spot_img
spot_img

BANGLADESH RAILWAY PROTEST:ರೈಲ್ವೆ ಸಿಬ್ಬಂದಿ ಮುಷ್ಕರ, ದೇಶಾದ್ಯಂತ ರೈಲು ಬಂದ್.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Dhaka (Bangladesh) News:

ರಾಜಕೀಯವಾಗಿ ಅಸ್ಥಿರಗೊಂಡಿರುವ ಬಾಂಗ್ಲಾದೇಶದಲ್ಲಿ ಪ್ರತಿಭಟನೆಗಳು ನಿಲ್ಲುತ್ತಿಲ್ಲ. ಇದೀಗ,RAILWAY ಸಿಬ್ಬಂದಿ ಮುಷ್ಕರ ಆರಂಭಿಸಿದ್ದು, ದೇಶದೆಲ್ಲೆಡೆ ರೈಲು ಸಂಚಾರ ಸ್ಥಗಿತವಾಗಿದೆ. ಇದರಿಂದ ಸಾರ್ವಜನಿಕರ ಪ್ರಯಾಣ ಮತ್ತು ಸರಕು ಸಾಗಣೆಯ ಮೇಲೆ ಭಾರೀ ಪರಿಣಾಮ ಉಂಟಾಗಿದೆ.ಮಂಗಳವಾರದಿಂದ ದೇಶಾದ್ಯಂತ RAILWAY ಸಂಚಾರ ರದ್ದುಗೊಳಿಸಲಾಗಿದೆ.

ಪಿಂಚಣಿ ಮತ್ತು ಇತರ ಸವಲತ್ತುಗಳನ್ನು ಒದಗಿಸಲು ಕೋರಿ RAILWAY ಸಿಬ್ಬಂದಿ ಮುಷ್ಕರ ಆರಂಭಿಸಿದ್ದಾರೆ. RAILWAY ಸಿಬ್ಬಂದಿಯ ಮುಖಂಡರ ಜೊತೆ ಸರ್ಕಾರ ನಡೆಸಿದ ಮಾತುಕತೆ ವಿಫಲವಾಗಿದೆ.”ಮೊಹಮದ್​ ಯೂನುಸ್​ ನೇತೃತ್ವದ ಮಧ್ಯಂತರ ಸರ್ಕಾರವು RAILWAY ಸಿಬ್ಬಂದಿ ಜೊತೆ ಸೋಮವಾರ ಸಭೆ ನಡೆಸಿದ್ದು, ಯಾವುದೇ ಫಲ ಕಂಡಿಲ್ಲ. ಇದರಿಂದಾಗಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಪರಿಗಣಿಸದಿದ್ದರೆ, ಮುಷ್ಕರ ಅನಿರ್ದಿಷ್ಟಾವಧಿಗೆ ಮುಂದುವರಿಯುತ್ತದೆ” ಎಂದು ಬಾಂಗ್ಲಾದೇಶ RAILWAY ರನ್ನಿಂಗ್ ಸ್ಟಾಫ್ ಮತ್ತು ವರ್ಕರ್ಸ್ ಯೂನಿಯನ್‌ನ ಹಂಗಾಮಿ ಅಧ್ಯಕ್ಷ ಸೈದೂರ್ ರೆಹಮಾನ್ ಎಚ್ಚರಿಕೆ ರವಾನಿಸಿದ್ದಾರೆ.

Passenger traffic:ಮಾಧ್ಯಮಗಳ ಜೊತೆ ಮಾತನಾಡಿದ ದೇಶದ RAILWAY ವ್ಯವಹಾರಗಳ ಸಲಹೆಗಾರರು, ರಾಷ್ಟ್ರವ್ಯಾಪಿ ನಡೆಯುತ್ತಿರುವ ಮುಷ್ಕರವು ವಿಷಾದನೀಯ. ಪ್ರಯಾಣಿಕರಿಗೆ ಸಮಸ್ಯೆ ಉಂಟಾಗಿದ್ದು, ಅದನ್ನು ನಿಭಾಯಿಸಲು ಪ್ರಯತ್ನಿಸಲಾಗುತ್ತಿದೆ.

