Dhaka News:
ಬಾಂಗ್ಲಾದೇಶದಲ್ಲಿATTACKS ON HINDUS ಹೆಚ್ಚಾಗುತ್ತಿವೆ ಎಂದು ವರದಿ ತಿಳಿಸಿದೆ. ಕಳೆದ ವರ್ಷದ ಆಗಸ್ಟ್ನಲ್ಲಿ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರದ ಪತನದ ನಂತರ ದೇಶದಲ್ಲಿ ಅವಾಮಿ ಲೀಗ್ ಬೆಂಬಲಿಗರು ಮತ್ತು ಪತ್ರಕರ್ತರ ಮೇಲೆ ಭದ್ರತಾ ಪಡೆಗಳು ಕೂಡ ದೌರ್ಜನ್ಯವೆಸಗುತ್ತಿರುವ ಆತಂಕಕಾರಿ ಬೆಳವಣಿಗೆಗಳಾಗುತ್ತಿವೆ ಎಂದು ವರದಿ ತಿಳಿಸಿದೆ.
ಇಸ್ಲಾ ಮೂಲಭೂತವಾದಿ ಸಂಘಟನೆಗಳ ಸದಸ್ಯರು ಅಲ್ಪಸಂಖ್ಯಾತರ ಮೇಲೆ, ವಿಶೇಷವಾಗಿ ಬಾಂಗ್ಲಾದೇಶದ ಹಿಂದೂ ಮತ್ತು ಅಹ್ಮದೀಯ ಸಮುದಾಯಗಳ ಜನರ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಹ್ಯೂಮನ್ ರೈಟ್ಸ್ ವಾಚ್ (ಎಚ್ಆರ್ಡಬ್ಲ್ಯೂ) ತನ್ನ ಇತ್ತೀಚಿನ ವರದಿಯಲ್ಲಿ ಬಹಿರಂಗಪಡಿಸಿದೆ.
ಶಾಶ್ವತ ಸುಧಾರಣೆಗಳನ್ನು ಖಚಿತಪಡಿಸಿಕೊಳ್ಳಲು ಮಾನವ ಹಕ್ಕುಗಳ ಹೈಕಮಿಷನರ್ ಕಚೇರಿ ಮತ್ತು ಇತರ ವಿಶ್ವಸಂಸ್ಥೆ ಹಕ್ಕುಗಳ ತಜ್ಞರಿಂದ ತಾಂತ್ರಿಕ ನೆರವು, ಮೇಲ್ವಿಚಾರಣೆ ಮತ್ತು ವರದಿಯನ್ನು ಪಡೆಯಬೇಕು ಎಂದು ಬಾಂಗ್ಲಾ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.
ATTACKS ON HINDUS ‘ಮಾನ್ಸೂನ್ ಕ್ರಾಂತಿಯ ನಂತರ: ಬಾಂಗ್ಲಾದೇಶದಲ್ಲಿ ಶಾಶ್ವತ ಭದ್ರತಾ ವಲಯದ ಸುಧಾರಣೆಗೆ ಮಾರ್ಗಸೂಚಿ’ (‘After the Monsoon Revolution: A Roadmap to Lasting Security Sector Reform in Bangladesh’) ಎಂಬ ಶೀರ್ಷಿಕೆಯ 50 ಪುಟಗಳ ವರದಿಯು ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರಕ್ಕೆ ವಿವಿಧ ಸಲಹೆಗಳನ್ನು ನೀಡಿದೆ.
Increased attacks on Hindus- Report:
ಹಸೀನಾ ಸರ್ಕಾರದ ಪತನದ ನಂತರ ATTACKS ON HINDUSಹೆಚ್ಚಾಗುತ್ತಿರುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದು ಅಂತರರಾಷ್ಟ್ರೀಯ ಕಳವಳಕ್ಕೆ ಕಾರಣವಾಗಿದೆ. ಹಿಂದೂಗಳು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರು ಸಾಂಪ್ರದಾಯಿಕವಾಗಿ ಹಸೀನಾ ಅವರ ಅವಾಮಿ ಲೀಗ್ ಪಕ್ಷವನ್ನು ಬೆಂಬಲಿಸಿದ್ದರಿಂದ ಅವರ ಮೇಲೆ ದಾಳಿ ನಡೆಸಲಾಗಿದೆ ಎಂದು ಹಲವಾರು ವ್ಯಾಖ್ಯಾನಕಾರರು ಎಚ್ಆರ್ಡಬ್ಲ್ಯೂಗೆ ತಿಳಿಸಿದ್ದಾರೆ.
ಹಿಂದೂ ಅಲ್ಪಸಂಖ್ಯಾತರ ಮೇಲಿನ ದಾಳಿಗಳ ಬಗ್ಗೆ ಕಳವಳ ಹೆಚ್ಚುತ್ತಿರುವ ಸಮಯದಲ್ಲಿ ದಾಸ್ ಅವರನ್ನು ಬಂಧಿಸಲಾಗಿದೆ. ಆಗಸ್ಟ್ 5 ಮತ್ತು ಅಕ್ಟೋಬರ್ 22 ರ ನಡುವೆ ಕನಿಷ್ಠ 88 ಕೋಮು ಹಿಂಸಾಚಾರದ ಪ್ರಕರಣಗಳು ದಾಖಲಾಗಿವೆ ಮತ್ತು 70 ಜನರನ್ನು ಬಂಧಿಸಲಾಗಿದೆ ಎಂದು ಮಧ್ಯಂತರ ಸರ್ಕಾರ ದೃಢಪಡಿಸಿದೆ. ಹಿಂದೂಗಳ ಅಂಗಡಿಗಳು, ಮನೆಗಳು ಮತ್ತು ಪೂಜಾ ಸ್ಥಳಗಳನ್ನು ಗುರಿಯಾಗಿಸಿಕೊಂಡು ನೂರಾರು ವಿಧ್ವಂಸಕ ಘಟನೆಗಳು ನಡೆದಿವೆ ಎಂದು ಹಿಂದೂ ಸಂಘಟನೆಗಳು ಹೇಳಿವೆ” ಎಂದು ವರದಿ ಉಲ್ಲೇಖಿಸಿದೆ.
ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಹಿಂಸಾತ್ಮಕ ದಾಳಿಗಳು ಪದೇ ಪದೇ ನಡೆಯುತ್ತಿವೆ ಮತ್ತು ಅವರನ್ನು ರಕ್ಷಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇಂಟರ್ ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಪ್ರಜ್ಞೆಯ (ಇಸ್ಕಾನ್) ಮಾಜಿ ಅಧಿಕಾರಿ, ಹಿಂದೂ ಅರ್ಚಕ ಚಿನ್ಮಯ್ ಕೃಷ್ಣ ದಾಸ್ ಅವರ ಬಂಧನವನ್ನು ಬಾಂಗ್ಲಾದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣವಾಗುತ್ತಿರುವುದರ ಆತಂಕಕಾರಿ ಸೂಚನೆ ಎಂದು ಅದು ಬಣ್ಣಿಸಿದೆ.
ಇದನ್ನು ಓದಿರಿ : FREE FLIGHT TRAVEL FOR STUDENTS: ಬಳ್ಳಾರಿ ವೈಕಿಂಗ್ಸ್ ರೌಂಡ್ ಟೇಬಲ್ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಉಚಿತ ವಿಮಾನ ಪ್ರಯಾಣ