spot_img
spot_img

ANDHRA PRADESH DELEGATION VISIT: ಆಂಧ್ರದಲ್ಲಿ ‘ಶಕ್ತಿ ಯೋಜನೆ’

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ANDHRA PRADESH ದಲ್ಲಿ ಮಹಿಳೆಯರಿಗೆ ಬಸ್ ಉಚಿತ ಪ್ರಯಾಣ ಯೋಜನೆ ಜಾರಿಗೆ ತರುವ ಸಂಬಂಧ ನಿಯೋಗವು ಶಕ್ತಿ ಯೋಜನೆಗಾಗಿ ಮೀಸಲಿರಿಸಿದ ವೆಚ್ಚ ಹಾಗೂ ಬಳಕೆ, ಸಾರಿಗೆ ವ್ಯವಸ್ಥೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ತಿಳಿದುಕೊಂಡಿತು.

ರಾಜ್ಯದಲ್ಲಿ ಜನಪ್ರಿಯಗೊಂಡಿರುವ ‘ಶಕ್ತಿ ಯೋಜನೆ’ ಜಾರಿ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ANDHRA PRADESH ದ ಗೃಹ ಸಚಿವೆ ಅನಿತಾ ಹಾಗೂ ಸಾರಿಗೆ ಸಚಿವ ರಾಮ್ ಪ್ರಸಾದ್ ರೆಡ್ಡಿ ಅವರ ನೇತೃತ್ವದ ನಿಯೋಗವು ಶುಕ್ರವಾರ ಇಲ್ಲಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿತು.ಇದಕ್ಕೂ ಮುನ್ನ ನಿಯೋಗ ಶಕ್ತಿ ಯೋಜನೆ ಬಗ್ಗೆ ಅರಿಯಲು ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರ ಪ್ರತಿಕ್ರಿಯೆ ಪಡೆಯಿತು.

ಯೋಜನೆಯಿಂದಾಗಿ ಎಷ್ಟು ಉಪಯೋಗವಾಗಿದೆ? ಹೇಗೆ ಉಪಯೋಗವಾಗಿದೆ? ಎಂಬುದರ ಪ್ರಶ್ನೆಗೆ ಮಹಿಳಾ ಪ್ರಯಾಣಿಕರೊಬ್ಬರು ಉತ್ತರಿಸಿ, ಶಕ್ತಿ ಯೋಜನೆಯಿಂದಾಗಿ ನಮಗೆ ಅನುಕೂಲವಾಗಿದೆ. ಪ್ರತಿತಿಂಗಳು 1,200 ರೂಪಾಯಿ ಬಸ್ ಪಾಸ್​​ಗೆ ತಗುಲಿತ್ತು. ಇದೀಗ ಉಚಿತ ಬಸ್ ಪ್ರಯಾಣದಿಂದಾಗಿ ನಮಗೆ ಅನುಕೂಲವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

Implementation of scheme in Andhra within next two months:ಇಲ್ಲಿನ ಸರ್ಕಾರ ಅನುಸರಿಸಿದ ಕ್ರಮಗಳ ಬಗ್ಗೆ ತಿಳಿದುಕೊಂಡಿದ್ದೇವೆ. ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ರೀತಿ ಮಹಿಳೆಯರಿಗೆ ಬಸ್ ಉಚಿತ ಪ್ರಯಾಣ ಯೋಜನೆ ಜಾರಿ ತಂದಿರುವ ರಾಜ್ಯಗಳಲ್ಲಿ ಭೇಟಿ ನೀಡಿ ಸಾಧಕ-ಭಾದಕಗಳ ಬಗ್ಗೆ ತಿಳಿದುಕೊಂಡು ಇನ್ನೆರಡು ತಿಂಗಳೊಳಗಾಗಿANDHRA PRADESH ದಲ್ಲಿ ಯೋಜನೆಯನ್ನು ಜಾರಿ ತರುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆ ಬಳಿಕ ANDHRA PRADESH ದ ನಿಯೋಗದೊಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕೆಎಸ್ಆರ್​​ಟಿಸಿ ಅಧಿಕಾರಿಗಳು ಸಭೆ ನಡೆಸಿ ಕೂಲಂಕಷ ಮಾಹಿತಿ ನೀಡಿದರು. ಈ ವೇಳೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಆಂಧ್ರ ಸಾರಿಗೆ ರಾಮ್ ಪ್ರಸಾದ್ ರೆಡ್ಡಿ, ”ಕರ್ನಾಟಕ ರಾಜ್ಯ ಸಾರಿಗೆ ನಿಗಮವು ಶಕ್ತಿ ಯೋಜನೆ ಅನುಷ್ಠಾನದ ಬಗ್ಗೆ ತಿಳಿದುಕೊಳ್ಳಲು ರಾಜ್ಯಕ್ಕೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡಿದ್ದೇವೆ.

Ramalingareddy’s advice to the delegation:ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ”ಶಕ್ತಿ ಯೋಜನೆ ಜಾರಿಯ ಸಾಧಕ-ಬಾಧಕಗಳ ಬಗ್ಗೆ ತಿಳಿಸಲಾಗಿದೆ. ರಾಜ್ಯದಲ್ಲಿ ಆಧಾರ್ ಕಾರ್ಡ್ ತೋರಿಸಿ ಪ್ರಯಾಣದಂತೆ ANDHRA PRADESH ದಲ್ಲಿಯೂ ಪ್ರತ್ಯೇಕ ಸ್ಮಾರ್ಟ್ ಕಾಡ್ ವಿತರಿಸಬಹುದಾಗಿದೆ.

ಯೋಜನೆ ಜಾರಿ ಬಂದರೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್​​ನಲ್ಲಿ ಜನರು ಸಂಚರಿಸುತ್ತಾರೆ. ಹೀಗಾಗಿ, ಯೋಜನೆ ಜಾರಿಗೂ ಮುನ್ನ ಬಸ್​​ಗಳ ಸಂಖ್ಯೆಯನ್ನೂ ಹೆಚ್ಚಿಸಬೇಕಾಗುತ್ತದೆ. ಹಳೆ ಬಸ್​​ಗಳ ನವೀಕರಣ ಹಾಗೂ ನಿರ್ವಹಣೆ ಬಗ್ಗೆ ಗಮನಕೊಡುವಂತೆ ನಿಯೋಗಕ್ಕೆ ಸಲಹೆ ನೀಡಿದ್ದೇನೆ” ಎಂದರು.ANDHRA PRADESH ದಲ್ಲಿ ಮಹಿಳೆಯರಿಗೆ ಬಸ್ ಉಚಿತ ಪ್ರಯಾಣ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ರಾಜ್ಯಕ್ಕೆ ಅಲ್ಲಿನ ಗೃಹ ಸಚಿವರು ಹಾಗೂ ಸಾರಿಗೆ ಸಚಿವರ ನೇತೃತ್ವದ ನಿಯೋಗವು ಭೇಟಿ ನೀಡಿತು.

 

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...

MATSYA 6000 : ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಯಶಸ್ವಿ

Matsya 6000: ದೇಶದ ನಾಲ್ಕನೇ ತಲೆಮಾರಿನ ಆಳ ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಪೂರ್ಣಗೊಂಡಿದ್ದು, 2025ರ ಅಂತ್ಯದ ವೇಳೆಗೆ 500 ಮೀಟರ್ ಪ್ರಯೋಗ ನಡೆಯಲಿದೆ. ಇದು...