spot_img
spot_img

BCCI GIFTS EXPENSIVE RING: ವಿಶ್ವಕಪ್ ವಿಜೇತ ತಂಡಕ್ಕೆ ಬಿಸಿಸಿಐನಿಂದ ಅತ್ಯಂತ ದುಬಾರಿ ಗಿಫ್ಟ್.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Hyderabad News:

ವಿಜೇತ ತಂಡದ ಪ್ರತಿಯೊಬ್ಬ ಆಟಗಾರನಿಗೆ ಅತ್ಯಮೂಲ್ಯವಾದ ವಜ್ರದ ಉಂಗುರಗಳನ್ನು ನೀಡಿದೆ. ಇತ್ತೀಚೆಗೆ, ಬಿಸಿಸಿಐ ನಮನ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಿತ್ತು. ಈ ಸಮಾರಂಭದಲ್ಲಿ ಆಟಗಾರರಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾದ ವಜ್ರದ ಉಂಗುರಗಳನ್ನು ನೀಡಲಾಯಿತು.ಕಳೆದ ವರ್ಷ ವೆಸ್ಟ್ ಇಂಡೀಸ್‌ನಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಜಯಭೇರಿ ಬಾರಿಸಿತ್ತು. ಬರೋಬ್ಬರಿ 13 ವರ್ಷಗಳ ನಂತರ ಭಾರತ ವಿಶ್ವಕಪ್​ಗೆ ಮುತ್ತಿಕ್ಕಿತ್ತು. ಬಳಿಕ ಬಿಸಿಸಿಐ ಭಾರತೀಯ ಆಟಗಾರರನ್ನು 125 ಕೋಟಿ ರೂ. ನಗದು ಬಹುಮಾನ ನೀಡಿ ಗೌರವಿಸಿತ್ತು. ಇದರ ಜೊತೆಗೆ ಆಟಗಾರರಿಗೆ ಮತ್ತೊಂದು ಅಮೂಲ್ಯ ಬಹುಮಾನವನ್ನು ಬಿಸಿಸಿಐ ನೀಡಿದೆ.ಈ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಇತ್ತೀಚೆಗೆ ವಿಶೇಷ ವೀಡಿಯೊವನ್ನು ಬಿಡುಗಡೆ ಮಾಡಿದೆ.

ಟಿ20ಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಮ್ ಇಂಡಿಯಾಗೆ ನಾವು ಚಾಂಪಿಯನ್ಸ್ RING ನೀಡುತ್ತಿದ್ದೇವೆ. ಈ ವಜ್ರಗಳು ಶಾಶ್ವತವಾಗಿರಬಹುದು, ಆದರೆ ಈ ಗೆಲುವು ಖಂಡಿತವಾಗಿಯೂ ಕೋಟ್ಯಂತರ ಜನರ ಹೃದಯಗಳಲ್ಲಿ ಅಮರವಾಗಿದೆ. ಈ ಸಿಹಿ ನೆನಪುಗಳು ನಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತವೆ ಎಂದು ಬಿಸಿಸಿಐ ಹೇಳಿದೆ.ಕಳೆದ ವರ್ಷ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್​ ಆಗಿದ್ದ ಭಾರತ ತಂಡಕ್ಕೆ ಬಿಸಿಸಿಐ ದುಬಾರಿ ಬೆಲೆಯ ಉಡುಗೊರೆ ನೀಡಿ ಗೌರವಿಸಿದೆ.ಏತನ್ಮಧ್ಯೆ, ಕಳೆದ ವರ್ಷ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ಭಾರತ ಅಜೇಯವಾಗಿ 9 ಪಂದ್ಯಗಳನ್ನು ಗೆದ್ದು ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಸೋಲಿಸುವ ಮೂಲಕ ಭಾರತ ಟಿ20 ವಿಶ್ವಕಪ್ ಫೈನಲ್ ಅನ್ನು ಗೆದ್ದುಕೊಂಡಿತು.

ಆಗ ಆಟಗಾರರ ಮೇಲೆ ಕೋಟ್ಯಂತರ ರೂಪಾಯಿಗಳ ಸುರಿಮಳೆಗೈದಿದ್ದ ಮಂಡಳಿ, ಈಗ ಮತ್ತೊಮ್ಮೆ ಅವರಿಗೆ ವಜ್ರದ ಉಂಗುರಗಳನ್ನು ನೀಡಿ ಗೌರವಿಸಿದೆ. ಇವು ಕೂಡ ಕೋಟಿಗೂ ಹೆಚ್ಚಿನ ಬೆಲ್ಲೆಯದ್ದಾಗಿವೆ. ಬಿಸಿಸಿಐ ತನ್ನ ಶ್ರೇಣಿಗೆ ತಕ್ಕ ಉಡುಗೊರೆಗಳನ್ನು ನೀಡಿದೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.ಈ ಉಂಗುರ ವಜ್ರ ಮತ್ತು ಚಿನ್ನದಿಂದ ಮಾಡಲ್ಪಟ್ಟಿದೆ. ಈ ಉಂಗುರದ ಮೇಲ್ಭಾಗದಲ್ಲಿ “T20 ವಿಶ್ವಕಪ್ ಚಾಂಪಿಯನ್ ಇಂಡಿಯಾ” ಎಂಬ ಅಕ್ಷರಗಳನ್ನು ಸಹ ಕೆತ್ತಲಾಗಿದೆ. ಇದರೊಂದಿಗೆ ಅಶೋಕ ಚಕ್ರದ ಚಿಹ್ನೆಯನ್ನೂ ಮುದ್ರಿಸಲಾಗಿದೆ.

ಇದಲ್ಲದೆ, RINGನ ಎರಡೂ ಬದಿಗಳಲ್ಲಿ, ಆಟಗಾರರ ಹೆಸರುಗಳು ಮತ್ತು ಜೆರ್ಸಿ ಸಂಖ್ಯೆ, ಹಾಗೆಯೇ ಟಿ20ಯಲ್ಲಿ ಟೀಂ ಇಂಡಿಯಾ ಯಾವ ತಂಡದ ವಿರುದ್ದ ಗೆದ್ದಿದೆ ಎಂಬುದನ್ನು ಮುದ್ರಿಸಲಾಗಿದೆ. ವೀಡಿಯೊದಲ್ಲಿ ರೋಹಿತ್ ಶರ್ಮಾ, ಬುಮ್ರಾ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಈ ಉಂಗುರಗಳನ್ನು ತೆಗೆದುಕೊಳ್ಳುತ್ತಿರುವುದನ್ನು ತೋರಿಸಲಾಗಿದೆ.

 

ಇದನ್ನು ಓದಿರಿ :Women to be provided skills to enhance their livelihood

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...