spot_img
spot_img

ವಿರಾಜಮಾನಳಾದ ಚಾಮುಂಡೇಶ್ವರಿ ಕ್ಯಾಪ್ಟನ್ ಅಭಿಮನ್ಯು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮೈಸೂರು: ಮೈಸೂರು ದಸರಾ (Mysore Dasara) ಅಂಗವಾಗಿ ಶನಿವಾರ ವಿಜಯದಶಮಿಯಂದು (Vijaya Dashami) ಅದ್ಧೂರಿ ಜಂಬೂ ಸವಾರಿ ನಡೆಯಿತು. ಅಕ್ಟೋಬರ್ 3 ರಂದು ದಸರಾ (Dasara) ಉದ್ಘಾಟನೆಯಾದಾಗಿನಿಂದ ಮೈಸೂರು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿದೆ. ಮೈಸೂರಿನ ಜಂಬೂಸವಾರಿಯಲ್ಲಿ 750ಕೆಜಿಯ ಚಿನ್ನದ ಅಂಬಾರಿಯನ್ನು (Ambari) ಹೊತ್ತು ಅಭಿಮನ್ಯು (Abhimanyu) ಆನೆ ರಾಜಬೀದಿಗಳಲ್ಲಿ ರಾಜಗಾಂಭಿರ್ಯದಿಂದ ಸಾಗಿದನು. ಈ ಉತ್ಸವವನ್ನು ಸಾವಿರಾರು ಜನರು ಕಣ್ಣುತುಂಬಿಸಿಕೊಂಡರು.

ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮಧ್ಯಾಹ್ನ 1:55ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿದರು.

ವಿಶ್ವವಿಖ್ಯಾತ ಜಂಬೂಸವಾರಿಯ ಸಲುವಾಗಿ ಅಭಿಮನ್ಯು ಆನೆ 750 ಕೆ.ಜಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜಬೀದಿಗಳಲ್ಲಿ ಹೆಜ್ಜೆ ಹಾಕಿದನು. ಈ ಐತಿಹಾಸಿಕ ಕ್ಷಣವನ್ನು ದೇಶ- ವಿದೇಶ ಮತ್ತು ನೆರೆಹೊರೆಯ ಜಿಲ್ಲೆಯ ಲಕ್ಷಾಂತರ ಮಂದಿ ಕಣ್ಣುಂಬಿಕೊಳ್ಳಲು ರಾಜ ಬೀದಿಗಳಲ್ಲಿ ಕಿಕ್ಕಿರಿದು ಸೇರಿದ್ದರು.

ಈ ಜಂಬೂಸವಾರಿ ವೀಕ್ಷಣೆಗೆ ಅರಮನೆಯ ಆವರಣದಲ್ಲಿ 40 ಸಾವಿರ ಆಸನ ವ್ಯವಸ್ಥೆ

ಮಾಡಲಾಗಿತ್ತು. ಆದರೂ ಅರಮನೆಯ ಬಳಿಕ ಚಿಕ್ಕ ಗಡಿಯಾರ, ಕೆ.ಆರ್.ಆಸ್ಪತ್ರೆ ಹಾಗೂ ಬನ್ನಿಮಂಟಪದ ರಸ್ತೆಗಳಲ್ಲಿ ಜನ ದಟ್ಟಣೆ ಹೆಚ್ಚಾಗಿದೆ.

ಅಷ್ಟೇ ಅಲ್ಲದೇ ಜಂಬೂಸವಾರಿ ಸಾಗುವ ಸಮಯದಲ್ಲಿ ಸಾರ್ವಜನಿಕರು ಡಾ.ರಾಜ್‌ಕುಮಾರ್ ಪಾರ್ಕ್‌ನ ಮರಗಳ ಮೇಲೆ ಹಾಗೂ ಕಟ್ಟಡಗಳ ಮೇಲೆ ನಿಂತು ವೀಕ್ಷಿಸಿದರು.

ಬೆಳಗ್ಗೆ 8 ಗಂಟೆಗೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಮೂಲಕ ಅರಮನೆಗೆ ಆಗಮಿಸಲಿದೆ. 10.15ಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉತ್ತರ ಪೂಜೆ ನೆರವೇರಿಸಿದರು. ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆ ಸವಾರಿ ತೊಟ್ಟಿಗೆ ಆಗಮಿಸಿತು, ಬಳಿಕ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ 10.45ರಿಂದ ಜಟ್ಟಿ ಕಾಳಗ ನಡೆಯಿತು.

11.20 ರಿಂದ 11.45ರವರೆಗೆ ಅರಮನೆ ಆವರಣದ ಭುವನೇಶ್ವರಿ ದೇಗುಲಕ್ಕೆ ವಿಜಯಯಾತ್ರೆ ಹೊರಟಿತು. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬನ್ನಿಪೂಜೆ ನೆರವೇರಿಸಿದರು. ನಂತರ ಅರಮನೆಗೆ ಆಗಮಿಸಿ ಕಂಕಣ ವಿಸರ್ಜನೆ ಮಾಡಿದ ಬಳಿಕ, ಮಧ್ಯಾಹ್ನ ಶುಭ ಮಕರ‌ ಲಗ್ನದಲ್ಲಿ 1.41ರಿಂದ 2.10ರ ನಡುವೆ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಲಾಯಿತು.

ಸಂಜೆ ಕುಂಭ ಲಗ್ನದಲ್ಲಿ 4 ರಿಂದ 4.30ರ ನಡುವೆ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದರು. ಅಂಬಾರಿ ಒಳಗಿನ ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಾಯಿತು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...