spot_img
spot_img

ವಯನಾಡಿನ ದುರಂತಕ್ಕೆ ಮಿಡಿದ ಅಲ್ಲು ಅರ್ಜುನ್- ಸಂತ್ರಸ್ತರಿಗೆ 25 ಲಕ್ಷ ದೇಣಿಗೆ ನೀಡಿದ ನಟ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕೇರಳದ ವಯನಾಡಿನಲ್ಲಿ (Wayanad Landslides) ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸತ್ತವರ ಸಂಖ್ಯೆ ಈಗ 300 ದಾಟಿದೆ. ಈ ದುರಂತದಲ್ಲಿ ಮನೆಯನ್ನು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ಸಂತ್ರಸ್ತರ ಸಹಾಯಕ್ಕೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಮುಂದಾಗಿದ್ದಾರೆ.

ವಯನಾಡು ಭೂಕುಸಿತ ದುರಂತದ ನಿಮಿತ್ತ ಸಂಕಷ್ಟದಲ್ಲಿರುವವರಿಗೆ ಈಗ ಅಲ್ಲು ಅರ್ಜುನ್ 25 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಕುರಿತು ಸ್ವತಃ ನಟ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹೊಸ ಅಡ್ವೆಂಚರ್ ಮಾದರಿಯನ್ನು ಪರಿಚಯಿಸಿದ ಜಾವ ಯೆಜ್ಡಿ! ಇಷ್ಟೊಂದು ಕಡಿಮೆ ಬೆಲೆಗೆ ಸಿಗುತ್ತಿದ್ದೆಯೆ.??

ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಕೇರಳದ ಜನರು ನನಗೆ ಯಾವಾಗಲೂ ತುಂಬಾ ಪ್ರೀತಿಯನ್ನು ನೀಡಿದ್ದಾರೆ. ಹಾಗಾಗಿ ಈ ಸಮಯದಲ್ಲಿ ಕೇರಳ ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂ. ದೇಣಿಗೆ ನೀಡಲು ಬಯಸುತ್ತೇನೆ. ನಿಮ್ಮೆಲ್ಲರ ಸುರಕ್ಷೆ ಮತ್ತು ಶಕ್ತಿಗಾಗಿ ಪ್ರಾರ್ಥಿಸುತ್ತೇನೆ ಎಂದು ಅಲ್ಲು ಅರ್ಜುನ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈಗ ನಟನ ನಡೆಗೆ ಅಭಿಮಾನಿಗಳಿಂದ ಶ್ಲಾಘನೆ ವ್ಯಕ್ತವಾಗಿದೆ.

ಅಂದಹಾಗೆ, ವಯನಾಡು ಭೂಕುಸಿತ ದುರಂತ ಹಿನ್ನೆಲೆ ಈಗಾಗಲೇ ರಶ್ಮಿಕಾ ಮಂದಣ್ಣ (Rashmika Mandanna), ಸೂರ್ಯ ದಂಪತಿ, ಮಮ್ಮುಟ್ಟಿ, ಚಿಯಾನ್ ವಿಕ್ರಮ್, ದುಲ್ಕರ್ ಸಲ್ಮಾನ್ ಸೇರಿದಂತೆ ಅನೇಕರು ಕೇರಳದ ಸಿಎಂ ಫಂಡ್‌ಗೆ ಲಕ್ಷ ಲಕ್ಷ ದೇಣಿಗೆ ನೀಡುವ ಮೂಲಕ ಸಹಾಯ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...