spot_img
spot_img

ದೆಹಲಿ ವಾಯುಮಾಲಿನ್ಯ ತಡೆಗೆ ಕೃತಕ ಮಳೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕೃತಕ ಮಳೆ ತರಿಸಲು ಮೋಡ ಬಿತ್ತನೆಗೆ ತುರ್ತು ಅನುಮತಿ ನೀಡುವಂತೆ ಕೋರಿ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರಿಗೆ ನಾಲ್ಕು ಬಾರಿ ಪತ್ರ ಬರೆದಿರುವುದಾಗಿ ದಿಲ್ಲಿ ಪರಿಸರ ಸಚಿವ ಗೋಪಾಲ್ ರೈ ಹೇಳಿದ್ದಾರೆ.

ಕೃತಕ ಮಳೆಯಿಂದ ದೆಹಲಿಯಲ್ಲಿನ ತೀವ್ರ ವಾಯುಮಾಲಿನ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮೋಡ ಬಿತ್ತನೆಗೆ ಅನುಮತಿ ಕೋರಿರುವುದಾಗಿ ಅವರು ಹೇಳಿದ್ದಾರೆ.

ದೆಹಲಿಯ ಹದಗೆಡುತ್ತಿರುವ ಗಾಳಿಯ ಗುಣಮಟ್ಟ ನಿರಂತರವಾಗಿ 450 ಕ್ಕಿಂತ ಹೆಚ್ಚಿನ ಎಕ್ಯೂಐನಲ್ಲಿ ಮುಂದುವರೆದಿದ್ದು, ಗಾಳಿಯ ಗುಣಮಟ್ಟವು “ತೀವ್ರ ಕಳಪೆ ಪ್ಲಸ್” ವರ್ಗಕ್ಕೆ ಇಳಿದಿರುವ ಮಧ್ಯೆ ಕೇಂದ್ರ ಸರ್ಕಾರವು ಈ ವಿಷಯದಲ್ಲಿ ತಕ್ಷಣವೇ ಮಧ್ಯಪ್ರವೇಶ ಮಾಡಬೇಕು ಎಂದು ಪರಿಸರ ಸಚಿವ ಗೋಪಾಲ್ ರೈ ಮಂಗಳವಾರ ಒತ್ತಾಯಿಸಿದ್ದಾರೆ.

“ಆಗಸ್ಟ್ 30, ಅಕ್ಟೋಬರ್ 10 ಮತ್ತು ಅಕ್ಟೋಬರ್ 23 ರಂದು ಪತ್ರಗಳ ಮೂಲಕ ಪದೇ ಪದೆ ವಿನಂತಿಸಿದರೂ, ಕೇಂದ್ರ ಪರಿಸರ ಸಚಿವರಿಗೆ ಪರಿಸ್ಥಿತಿಯ ಅರಿವಾಗಿಲ್ಲ ಅಥವಾ ಅವರು ದೆಹಲಿ ಸರ್ಕಾರದ ಮನವಿಗಳಿಗೆ ಸ್ಪಂದಿಸಿಲ್ಲ” ಎಂದು ರೈ ತಮ್ಮ ಇತ್ತೀಚಿನ ಪತ್ರದಲ್ಲಿ ತಿಳಿಸಿದ್ದಾರೆ.

ಅಪಾಯಕಾರಿ ಮಟ್ಟದ ಮಾಲಿನ್ಯವನ್ನು ನಿಭಾಯಿಸಲು ಗ್ರ್ಯಾಪ್ -4 (GRAP-IV) ನಿರ್ಬಂಧಗಳನ್ನು ಜಾರಿಗೆ ತರಲಾಗುತ್ತಿದ್ದರೂ, ನಗರವನ್ನು ಆವರಿಸಿರುವ ದಟ್ಟವಾದ ಹೊಗೆ ಪದರವನ್ನು ಗಾಳಿ ಅಥವಾ ಮಳೆಯಿಂದ ಮಾತ್ರ ನಿವಾರಿಸಬಹುದು ಎಂದು ರೈ ಹೇಳಿದರು.

ಮೋಡ ಬಿತ್ತನೆಯ ಮೂಲಕ ಕೃತಕ ಮಳೆ ಸುರಿಸುವುದು ಸದ್ಯ ತಕ್ಷಣದಲ್ಲೇ ಕೈಗೊಳ್ಳಬಹುದಾದಂಥ ಪರಿಹಾರ ಕ್ರಮವಾಗಿದ್ದು, ಇದಕ್ಕೆ ದೆಹಲಿ ಸರ್ಕಾರವು ಧನಸಹಾಯ ನೀಡಲು ಸಿದ್ಧವಾಗಿದೆ. ಆದರೆ, ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ), ಗೃಹ ಸಚಿವಾಲಯ (ಎಂಎಚ್ಎ) ಮತ್ತು ರಕ್ಷಣಾ ಸಚಿವಾಲಯದಂತಹ ಪ್ರಮುಖ ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಅನುಮತಿಗಳಿಲ್ಲದೆ ಇದನ್ನು ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

“ನಾವು ಹೊಗೆಯ ಪದರವನ್ನು ತೊಡೆದು ಹಾಕದ ಹೊರತು ದೆಹಲಿ ಮಾಲಿನ್ಯದಿಂದ ಪರಿಹಾರ ಪಡೆಯಲು ಸಾಧ್ಯವಿಲ್ಲ. ಮೋಡ ಬಿತ್ತನೆಯು ಬಿಕ್ಕಟ್ಟನ್ನು ತಗ್ಗಿಸಲು ಮತ್ತು ನಾಗರಿಕರಿಗೆ ತಕ್ಷಣದ ಪರಿಹಾರವನ್ನು ನೀಡಲು ಸಹಾಯ ಮಾಡುತ್ತದೆ” ಎಂದು ರೈ ನುಡಿದರು.

ತುರ್ತು ಮಾಲಿನ್ಯ ನಿಯಂತ್ರಣ ಕ್ರಮವಾಗಿ ಮೋಡ ಬಿತ್ತನೆ ಮಾಡಲು ದೆಹಲಿ ಸರ್ಕಾರ ಕಳೆದ ವರ್ಷ ಐಐಟಿ ಕಾನ್ಪುರದೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಆದರೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಗದ ಕಾರಣದಿಂದ ಈ ಕಾರ್ಯಯೋಜನೆ ಜಾರಿಗೆ ತರಲು ಸಾಧ್ಯವಾಗುತ್ತಿಲ್ಲ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...