Dhaka (Bangladesh) News:
ರಾಜಕೀಯವಾಗಿ ಅಸ್ಥಿರಗೊಂಡಿರುವ ಬಾಂಗ್ಲಾದೇಶದಲ್ಲಿ ಪ್ರತಿಭಟನೆಗಳು ನಿಲ್ಲುತ್ತಿಲ್ಲ. ಇದೀಗ,RAILWAY ಸಿಬ್ಬಂದಿ ಮುಷ್ಕರ ಆರಂಭಿಸಿದ್ದು, ದೇಶದೆಲ್ಲೆಡೆ ರೈಲು ಸಂಚಾರ ಸ್ಥಗಿತವಾಗಿದೆ. ಇದರಿಂದ ಸಾರ್ವಜನಿಕರ ಪ್ರಯಾಣ ಮತ್ತು ಸರಕು ಸಾಗಣೆಯ ಮೇಲೆ ಭಾರೀ ಪರಿಣಾಮ ಉಂಟಾಗಿದೆ.ಮಂಗಳವಾರದಿಂದ ದೇಶಾದ್ಯಂತ RAILWAY ಸಂಚಾರ ರದ್ದುಗೊಳಿಸಲಾಗಿದೆ.
ಪಿಂಚಣಿ ಮತ್ತು ಇತರ ಸವಲತ್ತುಗಳನ್ನು ಒದಗಿಸಲು ಕೋರಿ RAILWAY ಸಿಬ್ಬಂದಿ ಮುಷ್ಕರ ಆರಂಭಿಸಿದ್ದಾರೆ. RAILWAY ಸಿಬ್ಬಂದಿಯ ಮುಖಂಡರ ಜೊತೆ ಸರ್ಕಾರ ನಡೆಸಿದ ಮಾತುಕತೆ ವಿಫಲವಾಗಿದೆ.”ಮೊಹಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರವು RAILWAY ಸಿಬ್ಬಂದಿ ಜೊತೆ ಸೋಮವಾರ ಸಭೆ ನಡೆಸಿದ್ದು, ಯಾವುದೇ ಫಲ ಕಂಡಿಲ್ಲ. ಇದರಿಂದಾಗಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಪರಿಗಣಿಸದಿದ್ದರೆ, ಮುಷ್ಕರ ಅನಿರ್ದಿಷ್ಟಾವಧಿಗೆ ಮುಂದುವರಿಯುತ್ತದೆ” ಎಂದು ಬಾಂಗ್ಲಾದೇಶ RAILWAY ರನ್ನಿಂಗ್ ಸ್ಟಾಫ್ ಮತ್ತು ವರ್ಕರ್ಸ್ ಯೂನಿಯನ್ನ ಹಂಗಾಮಿ ಅಧ್ಯಕ್ಷ ಸೈದೂರ್ ರೆಹಮಾನ್ ಎಚ್ಚರಿಕೆ ರವಾನಿಸಿದ್ದಾರೆ.
Passenger traffic:ಮಾಧ್ಯಮಗಳ ಜೊತೆ ಮಾತನಾಡಿದ ದೇಶದ RAILWAY ವ್ಯವಹಾರಗಳ ಸಲಹೆಗಾರರು, ರಾಷ್ಟ್ರವ್ಯಾಪಿ ನಡೆಯುತ್ತಿರುವ ಮುಷ್ಕರವು ವಿಷಾದನೀಯ. ಪ್ರಯಾಣಿಕರಿಗೆ ಸಮಸ್ಯೆ ಉಂಟಾಗಿದ್ದು, ಅದನ್ನು ನಿಭಾಯಿಸಲು ಪ್ರಯತ್ನಿಸಲಾಗುತ್ತಿದೆ.
