spot_img
spot_img

ತೆರಿಗೆ ಪಾವತಿಸದವರ ಆಸ್ತಿ ಹರಾಜು : ಬಿಬಿಎಂಪಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ತೆರಿಗೆ ಬಾಕಿ ಪಾವತಿಸದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಬಿಬಿಎಂಪಿ ಮುಂದಾಗಿದೆ. ಈ ಮೂಲಕ ತೆರಿಗೆ ಕಟ್ಟದೇ ನಿರ್ಲಕ್ಷ್ಯ ವಹಿಸುತ್ತಿದ್ದವರಿಗೆ ಬಿಸಿ ತಾಗಲಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಗೆ ನೀಡಿದ್ದ ಒನ್ ಟೈಮ್ ಸೆಟಲ್​ಮೆಂಟ್ (ಓಟಿಎಸ್) ಗಡುವು ಮುಗಿದಿದೆ. ಈ ಬೆನ್ನಲ್ಲೇ ತೆರಿಗೆ ಪಾವತಿಸದವರ ಆಸ್ತಿಗಳನ್ನು ಹರಾಜು ಹಾಕಿ, ಬಿಸಿ ಮುಟ್ಟಿಸಲು ಪಾಲಿಕೆ ಮುಂದಾಗಿದೆ.
ಮೂರು ಹಂತದ ನೋಟಿಸ್ ನೀಡಿದರೂ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದರೆ ಆಸ್ತಿ ಜಪ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಮೂಲಕ ಬಾಕಿ ತೆರಿಗೆ ವಸೂಲಿಗೆ ಪಾಲಿಕೆಯು ತೀವ್ರ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ಸಾಕಷ್ಟು ಅವಕಾಶ ಕೊಟ್ಟರೂ ಬಾಕಿ ತೆರಿಗೆ ಕಟ್ಟಿಲ್ಲ. ಜೊತೆಗೆ ಒನ್ ಟೈಮ್ ಸೆಟಲ್‌ಮೆಂಟ್ ಯೋಜನೆಯ ಗಡುವು ಸಹ ಮುಕ್ತಾಯಗೊಂಡಿದೆ. ಆದರೂ ತೆರಿಗೆ ಕಟ್ಟದವರಿಗೆ ಡಿಸೆಂಬರ್ 1ರಿಂದ ಬಡ್ಡಿ ಮತ್ತು ಆಸ್ತಿ ಹರಾಜು ಅಸ್ತ್ರ ಪ್ರಯೋಗಿಸಲು ಪಾಲಿಕೆ ಸಜ್ಜಾಗಿದೆ.
ಈವರೆಗೆ ಬೆಂಗಳೂರು ನಗರದಲ್ಲಿ ಓಟಿಎಸ್ ಮೂಲಕ ಶೇ.60 ರಷ್ಟು ಜನರು ಮಾತ್ರ ತೆರಿಗೆ ಪಾವತಿಸಿದ್ದಾರೆ. ಅವಕಾಶ ನೀಡಿದರೂ ಕೂಡಾ ಶೇ.40 ರಷ್ಟು ಜನರು ತೆರಿಗೆ ಪಾವತಿಸಿಲ್ಲ. ಅಂತಹವರಿಗೆ ಇಂದಿನಿಂದ ದುಪ್ಪಟ್ಟು ದಂಡದ ಜತೆಗೆ ತೆರಿಗೆ ವಸೂಲಿ ಮಾಡಲು ಪಾಲಿಕೆ ಮುಂದಾಗಿದೆ. ಬಾಕಿ ತೆರಿಗೆಗೆ ಬಾಕಿ ಉಳಿಸಿಕೊಂಡಷ್ಟೇ ದಂಡವನ್ನು ಪಾಲಿಕೆ ವಿಧಿಸಲಿದೆ.
ಈವರೆಗೆ 3,751ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ವಸೂಲಿ ಮಾಡಲಾಗಿದ್ದು, 4 ಸಾವಿರ ಕೋಟಿ ರೂಪಾಯಿ ಗುರಿ ಮುಟ್ಟಲು ಇಲ್ಲಿಯವರೆಗೂ ಪಾಲಿಕೆಗೆ ಸಾಧ್ಯವಾಗಿಲ್ಲ. ಆಸ್ತಿ ತೆರಿಗೆ ಪಾವತಿ ಮಾಡದ ಕಾರಣಕ್ಕಾಗಿ ಈವರೆಗೆ 6,381 ವಾಣಿಜ್ಯ ಮಳಿಗೆಗಳಿಗೆ ಬೀಗ ಹಾಕಿ ಸೀಜ್ ಮಾಡಲಾಗಿದೆ.
ತೆರಿಗೆ ಪಾವತಿ ಸಂಬಂಧ ಡಿಸೆಂಬರ್ ತಿಂಗಳಲ್ಲಿ ಮೂರು ಹಂತದಲ್ಲಿ ನೋಟಿಸ್ ನೀಡಲಾಗಲಿದೆ. ಮೊದಲ ನೋಟಿಸ್‌ಗೆ ಬಾಕಿ ಪಾವತಿಸಿದರೆ ದಂಡ ಮಾತ್ರ ವಸೂಲಿ ಆಗಲಿದೆ. ಎರಡನೇ ನೋಟಿಸ್‌ಗೆ ಪಾವತಿಸಿದರೆ ದಂಡದ ಜತೆಗೆ ಮೂಲ ಬಾಕಿ ತೆರಿಗೆಗೆ ಶೇ.15 ರಷ್ಟು ಬಡ್ಡಿ ಬೀಳಲಿದೆ. ಮೂರನೇ ನೋಟಿಸ್‌ಗೆ ಪಾವತಿಸಿದರೆ ದಂಡದ ಜತೆಗೆ ಮೂಲ ಬಾಕಿಗೆ ಶೇ.25 ರಷ್ಟು ಬಡ್ಡಿ ವಸೂಲಿ ಆಗಲಿದೆ. ಅಲ್ಲದೇ ಮೂರು ನೋಟಿಸ್‌ಗೂ ತೆರಿಗೆ ಪಾವತಿಸದಿದ್ದರೆ ಆಸ್ತಿ ಮುಟ್ಟುಗೋಲಿಗೆ ಕೋರ್ಟ್ ಮೊರೆಗೆ ಪಾಲಿಕೆ ಹೋಗಲಿದೆ.
ಬಾಕಿ ತೆರಿಗೆ ಪಾವತಿಗೆ ಬಿಬಿಎಂಪಿ ಹಲವು ಅವಕಾಶ ನೀಡಿದರೂ ಕೂಡ ತೆರಿಗೆ ಪಾವತಿದಾರರು ನಿರ್ಲಕ್ಷ್ಯ ವಹಿಸುತ್ತಿದ್ದು, ಸದ್ಯ ಕಠಿಣ ಕ್ರಮಕ್ಕೆ ಪಾಲಿಕೆ ಮುಂದಾಗಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

