spot_img
spot_img

BBMP CAMPAIGN : 250 ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ

spot_img
spot_img

Share post:

Bangalore News:

ಬೆಂಗಳೂರು ನಗರದ 250 ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆ ವಿಶೇಷ ಆಯುಕ್ತ ಸುರಳ್ಕರ್​ ವಿಕಾಸ್​ ತಿಳಿಸಿದ್ದಾರೆ.BBMP CAMPAIGN ಪಶುಪಾಲನೆ ವಿಭಾಗದಿಂದ ಪ್ರಾಣಿಗಳ ಆರೋಗ್ಯದ ಮೂಲಕ ಸಾರ್ವಜನಿಕ ಆರೋಗ್ಯದ ಶೀರ್ಷಿಕೆಯಡಿ ಸಮುದಾಯ ಪ್ರಾಣಿಗಳ ಸಹಬಾಳ್ವೆ ಮೂಡಿಸುವ ನಿಟ್ಟಿನಲ್ಲಿ ಇಂದು ಡಾ. ರಾಜ್ ಕುಮಾರ್ ಗಾಜಿನ ಮನೆಯ ಬಳಿ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

BBMP CAMPAIGN ವ್ಯಾಪ್ತಿಯಲ್ಲಿ ಸಮುದಾಯ ಪ್ರಾಣಿಗಳ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಲು ನಗರದ 250 ಸ್ಥಳಗಳಲ್ಲಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆಯ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದರು.

ಸಮುದಾಯ ಪ್ರಾಣಿಗಳಿಗಾಗಿ ಪಾಲಿಕೆಯ ಪಶುಪಾಲನಾ ವಿಭಾಗದಿಂದ ಏನೆಲ್ಲಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ, ಪ್ರಾಣಿಗಳ ಕುರಿತು ಯಾವೆಲ್ಲಾ ಕಾಯ್ದೆಗಳಿವೆ, ನಾಗರಿಕರು ಏನು ಮಾಡಬಹುದು-ಏನು ಮಾಡಬಾರದು, ಏನಾದರು ಸಮಸ್ಯೆಯಾದರೆ ಯಾರನ್ನು ಸಂಪರ್ಕಿಸಬೇಕು ಸೇರಿದಂತೆ ಇತ್ಯಾದಿ ವಿಷಯಗಳ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಲಾಗುವುದು ಎಂದು ಹೇಳಿದರು.

ಜಾಗೃತಿ ಅಭಿಯಾನಗಳ ಕಾರ್ಯಕ್ರಮದ ವೇಳಾಪಟ್ಟಿಯನ್ನು ಪಶುಪಾಲನಾ ವಿಭಾಗದ ಸಾಮಾಜಿಕ ಜಾಲತಾಣ Instagram ಹ್ಯಾಂಡಲ್ @bbmp_animalhusbandry ನಲ್ಲಿ ಹಾಕಲಾಗಿದ್ದು, ಅದರಲ್ಲಿ ಎಲ್ಲಾ ಮಾಹಿತಿ ಲಭ್ಯವಿರಲಿದೆ. ನಗರದ ಎಲ್ಲಾ 8 ವಲಯಗಳಲ್ಲಿ ಸಮುದಾಯದ ಪ್ರಾಣಿಗಳ ಕುರಿತು ಬೀದಿ ನಾಟಕ, ನೃತ್ಯದ ಮೂಲಕ ನಾಗರಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಅಲ್ಲದೆ ಬಿತ್ತಿಪತ್ರಗಳನ್ನು ಕೂಡಾ ವಿತರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.  ನಾಗರಿಕರಿಂದ ಸಮುದಾಯದ ಪ್ರಾಣಿಗಳಿಗೆ ಆಗುವ ಸಮಸ್ಯೆಗಳನ್ನು ತಪ್ಪಿಸಲು, ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಜನರು ಅದರಲ್ಲಿ ಯಾವ ರೀತಿ ಪಾಲ್ಗೊಳ್ಳಬೇಕು.

ಮುನುಷ್ಯರಂತೆಯೇ ಪ್ರಾಣಿಗಳು ಕೂಡಾ ಎಂಬುದನ್ನು ಅರಿತು ಅವುಗಳ ಜೊತೆ ಕ್ರೂರತೆಯಿಂದ ವರ್ತಿಸದೆ ಸೌಹಾರ್ದತೆಯಿಂದಿರುವುದನ್ನು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.  ಈ ವೇಳೆ ವಿಭಾಗದ ಜಂಟಿ ನಿರ್ದೇಶಕ ಡಾ. ಚಂದ್ರಯ್ಯ, ಎಲ್ಲಾ ವಲಯಗಳ ಸಹಾಯಕ ನಿರ್ದೇಶಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

BBMP CAMPAIGN ಪ್ರಾಣಿಗಳನ್ನು ಸ್ಥಳಾಂತರಿಸುವುದು ಅಥವಾ ಅವುಗಳಿಗೆ ಆಹಾರ ಮತ್ತು ನೀರು ಸಿಗದಂತೆ ಮಾಡುವುದು, ಪ್ರಾಣಿಗಳನ್ನು ಕೊಲ್ಲುವುದು ಅಥವಾ ಅಂಗವಿಕಲಗೊಳಿಸುವುದು ಬಿ.ಎನ್.ಎಸ್ ಸೆಕ್ಷನ್ 325 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, 5 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಬಹುದಾಗಿದೆ.

ಪ್ರಾಣಿಗಳಿಗೆ ಆಹಾರ ನೀಡುವವರಿಗೆ ಕಿರುಕುಳ ನೀಡುವುದು, ಅವರ ಮೇಲೆ ಗುಂಪು ಹಲ್ಲೆ ಮಾಡುವುದು ಮತ್ತು ಅವುಗಳಿಗೆ ಆಹಾರ ನೀಡುವುದನ್ನು ತಡೆಯುವುದು ಕ್ರಿಮಿನಲ್ ಬೆದರಿಕೆಯ ಅಡಿಯಲ್ಲಿ ಶಿಕ್ಷಾರ್ಹ ಮತ್ತು 7 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದು ಹೇಳಿದರು.

ಇದನ್ನು ಓದಿರಿ : LAKSHMI HEBBALKAR : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸಚಿವ ಸತೀಶ್ ಜಾರಕಿಹೊಳಿ

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...