spot_img
spot_img

ANNA HAZARE:ಕೇಜ್ರಿವಾಲ್ ಸಮಾಜದ ಎದುರು ಮಾದರಿಯಾಗಿರಬೇಕಿತ್ತು

spot_img
spot_img

Share post:

 

Mumbai, Maharashtra News:

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೇಖಾ ಗುಪ್ತ ಅವರಿಗೆ ಶುಭಾಶಯ ತಿಳಿಸಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇಜ್ರಿವಾಲ್ ಉತ್ತಮ ಕೆಲಸಗಾರನಾದರೂ, ಅವರ ಕೆಲವು ತಪ್ಪು ನಿರ್ಧಾರಗಳಿಗೆ ಜನ ಅವರಿಗೆ ತಕ್ಕ ಪಾಠ ಕಲಿಸಬೇಕಾಯಿತು ಎಂದಿದ್ದಾರೆ.

ಕೇಜ್ರಿವಾಲ್ ಒಳ್ಳೆಯ ಕೆಲಸಗಾರ. ಆದರೆ, ಮದ್ಯದಂಗಡಿಗಳಿಗೆ ಪರವಾನಗಿಗಳನ್ನು ನೀಡಲು ಪ್ರಾರಂಭಿಸಿದ್ದರಿಂದ ಜನರು ಅವರಿಗೆ ಪಾಠ ಕಲಿಸಿದರು ಎಂದು ಸಾಮಾಜಿಕ ಹೋರಾಟಗಾರ ANNA HAZARE ಹೇಳಿದ್ದಾರೆ.ಕೇಜ್ರಿವಾಲ್ ಒಳ್ಳೆಯ ಕೆಲಸಗಾರ. ಆದರೆ, ಮದ್ಯದಂಗಡಿಗಳಿಗೆ ಪರವಾನಗಿಗಳನ್ನು ನೀಡಲು ಪ್ರಾರಂಭಿಸಿದ್ದರಿಂದ ಜನರು ಅವರಿಗೆ ಪಾಠ ಕಲಿಸಿದರು ಎಂದು ಸಾಮಾಜಿಕ ಹೋರಾಟಗಾರ ANNA HAZARE ಹೇಳಿದ್ದಾರೆ.

Misguided by anti-people decisions:ಇತ್ತೀಚೆಗೆಷ್ಟೇ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಅಧಿಕ ಸ್ಥಾನ ಗಳಿಸುವ ಮೂಲಕ 27 ವರ್ಷಗಳ ಬಳಿಕ ದೆಹಲಿಯ ಅಧಿಕಾರದ ಗದ್ದುಗೆ ಹಿಡಿದಿದೆ. ಫಲಿತಾಂಶದ ದಿನವೂ ಆಪ್ ಪಕ್ಷದ​ ಬಗ್ಗೆ ಬೇಸರ ವ್ಯಕ್ತಪಡಿಸಿದ್ದ ANNA HAZARE ಎಎಪಿಯ ಕಳಪೆ ಪ್ರದರ್ಶನಕ್ಕೆ ಅದರ ನಾಯಕತ್ವ ಮತ್ತು ಭ್ರಷ್ಟಾಚಾರ ಹಗರಣಗಳಲ್ಲಿ ಭಾಗಿಯಾಗಿದ್ದೇ ಕಾರಣ ಎಂದು ಹೇಳಿದ್ದರು.

ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಸಮಾಜದ ಮುಂದೆ ಒಂದು ಮಾದರಿಯಾಗಿರಬೇಕಿತ್ತು. ಆದರೆ, ಕೆಲವು ಜನ ವಿರೋಧಿ ನಿರ್ಧಾರಗಳನ್ನು ಪ್ರಕಟಿಸುವ ಮೂಲಕ ದಾರಿ ತಪ್ಪಿದರು. ಅವರು (ಕೇಜ್ರಿವಾಲ್) ಉತ್ತಮ ಕೆಲಸ ಮಾಡುತ್ತಿದ್ದರಿಂದ ನಾನು ಅವರ ವಿರುದ್ಧ ಏನನ್ನೂ ಮಾತನಾಡಲಿಲ್ಲ. ಆದರೆ, ನಂತರ ಅವರು ನಿಧಾನವಾಗಿ ಮದ್ಯದಂಗಡಿಗಳತ್ತ ಗಮನ ಕೊಡಲು ಶುರು ಮಾಡಿದರು. ಮದ್ಯದಂಗಡಿಗಳಿಗೆ ಪರವಾನಗಿಗಳನ್ನು ನೀಡಲು ಪ್ರಾರಂಭಿಸಿದರು.

ಇದು ನನಗೂ ಬೇಸರ ತರಿಸಿತ್ತು. ಅಬಕಾರಿ ನೀತಿಯಿಂದ ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂದು ANNA HAZARE ಹೇಳಿದರು.ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ಖ್ಯಾತಿ ಗಳಿಸಿ, ಸತತ ಮೂರು ಅವಧಿಯಿಂದ ಅಧಿಕಾರದಲ್ಲಿ ಶೀಲಾ ದೀಕ್ಷಿತ್​ ಆಡಳಿತವನ್ನು ಕೊನೆಗೊಳಿಸಿದ ಹೆಗ್ಗಳಿಕೆ ಕೇಜ್ರಿವಾಲ್​ ಅವರದ್ದು, ಮೊದಲ ಬಾರಿಯ ಎಲೆಕ್ಷನ್​​​ ನಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ವಿಫಲರಾದರೂ ಎರಡನೇ ಚುನಾವಣೆಯಲ್ಲಿ 70 ಸ್ಥಾನಗಳಲ್ಲಿ 67 ಸ್ಥಾನಗಳನ್ನು ಗೆಲ್ಲುವ ಮೂಲಕ ಕೇಜ್ರಿವಾಲ್​ ನೇತೃತ್ವದ ಆಪ್​​​​ ಇತಿಹಾಸ ಬರೆದಿತ್ತು.

ಎಎಪಿಯ ನಾಯಕ ಕೇಜ್ರಿವಾಲ್, ಭ್ರಷ್ಟಾಚಾರ ವಿರೋಧಿ ಚಳವಳಿಯಲ್ಲಿ ANNA HAZARE ಅವರ ಸಹವರ್ತಿಯಾಗಿದ್ದರು. ಆಗಿನ ಯುಪಿಎ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲಿ ANNA HAZAREಅವರ ಮೌತ್​ ಪೀಸ್​ ಆಗಿದ್ದ ಕೇಜ್ರಿವಾಲ್​, ಬಳಿಕ ತಮ್ಮದೇ ಸ್ವಂತ ಪಕ್ಷ ಕಟ್ಟಿ ಮುನ್ನೆಲೆಗೆ ಬಂದವರು.

 

ಇದನ್ನು ಓದಿರಿ :7 Drop Dead Gorgeous Wonders That Define Madhya Pradesh, The Tiger State Of India

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...