BSNL RS 99 PLAN : ಕೇವಲ 99 ರೂ.ಗೆ ಅನ್ಲಿಮಿಟೆಡ್ ಕಾಲಿಂಗ್ ಪ್ಲಾನ್ ತಂದ ಬಿಎಸ್ಎನ್ಎಲ್!

BSNL 99 Plan: ಬಿಎಸ್​ಎನ್​ಎಲ್​ ತಮ್ಮ ಗ್ರಾಹಕರಿಗೆ ಶುಭ ಸುದ್ದಿ ನೀಡಿದೆ. ಈ ಆಫರ್​ ಎರಡು ಸಿಮ್‌ಗಳನ್ನು ಬಳಸುವ ಗ್ರಾಹಕರಿಗೆ ಉಪಯುಕ್ತ. ಭಾರತ್ ಸಂಚಾರ್ ನಿಗಮ್...

WORLD CANCER DAY : ಶಿವಣ್ಣ To ಸಂಜಯ್ ದತ್ – ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು

Shivanna News: ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ ಕ್ಯಾನ್ಸರ್​​ ಗೆದ್ದು ಬಂದಿದ್ದಾರೆ. 2024ರ ಡಿಸೆಂಬರ್ 24ರಂದು ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೊಳಗಾದ ಸ್ಯಾಂಡಲ್​ವುಡ್​ನ ಖ್ಯಾತ ನಟ, ಅಲ್ಲೇ ಕೆಲ...

AARADHYA BACHCHAN : ಆರೋಗ್ಯದ ಕುರಿತು ಸುಳ್ಳು ಮಾಹಿತಿ

New Delhi News: ತಮ್ಮ ಆರೋಗ್ಯದ ಕುರಿತು ಸುಳ್ಳು ಮಾಹಿತಿ ಪ್ರಕಟಿಸಿದ ಕೆಲವು ಯೂಟ್ಯೂಬ್ ಚಾನೆಲ್‌ಗಳು ಮತ್ತು ವೆಬ್‌ಸೈಟ್‌ಗಳ ವಿರುದ್ಧ ಐಶ್ವರ್ಯಾ ರೈ ಪುತ್ರಿ AARADHYA...

205 INDIANS DEPORTED BY US : ಅಕ್ರಮವಾಗಿ ಅಮೆರಿಕದಲ್ಲಿದ್ದ ಭಾರತೀಯರ ಗಡಿಪಾರು

Amritsar News: ಅಕ್ರಮ ವಲಸಿಗರ ವಿರುದ್ದ ಅಮೆರಿಕ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಕಠಿಣಕ್ರಮ ಕೈಗೊಂಡಿದ್ದಾರೆ. ಅದರಂತೆ ದಾಖಲೆ ರಹಿತವಾಗಿ ಅಮೆರಿಕದಲ್ಲಿ ನೆಲೆನಿಂತಿದ್ದ205 INDIANS DEPORTED BY...