account Follow Now
spot_img

Related articles

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...

MATSYA 6000 : ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಯಶಸ್ವಿ

Matsya 6000: ದೇಶದ ನಾಲ್ಕನೇ ತಲೆಮಾರಿನ ಆಳ ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಪೂರ್ಣಗೊಂಡಿದ್ದು, 2025ರ ಅಂತ್ಯದ ವೇಳೆಗೆ 500 ಮೀಟರ್ ಪ್ರಯೋಗ ನಡೆಯಲಿದೆ. ಇದು...