spot_img
spot_img

ATTACK ON ARVIND KEJRIWAL : ಕೇಜ್ರಿವಾಲ್ ಕೊಲ್ಲಲು ಬಿಜೆಪಿ, ದಿಲ್ಲಿ ಪೊಲೀಸ್ ಸಂಚು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

ARVIND KEJRIWAL ಅವರ ಕೊಲೆಗೆ ಸಂಚು ನಡೆದಿದೆ ಎಂದು ದೆಹಲಿ ಸಿಎಂ ಅತಿಶಿ ಆರೋಪಿಸಿದ್ದಾರೆ.ಆಪ್ ಮುಖ್ಯಸ್ಥ ARVIND KEJRIWAL ಅವರನ್ನು ಹತ್ಯೆ ಮಾಡಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ದಿಲ್ಲಿ ಪೊಲೀಸ್​ ಇಲಾಖೆ ಒಂದಾಗಿ ಸಂಚು ರೂಪಿಸಿವೆ ಎಂದು ದೆಹಲಿ ಸಿಎಂ ಅತಿಶಿ ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ.

Allegation against Union Home Minister; ದಿಲ್ಲಿ ಪೊಲೀಸ್ ಇಲಾಖೆ ಮತ್ತು ಬಿಜೆಪಿ ಸೇರಿಕೊಂಡು ಕೇಜ್ರಿವಾಲ್ ಅವರನ್ನು ಕೊಲ್ಲುವ ಸಂಚು ರೂಪಿಸುತ್ತಿವೆ ಎಂದು ಆರೋಪಿಸಿದರು.ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಚಿನಲ್ಲಿ ಇಬ್ಬರು ಭಾಗಿಯಾಗಿದ್ದಾರೆ.

ಮೊದಲನೆಯದಾಗಿ, ದೆಹಲಿಯ ಅಲ್ಲಲ್ಲಿ ARVIND KEJRIWAL ಮೇಲೆ ಕಲ್ಲೆಸೆಯುವ ಬಿಜೆಪಿ ಕಾರ್ಯಕರ್ತರು ಮತ್ತು ಎರಡನೆಯದಾಗಿ, ಬಿಜೆಪಿ ಮತ್ತು ಅಮಿತ್ ಶಾ ಅವರ ಅಣತಿಯಂತೆ ಕೆಲಸ ಮಾಡುವ ದೆಹಲಿ ಪೊಲೀಸ್ ಇಲಾಖೆ ಇದರಲ್ಲಿ ಭಾಗಿಯಾಗಿದ್ದಾರೆ.

BJP workers are responsible for the attack: ಆದರೆ ದಾಳಿಗಳು ನಡೆದಾಗಲೆಲ್ಲ, ಬಿಜೆಪಿ ಒಳಸಂಚಿನ ಭಾಗವಾಗಿರುವ ದೆಹಲಿ ಪೊಲೀಸರು ನಿಷ್ಕ್ರಿಯರಾಗಿದ್ದರು. ಆಪ್ ಸ್ವತಃ ಈ ದಾಳಿಗಳ ಬಗ್ಗೆ ತನಿಖೆ ನಡೆಸಿದ್ದು, ಬಹುತೇಕ ದಾಳಿಗಳಿಗೆ ಬಿಜೆಪಿ ಕಾರ್ಯಕರ್ತರೇ ಕಾರಣ ಎಂಬುದು ಕಂಡು ಬಂದಿದೆ ಎಂದು ಅತಿಶಿ ಹೇಳಿದರು.ದೆಹಲಿಯ ಮಾಜಿ ಸಿಎಂ ಕೇಜ್ರಿವಾಲ್ ಅವರ ಮೇಲೆ ನಡೆದ ಹಲವಾರು ದಾಳಿಗಳಿಗೆ ಬಿಜೆಪಿ ಕಾರ್ಯಕರ್ತರೇ ಕಾರಣ. ನಿನ್ನೆ, ಹರಿ ನಗರದಲ್ಲಿ ಕೇಜ್ರಿವಾಲ್ ಮೇಲೆ ಹಲ್ಲೆ ನಡೆಸಲಾಯಿತು.

ಆದರೆ ದೆಹಲಿ ಪೊಲೀಸರು ದಾಳಿಕೋರರನ್ನು ತಡೆಯಲಿಲ್ಲ. ಕೇಜ್ರಿವಾಲ್ ತಮ್ಮ ಕ್ಷೇತ್ರದಲ್ಲಿ ಪ್ರಚಾರಕ್ಕಾಗಿ ತೆರಳುತ್ತಿದ್ದಾಗ ಕಾಳಿ ಬಾರಿಯಲ್ಲಿ, ಲಾಠಿ ಮತ್ತು ಕಲ್ಲುಗಳನ್ನು ಹಿಡಿದ ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದರು. ಸಂಜಯ್ ಸಿಂಗ್ ಹೋಗಿ ಆ ದಾಳಿಯನ್ನು ನಿಲ್ಲಿಸಬೇಕಾಯಿತು. ಅಷ್ಟಾದರೂ ಆದರೆ ದೆಹಲಿ ಪೊಲೀಸರು ಸಹಾಯಕ್ಕೆ ಬರಲಿಲ್ಲ ಎಂದು ಅವರು ತಿಳಿಸಿದರು.