ಪ್ರತಿಭಟನಾಕಾರರು ಮುಷ್ಕರವನ್ನು ಕೊನೆಗೊಳಿಸುವಂತೆ ಒತ್ತಾಯಿಸಿದರು. ಬಿಕ್ಕಟ್ಟು ಪರಿಹಾರಕ್ಕೆ ಸರ್ಕಾರದ ಜೊತೆ ಮಾತುಕತೆಗೆ ಬರಲು ಪ್ರತಿಭಟನಾಕಾರರಿಗೆ ಮನವಿ ಮಾಡಿದರು.RAILWAY ಸಿಬ್ಬಂದಿಯ ಮುಷ್ಕರದ ಬಗ್ಗೆ ಮಾಹಿತಿ ಇಲ್ಲದ ಪ್ರಯಾಣಿಕರು ರೈಲು ನಿಲ್ದಾಣಗಳಿಗೆ ಆಗಮಿಸುತ್ತಿದ್ದಾರೆ.

ರಾಜಧಾನಿ ಢಾಕಾದ ಕಮಲಾಪುರ ರೈಲು ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರು ರೈಲಿಗಾಗಿ ಕಾದು ಕುಳಿತಿದ್ದರು. ಬಳಿಕ ಮುಷ್ಕರದ ಬಗ್ಗೆ ತಿಳಿದು ಮನೆಯ ಹಾದಿ ಹಿಡಿದರು. ಈ ವೇಳೆ RAILWAY ವ್ಯವಹಾರಗಳ ಸಲಹೆಗಾರ ಫೌಜುಲ್ ಕಬೀರ್ ಖಾನ್ ಸ್ಥಳಕ್ಕೆ ಭೇಟಿ ನೀಡಿದಾಗ, ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು.

Bus arrangement for travel:ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವಿರುದ್ಧ ಕಳೆದ ವರ್ಷ ನಾಗರಿಕ ದಂಗೆ ನಡೆದು ನೂರಾರು ಜನರ ಪ್ರಾಣಾಹುತಿಯಾಗಿತ್ತು. ಹಸೀನಾ ಅವರು ಪಲಾಯನಗೊಂಡು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.

ಸರ್ಕಾರದ ಪತನದ ಬಳಿಕ ಮೊಹಮದ್​ ಯೂನುಸ್​ ಅವರು ಮಧ್ಯಂತರ ಸರ್ಕಾರ ರಚನೆ ಮಾಡಿ ಅಧಿಕಾರ ನಡೆಸುತ್ತಿದ್ದಾರೆ. ಈ ಮಧ್ಯೆಯೇ ಮತ್ತೊಂದು ಬೃಹತ್​ ಪ್ರತಿಭಟನೆಯನ್ನು ದೇಶ ಎದುರಿಸುವಂತಾಗಿದೆ.ತಮ್ಮ ಟಿಕೆಟ್​ ಹಣವನ್ನು ಮರುಪಾವತಿಸಲು ಕೋರಿದ್ದಾರೆ. ಇನ್ನೊಂದೆಡೆ, ರಾಜ್‌ಶಾಹಿ ರೈಲು ನಿಲ್ದಾಣದಲ್ಲಿ ಕೋಪಗೊಂಡ ಪ್ರಯಾಣಿಕರು ನಿಲ್ದಾಣದ ಪೀಠೋಪಕರಣಗಳನ್ನು ಒಡೆದುಹಾಕಿದ್ದಾರೆ.

ಸಿಬ್ಬಂದಿಯ ಮೇಲೆ ದಾಳಿ ಕೂಡ ನಡೆಸಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.ರೈಲು ನಿಲ್ದಾಣಗಳಲ್ಲಿ ಜಮಾಯಿಸಿದ ಜನರ ಪ್ರಯಾಣಕ್ಕೆ ಸರ್ಕಾರವು, ಬಸ್​ಗಳ ವ್ಯವಸ್ಥೆ ಮಾಡಿದೆ. ಆದ್ರೆ ದೂರದ ಪ್ರಯಾಣ ಕೈಗೊಳ್ಳುವವರು ಇದನ್ನು ನಿರಾಕರಿಸಿದ್ದಾರೆ.

 

ಇದನ್ನು ಓದಿರಿ :BIRD CONSERVATION IN LADAKH:ಇವುಗಳ ಮಹತ್ವವೇನು ಗೊತ್ತಾ?

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...