spot_img
spot_img

BBMP ಕಸದ ಲಾರಿ ಡಿಕ್ಕಿ ಹೊಡೆದು ಯುವಕ, ಯುವತಿ ಸಾವು.. ಮೃತ ಶಿಲ್ಪಾ ಯಾರು..?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನಿನ್ನೆ ರಾತ್ರಿ ಬೆಂಗಳೂರಿನ ಕೆಆರ್​ ಸರ್ಕಲ್​​ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕ-ಯುವತಿ ಸಾವನ್ನಪ್ಪಿದ್ದಾರೆ. ಪ್ರಶಾಂತ್ (25), ಶಿಲ್ಪ (25) ಮೃತ ದುರ್ದೈವಿಗಳು.

ರಾತ್ರಿ ರಾತ್ರಿ 9 ಗಂಟೆ ಊಟ ಮುಗಿಸಿಕೊಂಡು ಬೈಕ್​​ನಲ್ಲಿ ಹೋಗ್ತಿದ್ದಾಗ ಬಿಬಿಎಂಪಿಯ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಐಟಿಪಿಎಲ್ ಟಿಸಿಎಸ್​ನಲ್ಲಿ ಕೆಲಸ ಮಾಡ್ತಿದ್ದರು. ಇನ್ನು, ಪ್ರಶಾಂತ್ ಮೂಲತಃ ಬೆಂಗಳೂರಿನ ಬಾಣಸವಾಡಿ ನಿವಾಸಿ ಎಂದು ತಿಳಿದುಬಂದಿದೆ. ಈತನ ಸ್ನೇಹಿತೆ ಶಿಲ್ಪಾ ಆಂಧ್ರ ಪ್ರದೇಶದವಳು. ಉದ್ಯೋಗ ಅರಿಸಿ ಬೆಂಗಳೂರಿಗೆ ಬಂದಿದ್ದ ಶಿಲ್ಪಾ ಪಿಜಿ ಒಂದರಲ್ಲಿ ವಾಸವಿದ್ದಳು.

ನಿನ್ನೆ ಭಾನುವಾರ ರಜೆ ಹಿನ್ನೆಲೆಯಲ್ಲಿ ಸಂಜೆ ಸ್ನೇಹಿತನ ಜೊತೆ ಊಟಕ್ಕೆ ಎಂದು ಹೋಗಿದ್ದಳು. ರಾತ್ರಿಯ ಊಟ ಮುಗಿಸಿ ಮೆಜೆಸ್ಟಿಕ್​​ನಿಂದ ಕೆ.ಆರ್.ಸರ್ಕಲ್ ಮಾರ್ಗವಾಗಿ ಬೈಕ್​ನಲ್ಲಿ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಸಿಐಡಿ ಸಿಗ್ನಲ್ ಮಾರ್ಗದಿಂದ ಕೆ.ಆರ್.ಸರ್ಕಲ್ ಕಡೆ ವೇಗವಾಗಿ ಬಂದ ಕಸದ ಲಾರಿ, ಬೈಕ್​ಗೆ ಗುದ್ದಿದೆ. ಅಪಘಾತದ ರಭಸಕ್ಕೆ 10 ಮೀಟರ್ ನಷ್ಟು ದೂರ ಮೃತರ ದೇಹಗಳು ಹೋಗಿ ಬಿದ್ದಿವೆ.

ಪರಿಣಾಮ ರಸ್ತೆ ಮೇಲೆ ರಕ್ತ ಚೆಲ್ಲಿದೆ. ಕೂಡಲೇ ಅಪಘಾತಕ್ಕೊಳಗಾದವರನ್ನ ಆಸ್ಪತ್ರೆಗೆ ಸಾಗಿಸುವ ಕೆಲಸ ನಡೆದಿತ್ತು, ಆದರೆ ಮಾರ್ಗದಲ್ಲಿಯೇ ಸಾವನ್ನಪ್ಪಿದ್ದಾರೆ. ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

SPIDER MAN SUITS:ರಿಸರ್ಚ್ ಟೀಂನಿಂದ ರೆಡಿಯಾಗ್ತಿದೆ ಸೂಪರ್ ಮ್ಯಾನ್ ಶೈಲಿಯ ಸೂಟ್!

Spider-Man Suits News: ಇವರು ಧರಿಸಿಕೊಂಡಿರುವ SUITS ಫುಲ್​ ಸ್ಟ್ರಾಂಗ್​ ಆಗಿರುತ್ತದೆ. ಬುಲೆಟ್​ ಸೇರಿದಂತೆ ಅನೇಕ ಆಯುಧಗಳಿಂದ ದಾಳಿ ಮಾಡಿದ್ರೂ ಸಹ ಆ SUITS​ನಿಂದ ಅವರು...

HUSBAND KILLS WIFE:ಅಮ್ಮನ ಮೃತದೇಹದ ಬಳಿ ಕಂದಮ್ಮನ ಆಕ್ರಂದನ

Belgaum News: ಮೀರಾಬಾಯಿ (25) ಎಂಬವರೇ KILLSಯಾದ ಮಹಿಳೆ. ಬಾಲಾಜಿ ಕಬಲಿ (35) ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ಮೂಲದ ದಂಪತಿ ಕಬ್ಬು...

EARTHQUAKE IN AFGHANISTAN:ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆ ದಾಖಲು

Kabul, Afghanistan News: ಜನವರಿ 30 ರಂದು ಅಫ್ಘಾನಿಸ್ತಾನದಲ್ಲಿ ಭೂಮಿ ಕಂಪಿಸಿತ್ತು. ಸೋಮವಾರ ತಡರಾತ್ರಿ ಮತ್ತೆ ಭೂಮಿ ಕಂಪಿಸಿದೆ. ಇದರಿಂದ ಅಲ್ಲಿನ ಜನ ಭಯಭೀತಗೊಂಡಿದ್ದಾರೆ.ಈ ರೀತಿಯ...

205 INDIANS DEPORTED BY US:ಅಕ್ರಮವಾಗಿ ಅಮೆರಿಕದಲ್ಲಿದ್ದ ಭಾರತೀಯರ ಗಡಿಪಾರು

Amritsar News: ಅಕ್ರಮ ವಲಸಿಗರ ವಿರುದ್ದ ಅಮೆರಿಕ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಕಠಿಣಕ್ರಮ ಕೈಗೊಂಡಿದ್ದಾರೆ. ಅದರಂತೆ ದಾಖಲೆ ರಹಿತವಾಗಿ ಅಮೆರಿಕದಲ್ಲಿ ನೆಲೆನಿಂತಿದ್ದ INDIANSನ್ನು ಮರಳಿ ತವರಿಗೆ...