spot_img
spot_img

ASSAM COAL MINE RESCUE OPERATION : ಅಸ್ಸಾಂ ಕಲ್ಲಿದ್ದಲು ಗಣಿಯಲ್ಲಿ ಸಿಲುಕಿದ 9 ಜನರಲ್ಲಿ ಒಬ್ಬ ಕಾರ್ಮಿಕನ ಮೃತದೇಹ ಮೇಲಕ್ಕೆ

spot_img
spot_img

Share post:

Dima Hasao (Assam) News:

ASSAM ಕಲ್ಲಿದ್ದಲು ಗಣಿಯಲ್ಲಿ ಕಳೆದೆರಡು ದಿನಗಳಿಂದ ಸಾಗುತ್ತಿದ್ದ ರಕ್ಷಣಾ ಕಾರ್ಯಾಚರಣೆಗೆ ಮಂಗಳವಾರ ಸಂಜೆ ಕೊಂಚ ವಿರಾಮ ನೀಡಲಾಗಿತ್ತು.ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಉಮ್ರಾಂಗ್ಸೊದಲ್ಲಿನ ಕಲ್ಲಿದ್ದಲು ಗಣಿಯೊಳಗೆ ಸಿಲುಕಿರುವ 9 ಕಾರ್ಮಿಕರ ಪೈಕಿ ಒಬ್ಬ ಕಾರ್ಮಿಕನ ಮೃತದೇಹವನ್ನು ಇಂದು ಮೇಲೆತ್ತಲಾಗಿದೆ. ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಮತ್ತು ಎನ್‌ಡಿಆರ್​ಎಫ್​ ಡೈವರ್ಸ್​ ಭಾಗಿಯಾಗಿದ್ದಾರೆ.

ಕಳೆದೆರಡು ದಿನಗಳಿಂದ ಸಾಗುತ್ತಿದ್ದ ಕಾರ್ಯಾಚರಣೆಗೆ ಮಂಗಳವಾರ ಸಂಜೆ ಕೊಂಚ ವಿರಾಮ ನೀಡಲಾಗಿತ್ತು. ಬುಧವಾರ ಬೆಳಗ್ಗೆಯಿಂದ ಹಗಲು ರಾತ್ರಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಇದೀಗ ರಕ್ಷಣಾ ತಂಡವನ್ನು ಕೂಡಾ ವಿಸ್ತರಿಸಲಾಗಿದೆ ಎಂದು ಎನ್​ಡಿಆರ್​ಎಫ್​ ಉಪ ಕಮಾಂಡೆಂಟ್​ ಎನ್.ತಿವಾರಿ ಮಾಹಿತಿ ನೀಡಿದರು.

ಗಣಿಯಲ್ಲಿ ಸಿಲುಕಿರುವ ಉಳಿದ 8 ಮಂದಿ ಬದುಕುಳಿದಿರುವ ಸಾಧ್ಯತೆ ಕಡಿಮೆ ಎನ್ನಲಾಗಿದ್ದು ಭೂ ಸೇನೆ, ಎನ್​ಡಿಆರ್​ಎಫ್​ ಹಾಗೂ ಎಸ್​ಡಿಆರ್​ಎಫ್​ ಸಿಬ್ಬಂದಿ ರಕ್ಷಣಾ ಕಾರ್ಯ ಚುರುಕುಗೊಳಿಸಿದ್ದಾರೆ ಎಂದು ಎನ್​ಡಿಆರ್​ಎಫ್​ ಅಧಿಕಾರಿಗಳು ಹೇಳಿದ್ದಾರೆ.ಮಂಗಳವಾರ ಸಂಜೆ ಬಿಡುವು ನೀಡಲಾಗಿದ್ದ ಕಾರ್ಯಾಚರಣೆ ಬುಧವಾರ ಬೆಳಗ್ಗೆ ಪುನಾರಂಭಗೊಂಡಿದ್ದು, ಸಂಕಷ್ಟದಲ್ಲಿ ಸಿಲುಕಿರುವ ಕಾರ್ಮಿಕರನ್ನು ನಮ್ಮ ತಂಡ ಶೀಘ್ರದಲ್ಲೇ ತಲುಪಲಿದ್ದು, ರಕ್ಷಿಸುವ ಭರವಸೆ ಇದೆ.

ಸದ್ಯ ಎನ್​ಡಿಆರ್​ಎಫ್​ ಮತ್ತು ಸೇನೆ ಒಟ್ಟಿಗೆ ಗಣಿಯಲ್ಲಿ ಕೆಲಸ ಮಾಡುತ್ತಿದ್ದು, ಅವರೊಂದಿಗೆ ಶೀಘ್ರದಲ್ಲೇ ನೌಕಾ ಸಿಬ್ಬಂದಿಗಳೂ ಸೇರಲಿದ್ದಾರೆ ಎಂದು ಅವರು ಹೇಳಿದರು.ರಕ್ಷಣಾ ಕಾರ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ASSAM ಸಿಎಂ ಹಿಮಾಂತ್​ ಬಿಸ್ವಾ ಶರ್ಮಾ, ಪ್ರಕರಣ ಸಂಬಂಧ ಎಫ್​ಐಆರ್​ ದಾಖಲಿಸಲಾಗಿದೆ.

ಒಬ್ಬರನ್ನು ಬಂಧಿಸಲಾಗಿದೆ. ಇದೊಂದು ಅನಧಿಕೃತ ಗಣಿಗಾರಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಗಣಿ ಕಾರ್ಮಿಕರೊಬ್ಬರು ಮಾತನಾಡಿ, ನಾವು ಗಣಿಯಲ್ಲಿ ಕೆಲಸ ಮಾಡುತ್ತಿದ್ದಾಗ ಜನರು ನೀರು ತುಂಬುತ್ತಿದೆ ಎಂದು ಕೂಗಲು ಆರಂಭಿಸಿದರು. ಆಗ 30ರಿಂದ 35 ಜನ ನಾವು ಹೊರಬಂದೆವು. ಆದರೆ 15-16 ಜನರು ಅಲ್ಲೇ ಸಿಲುಕಿಕೊಂಡರು ಎಂದು ತಿಳಿಸಿದರು

ರಕ್ಷಣಾ ಕಾರ್ಯಾಚರಣೆಯ ಕುರಿತು ಕೇಂದ್ರ ಕಲ್ಲಿದ್ದಲು ಸಚಿವ ಜಿ.ಕೃಷ್ಣ ರೆಡ್ಡಿ ಅವರ ಜೊತೆಗೂ ಚರ್ಚಿಸಲಾಗಿದ್ದು, ಸಹಾಯ ಯಾಚಿಸಲಾಗಿದೆ. ಅವರೂ ಕೂಡ ಕಾರ್ಯಾಚರಣೆಯಲ್ಲಿ ASSAM ಸರ್ಕಾರವನ್ನು ಬೆಂಬಲಿಸಲು ಎಲ್ಲಾ ರೀತಿಯ ನೆರವು ನೀಡುವಂತೆ ನಿರ್ದೆಶಿಸಿದ್ದಾರೆ. ಸಚಿವರ ತ್ವರಿತ ಪ್ರತಿಕ್ರಿಯೆ ಮತ್ತು ಬೆಂಬಲಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಇದನ್ನು ಓದಿರಿ : DISCOUNTS ON IPHONE 16 SERIES : ಆಪಲ್ ಪ್ರಿಯರಿಗೆ ಗುಡ್ ನ್ಯೂಸ್; ಐಫೋನ್ 16 ಸೀರಿಸ್ ಮೇಲೆ ಆಫರ್

 

 

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...