ಪ್ರತಿಭಟನಾಕಾರರು ಮುಷ್ಕರವನ್ನು ಕೊನೆಗೊಳಿಸುವಂತೆ ಒತ್ತಾಯಿಸಿದರು. ಬಿಕ್ಕಟ್ಟು ಪರಿಹಾರಕ್ಕೆ ಸರ್ಕಾರದ ಜೊತೆ ಮಾತುಕತೆಗೆ ಬರಲು ಪ್ರತಿಭಟನಾಕಾರರಿಗೆ ಮನವಿ ಮಾಡಿದರು.RAILWAY ಸಿಬ್ಬಂದಿಯ ಮುಷ್ಕರದ ಬಗ್ಗೆ ಮಾಹಿತಿ ಇಲ್ಲದ ಪ್ರಯಾಣಿಕರು ರೈಲು ನಿಲ್ದಾಣಗಳಿಗೆ ಆಗಮಿಸುತ್ತಿದ್ದಾರೆ.
ರಾಜಧಾನಿ ಢಾಕಾದ ಕಮಲಾಪುರ ರೈಲು ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರು ರೈಲಿಗಾಗಿ ಕಾದು ಕುಳಿತಿದ್ದರು. ಬಳಿಕ ಮುಷ್ಕರದ ಬಗ್ಗೆ ತಿಳಿದು ಮನೆಯ ಹಾದಿ ಹಿಡಿದರು. ಈ ವೇಳೆ RAILWAY ವ್ಯವಹಾರಗಳ ಸಲಹೆಗಾರ ಫೌಜುಲ್ ಕಬೀರ್ ಖಾನ್ ಸ್ಥಳಕ್ಕೆ ಭೇಟಿ ನೀಡಿದಾಗ, ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು.
Bus arrangement for travel:ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವಿರುದ್ಧ ಕಳೆದ ವರ್ಷ ನಾಗರಿಕ ದಂಗೆ ನಡೆದು ನೂರಾರು ಜನರ ಪ್ರಾಣಾಹುತಿಯಾಗಿತ್ತು. ಹಸೀನಾ ಅವರು ಪಲಾಯನಗೊಂಡು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.
ಸರ್ಕಾರದ ಪತನದ ಬಳಿಕ ಮೊಹಮದ್ ಯೂನುಸ್ ಅವರು ಮಧ್ಯಂತರ ಸರ್ಕಾರ ರಚನೆ ಮಾಡಿ ಅಧಿಕಾರ ನಡೆಸುತ್ತಿದ್ದಾರೆ. ಈ ಮಧ್ಯೆಯೇ ಮತ್ತೊಂದು ಬೃಹತ್ ಪ್ರತಿಭಟನೆಯನ್ನು ದೇಶ ಎದುರಿಸುವಂತಾಗಿದೆ.ತಮ್ಮ ಟಿಕೆಟ್ ಹಣವನ್ನು ಮರುಪಾವತಿಸಲು ಕೋರಿದ್ದಾರೆ. ಇನ್ನೊಂದೆಡೆ, ರಾಜ್ಶಾಹಿ ರೈಲು ನಿಲ್ದಾಣದಲ್ಲಿ ಕೋಪಗೊಂಡ ಪ್ರಯಾಣಿಕರು ನಿಲ್ದಾಣದ ಪೀಠೋಪಕರಣಗಳನ್ನು ಒಡೆದುಹಾಕಿದ್ದಾರೆ.
ಸಿಬ್ಬಂದಿಯ ಮೇಲೆ ದಾಳಿ ಕೂಡ ನಡೆಸಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.ರೈಲು ನಿಲ್ದಾಣಗಳಲ್ಲಿ ಜಮಾಯಿಸಿದ ಜನರ ಪ್ರಯಾಣಕ್ಕೆ ಸರ್ಕಾರವು, ಬಸ್ಗಳ ವ್ಯವಸ್ಥೆ ಮಾಡಿದೆ. ಆದ್ರೆ ದೂರದ ಪ್ರಯಾಣ ಕೈಗೊಳ್ಳುವವರು ಇದನ್ನು ನಿರಾಕರಿಸಿದ್ದಾರೆ.
ಇದನ್ನು ಓದಿರಿ :BIRD CONSERVATION IN LADAKH:ಇವುಗಳ ಮಹತ್ವವೇನು ಗೊತ್ತಾ?