ಜನವರಿ 18 ರಂದು ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಕೇಜ್ರಿವಾಲ್ ಮೇಲೆ ಮತ್ತೊಮ್ಮೆ ದಾಳಿ ನಡೆಸಲಾಯಿತು. ಅಂದು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ನಾವು ಸಾಮಾಜಿಕ ಮಾಧ್ಯಮದಲ್ಲಿ (ದೆಹಲಿ ಪೊಲೀಸರಲ್ಲ) ತನಿಖೆ ಮಾಡಿ ನೋಡಿದಾಗ, ಎಲ್ಲಾ ದಾಳಿಕೋರರು ಬಿಜೆಪಿಗೆ ಸೇರಿದವರು ಎಂಬುದು ಪತ್ತೆಯಾಯಿತು.

ಆದರೆ ಈ ಬಗ್ಗೆ ಯಾವುದೇ ತನಿಖೆ ನಡೆಸದಿರುವುದು ಮತ್ತು ದಾಳಿಕೋರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಬಿಜೆಪಿ ಮತ್ತು ದೆಹಲಿ ಪೊಲೀಸರು ಒಳಸಂಚು ಮಾಡಿದ್ದಾರೆ ಎಂಬುದು ಕಂಡು ಬರುತ್ತಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪಕ್ಷದ ಮುಖ್ಯಸ್ಥ ARVIND KEJRIWAL ಅವರ ಮೇಲೆ ಇತ್ತೀಚೆಗೆ ನಡೆದ ದಾಳಿಗಳ ಬಗ್ಗೆ ಆಮ್ ಆದ್ಮಿ ಪಕ್ಷ (ಎಎಪಿ) ಭಾರತದ ಚುನಾವಣಾ ಆಯೋಗಕ್ಕೆ (ಇಸಿಐ) ದೂರು ನೀಡಿದೆ ಎಂದು ಪಕ್ಷದ ಮೂಲಗಳು ಶುಕ್ರವಾರ ತಿಳಿಸಿವೆ.

ಇದನ್ನು ಓದಿರಿ : USED CAR SALES : 2030ರ ವೇಳೆಗೆ ಸೆಕೆಂಡ್ ಹ್ಯಾಂಡ್ ಕಾರು ಮಾರುಕಟ್ಟೆ 10.8 ಮಿಲಿಯನ್ಗೆ ಬೆಳೆಯುವ ನಿರೀಕ್ಷೆ

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

WOMAN DONATES 35 YEARS OF SAVINGS:35 ವರ್ಷದ ಉಳಿತಾಯದ ಹಣವನ್ನು ಶಿಕ್ಷಣ ಸಂಸ್ಥೆಗೆ ದಾನ ಮಾಡಿದ ಮಹಿಳೆ.

Tirupati (Andhra Pradesh) News: ರೇಣಿಗುಂಟದ ಸಿ.ಮೋಹನ ದಾನ ಮಾಡಿದ WOMAN. ಇವರು ವಿಶ್ವಸಂಸ್ಥೆಯ ಅಭಿವೃದ್ಧಿ ಮತ್ತು ನಿರ್ವಹಣೆ ವಲಯದಲ್ಲಿ ಕೊಸೊವೊ, ಅಲ್ಬೇನಿಯಾ, ಯೆಮೆನ್, ಸೌದಿ...

BOMB THREAT CALLS TO AIRLINES : 2024ರಲ್ಲಿ ವಿಮಾನಗಳಿಗೆ ಬಂದಿದ್ದು ಬರೋಬ್ಬರಿ 728 ಹುಸಿ ಬಾಂಬ್ ಕರೆ, ಇಂಡಿಗೋಗೆ ಅತಿ ಹೆಚ್ಚು

New Delhi News: 2024ರಲ್ಲಿ ಒಟ್ಟು 728 ಹುಸಿ ಬಾಂಬ್​ ಕರೆಗಳು ವಿವಿಧ ವಿಮಾನಯಾನ ಸಂಸ್ಥೆಗಳಿಗೆ ಬಂದಿವೆ. ಅದರಲ್ಲಿ 714 ದೇಶಿಯ ವಿಮಾನ ಸಂಸ್ಥೆಗಳಿಗೆ ಬಂದಿವೆ....

HOUSE BURGLAR ARREST : ಪ್ರೊಪೆಷನಲ್ ಬಾಕ್ಸರ್ನಿಂದ 150ಕ್ಕೂ ಹೆಚ್ಚು ಮನೆಗಳ್ಳತನ

Bangalore News: HOUSE BURGLAR ARREST  ಬಾಕ್ಸಿಂಗ್ ಬಿಟ್ಟು ಕಳ್ಳತನಕ್ಕಿಳಿದು, 150ಕ್ಕೂ ಹೆಚ್ಚು ಮನೆಗೆ ಕನ್ನ ಹಾಕಿದ್ದ ಕುಖ್ಯಾತ ಅಂತಾರಾಜ್ಯ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.ಸೋಲ್ಹಾಪುರದ ಮಂಗಳವಾರ್...

IRAN SATELLITES : ದೇಶೀಯವಾಗಿ ತಯಾರಿಸಿದ 3 ಉಪಗ್ರಹಗಳನ್ನು ಅನಾವರಣಗೊಳಿಸಿದ ಇರಾನ್

Tehran News: IRAN SATELLITES ತಾನು ದೇಶೀಯವಾಗಿ ತಯಾರಿಸಿದ ಮೂರು ಉಪಗ್ರಹಗಳನ್ನು ಅನಾವರಣಗೊಳಿಸಿದೆ. ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸಚಿವ...