spot_img
spot_img

ಗೃಹಲಕ್ಷ್ಮಿ ಯೋಜನೆಗೆ ‘ಮಹಾ’ ಮಹಿಳೆಯರ ಬಹುಪರಾಕ್

spot_img
spot_img

Share post:

ಬೆಳಗಾವಿ: ಬೆಳಗಾವಿಯಲ್ಲಿ ಮಹಾರಾಷ್ಟ್ರದ ಕೆಲಸಗಾರರು ಭತ್ತದ ಕಟಾವು ಮಾಡುತ್ತಿದ್ದು, ಇಲ್ಲಿನ ಯೋಜನೆಗಳನ್ನು ಮೆಚ್ಚಿಕೊಂಡಿದ್ದಾರೆ.
ಅತ್ತ, ಪಕ್ಕದ ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ಮೈತ್ರಿಕೂಟ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಇತ್ತ, ಅದೇ ರಾಜ್ಯದ ಕೂಲಿ ಕಾರ್ಮಿಕರು ಮಾತ್ರ ದುಡಿಮೆಗೆ ಕರ್ನಾಟಕವನ್ನೇ ನೆಚ್ಚಿಕೊಂಡು, ಇಲ್ಲಿನ ಗೃಹಲಕ್ಷ್ಮಿ ಯೋಜನೆ ಮತ್ತು ನರೇಗಾ ಕೂಲಿ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ.
ಕರ್ನಾಟಕದಲ್ಲಿರುವ ಅದೆಷ್ಟೋ ಮರಾಠಿಗರು ಕನ್ನಡ ಮಾತಾಡುವುದಿಲ್ಲ. ಆದರೆ, ಕೂಲಿ ಕೆಲಸಕ್ಕೆ ಮಹಾರಾಷ್ಟ್ರದಿಂದ ಬಂದಿರುವ ಈ ಮಹಿಳೆಯರು ಬಾಯ್ತುಂಬ ಅಚ್ಚ ಕನ್ನಡ ಮಾತಾಡುವುದನ್ನು ಕೇಳುವುದೇ ಚಂದ. ಅಲ್ಲದೇ ಈ ಕನ್ನಡ ನಾಡಿನ ಅನ್ನದಾತರು ಕೊಟ್ಟ ಕೆಲಸದಿಂದ ನಮ್ಮ ಬದುಕಿನ ಬಂಡಿ ಸಾಗುತ್ತಿದೆ ಎಂದು ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ.
ಬೆಳಗಾವಿ ಸುತ್ತಮುತ್ತಲಿನ ಕಡೋಲಿ, ಜಾಫರವಾಡಿ ಸೇರಿ ಮತ್ತಿತರ ಗ್ರಾಮಗಳಲ್ಲಿ ಭತ್ತದ ಸುಗ್ಗಿ ಜೋರಾಗಿದೆ. ಇಲ್ಲಿನ ಬಹಳಷ್ಟು ಕೂಲಿ ಕಾರ್ಮಿಕರು ನರೇಗಾ ಕೆಲಸಕ್ಕೆ ಹೋಗುತ್ತಿದ್ದಾರೆ. ಇದರಿಂದ ಕಾರ್ಮಿಕರ ಕೊರತೆ ಉಂಟಾದ ಪರಿಣಾಮ ಪಕ್ಕದ ಮಹಾರಾಷ್ಟ್ರದಿಂದ ಕೆಲಸಗಾರರನ್ನು ರೈತರು ಕರೆದುಕೊಂಡು ಬರುತ್ತಿದ್ದಾರೆ. ಒಂದು ದಿನಕ್ಕೆ ಒಬ್ಬರಿಗೆ 300 ರೂ. ಕೂಲಿ‌ ನಿಗದಿಪಡಿಸಿದ್ದು, ಬಾಡಿಗೆ ವಾಹನದಲ್ಲಿ ಇವರನ್ನು ಬೆಳಿಗ್ಗೆ ಕರೆದುಕೊಂಡು ಬರುವ ರೈತರು, ಸಾಯಂಕಾಲ ವಾಪಸ್ ಬಿಟ್ಟು ಬರುತ್ತಿದ್ದಾರೆ. ಇದು ಇಲ್ಲಿನ ರೈತರಿಗೆ ಹೊರೆಯಾಗಿ ಪರಿಣಮಿಸಿದೆ. ಆದರೂ ಅನಿವಾರ್ಯವಾಗಿ ಕರೆಸುತ್ತಿದ್ದಾರೆ.
ನಮ್ಮಲ್ಲಿ ಏನೂ ಕೆಲಸ ಇಲ್ಲ. ಹಾಗಾಗಿ, ಕರ್ನಾಟಕಕ್ಕೆ ದುಡಿಯಲು ಬಂದಿದ್ದೇವೆ. ಮಹಾರಾಷ್ಟ್ರದಲ್ಲಿ ಮಹಿಳೆಯರಿಗೆ ಯಾವುದೇ ಸೌಲಭ್ಯಗಳಿಲ್ಲ. ಕರ್ನಾಟಕದಲ್ಲಿನ ಮಹಿಳೆಯರು ಸುಖದಿಂದಿದ್ದಾರೆ. ನಮ್ಮ ವಯಸ್ಸಿನ ಇಲ್ಲಿನ ಮಹಿಳೆಯರು ಯಾರೂ ದುಡಿಯುತ್ತಿಲ್ಲ. ಇದೆಲ್ಲಾ ನೋಡಿದರೆ ಕರ್ನಾಟಕವೇ ಬೆಸ್ಟ್
ಕರ್ನಾಟಕದಲ್ಲಿ ನರೇಗಾ ಕೂಲಿ ಕೆಲಸ, ಗ್ಯಾರಂಟಿ ಯೋಜನೆಗಳನ್ನು ಇಲ್ಲಿನ ಸರ್ಕಾರ ಕೊಟ್ಟಿದೆ. ಆದರೆ, ಮಹಾರಾಷ್ಟ್ರ ಸರ್ಕಾರ ನಮಗೆ ಯಾವುದೇ ರೀತಿ ಯೋಜನೆ ಕೊಟ್ಟಿಲ್ಲ. ನಮ್ಮಲ್ಲಿನ ರಾಜಕಾರಣಿಗಳು ಚುನಾವಣೆ ವೇಳೆ ಬಂದು ವೋಟ್ ಹಾಕಿಸಿಕೊಂಡು ಹೋಗುತ್ತಾರೆ. ಅದಾದ ಬಳಿಕ ನಮ್ಮತ್ತ ತಿರುಗಿಯೂ ನೋಡುವುದಿಲ್ಲ. ಹಾಗಾಗಿ, ದುಡಿಯುವುದು ನಮಗೆ ತಪ್ಪುತ್ತಿಲ್ಲ. ಮೊದಲು ಭತ್ತದ ನಾಟಿಗೆ ಬಂದಿದ್ದೆವು. ಈಗ ಕಟಾವಿಗೂ ಬಂದಿದ್ದೇವೆ. ಕರ್ನಾಟಕ ರೈತರು ಕೆಲಸ ಕೊಟ್ಟಿದ್ದರಿಂದ ಇಂದು ನಮ್ಮ ಮನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಕಡೋಲಿ ರೈತ ವಿಶ್ವನಾಥ ಬಾಳೇಕುಂದ್ರಿ ಮಾತನಾಡಿ, “ನಮ್ಮೂರಿನವರು ನರೇಗಾ ಕೆಲಸಕ್ಕೆ ಹೋಗುತ್ತಿದ್ದಾರೆ. ಭತ್ತದ ಕಟಾವಿಗೆ ಯಾರೂ ಬರುತ್ತಿಲ್ಲ. ಹಾಗಾಗಿ, ಮಹಾರಾಷ್ಟ್ರದ ಖಾನಟ್ಟಿ, ರಾಜಗೋಳಿ ಸೇರಿ ಮತ್ತಿತರ ಹಳ್ಳಿಗಳಿಂದ ಜನರನ್ನು ಕರೆಸುತ್ತಿದ್ದೇವೆ. ಪ್ರತಿನಿತ್ಯ ಸುಮಾರು 200ಕ್ಕೂ ಅಧಿಕ ಜನ ಕಡೋಲಿ, ಜಾಫರವಾಡಿಗೆ ಬರುತ್ತಿದ್ದಾರೆ. ಮಹಿಳೆಯರಿಗೆ 300 ರೂ., ಪುರುಷರಿಗೆ 400 ರೂ. ಕೂಲಿ‌ ಹಣ ಕೊಡುತ್ತಿದ್ದೇವೆ. ಮತ್ತೆ ಅವರನ್ನು ಕರೆಯಲು ಮತ್ತು ಕಳಿಸಲು ವಾಹನದ ವ್ಯವಸ್ಥೆಯನ್ನೂ ನಾವೇ ಮಾಡಬೇಕು. ಖರ್ಚು ಹೆಚ್ಚಾಗುತ್ತಿದ್ದು, ಬೆಳೆ ಹಾಳಾಗಬಾರದು ಅಂತಾ ಈ ರೀತಿ ಮಾಡುತ್ತಿದ್ದೇವೆ
ಪ್ರತೀ ತಿಂಗಳು ಮನೆ ಯಜಮಾನಿಗೆ 2 ಸಾವಿರ ರೂ. ಹಣ ನೀಡುವ ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮೀ ಯೋಜನೆ ಕೇವಲ ಕರ್ನಾಟಕದಲ್ಲಿ ಮಾತ್ರ ಮೆಚ್ಚುಗೆ ಗಳಿಸಿಲ್ಲ. ಪಕ್ಕದ ಮಹಾರಾಷ್ಟ್ರದ ಮಹಿಳೆಯರು ಕೂಡ ಬಹುಪರಾಕ್ ಎನ್ನುತ್ತಿದ್ದಾರೆ. ನಮಗೆ ಯಾವುದೇ ಸುಖವಿಲ್ಲ. ಬದುಕಿನ ಬಂಡಿ ಸಾಗಿಸಲು ಬರೀ ದುಡಿಯುವುದೇ ಆಗಿದೆ. ಆದರೆ, ಕರ್ನಾಟಕದ ಮಹಿಳೆಯರು ತುಂಬಾ ಪುಣ್ಯ ಮಾಡಿದ್ದಾರೆ. ಇಂಥ ಯೋಜನೆಗಳ ಲಾಭ ಪಡೆದುಕೊಂಡು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂಬುದು ಅವರ ಅಭಿಪ್ರಾಯ.
ಈಗ ಎಲ್ಲೆಡೆ ಭತ್ತದ ಕೊಯ್ಲು ಮತ್ತು ರಾಶಿ ಜೋರಾಗಿದೆ. ಇಂಥ ಸಂದರ್ಭದಲ್ಲಿ ನರೇಗಾ ಕೆಲಸ ಕೊಟ್ಟರೆ ಕೂಲಿ ಕಾರ್ಮಿಕರು ಕಟಾವಿಗೆ ಯಾರೂ ಬರುವುದಿಲ್ಲ. ಹಾಗಾಗಿ, ಭತ್ತದ ಸುಗ್ಗಿ ಮುಗಿಯೋವರೆಗೂ ನರೇಗಾ ಕೂಲಿ ಕೆಲಸ ಸ್ಥಗಿತಗೊಳಿಸಿ ಅನುಕೂಲ ಮಾಡಿ ಕೊಡುವಂತೆ ಈ ಭಾಗದ ರೈತರು ಜಿಲ್ಲಾಡಳಿತವನ್ನು ಆಗ್ರಹಿಸುತ್ತಿದ್ದಾರೆ‌.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...