spot_img
spot_img

BELAGAVI CONGRESS SAMAVESHA : ಬೆಳಗಾವಿಯಲ್ಲಿ ಮಂಗಳವಾರ ಗಾಂಧೀಜಿ ಪ್ರತಿಮೆ ಉದ್ಘಾಟನೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Belgaum News:

ಬೆಳಗಾವಿಯಲ್ಲಿ CONGRESS ಬಹಿರಂಗ ಸಮಾವೇಶ ಮತ್ತು ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ ಶುರುವಾಗಿದೆ. ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ CONGRESS ಅಧೀವೇಶನದ ಶತಮಾನೋತ್ಸವಕ್ಕೆ ಸಾಕ್ಷಿಯಾಗಿರುವ ಬೆಳಗಾವಿಯಲ್ಲಿ CONGRESS ಬಹಿರಂಗ ಸಮಾವೇಶ ಮತ್ತು ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ ಶುರುವಾಗಿದೆ.ಸುವರ್ಣ ವಿಧಾನಸೌಧದ ಉತ್ತರ‌ ಪ್ರವೇಶ ದ್ವಾರದ ಎದುರಿನಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬೆಳಗ್ಗೆ 10.30ಕ್ಕೆ ಅನಾವರಣಗೊಳಿಸಲಿದ್ದಾರೆ.ಮಾಜಿ ಪ್ರಧಾನಿ ಡಾ.

ಮನಮೋಹನ್ ಸಿಂಗ್ ಅವರ ನಿಧನದಿಂದ ಮೊಟಕುಗೊಂಡಿದ್ದ ಕಾರ್ಯಕ್ರಮ ಮಂಗಳವಾರ (ಜ.21) ಆಯೋಜಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ನಾಟಕ ವಿಧಾನ‌ಸಭೆ ಸಭಾಧ್ಯಕ್ಷ ಯು.ಟಿ. ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿ ಸಚಿವರು, ಸಂಸದರು, ಶಾಸಕರು, ಸ್ವಾತಂತ್ರ್ಯ ಯೋಧರು ಹಾಗೂ ಅವರ‌ ಕುಟುಂಬಸ್ಥರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕಾರ್ಯಕ್ರಮದ‌ ಘನ ಉಪಸ್ಥಿತಿ‌ ವಹಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದ‌ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ‌ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪ್ರಕಟಿತ 1924ರ CONGRESS ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಮಹಾತ್ಮ ಗಾಂಧೀಜಿಯವರು ಮಾಡಿದ ಭಾಷಣ ಮತ್ತು ನಿರ್ಣಯಗಳಿಂದ ಕೂಡಿದ ಕನ್ನಡ‌ ಹಾಗೂ ಆಂಗ್ಲ‌ ಭಾಷೆಯ “ಗಾಂಧಿ ಭಾರತ-ಮರುನಿರ್ಮಾಣ” ಪುಸ್ತಕಗಳನ್ನು ಗಣ್ಯರು ಬಿಡುಗಡೆಗೊಳಿಸಲಿದ್ದಾರೆ.

25 feet tall statue of Gandhiji: ಪೀಠದ ಸುತ್ತಲೂ ಅವರ ಸಂದೇಶಗಳನ್ನು ಬರೆಯಲಾಗಿದೆ. ಪ್ರತಿಮೆಯು ಒಟ್ಟು 4.83 ಕೋಟಿ ರೂ. ವೆಚ್ಚದಲ್ಲಿ ಪಂಚಲೋಹದಿಂದ ನಿರ್ಮಾಣಗೊಂಡಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದ ಮೈಸೂರಿನ ಕಲಾವಿದ ಅರುಣ್​ ಯೋಗಿರಾಜ್​ ಗಾಂಧೀಜಿಯವರ ಈ ಪ್ರತಿಮೆಯನ್ನು ನಿರ್ಮಿಸಿದ್ದು ವಿಶೇಷ.ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ನಿರ್ಮಿಸಲಾದ ಮಹಾತ್ಮ ಗಾಂಧೀಜಿಯವರ ಪ್ರತಿಮೆ ನಿರ್ಮಾಣಕ್ಕೆ ಸುಮಾರು 20 ಟನ್ ತೂಕದ ಕಂಚು ಬಳಸಲಾಗಿದೆ.

ಇದು ನೆಲಮಟ್ಟದಿಂದ ಸುಮಾರು 37 ಅಡಿ ಎತ್ತರದಲ್ಲಿದೆ. ಪೀಠದ ಎತ್ತರವೇ 12 ಅಡಿಯಿದ್ದು, ಪ್ರತಿಮೆಯು 17.40 ಅಡಿ ಅಗಲ ಮತ್ತು 14 ಅಡಿ ಉದ್ದವಿದೆ. ಒಟ್ಟು 25 ಅಡಿ ಎತ್ತರದ ಪ್ರತಿಮೆ ಇದಾಗಿದೆ.

Grand Forum: ಅದೇ ರೀತಿ ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ‌.ಕೆ. ಶಿವಕುಮಾರ ಸೇರಿ ಸಚಿವರು, ಶಾಸಕರು ಸೇರಿ ಲಕ್ಷಾಂತರ ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆಯಿದೆ.ನಗರದ ಸಿಪಿಎಡ್ ಮೈದಾನದಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮಕ್ಕೆ ಅದ್ಧೂರಿ ವೇದಿಕೆ ಸಿದ್ಧಗೊಂಡಿದೆ.‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿ 60 ರಾಷ್ಟ್ರೀಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

Banner Rush: ರಾಷ್ಟ್ರೀಯ ನಾಯಕರನ್ನು ಸ್ವಾಗತಿಸುವ ಚಕ್ರಾಕಾರಾದ ಕಟೌಟ್​ಗಳು ಆಕರ್ಷಣೀಯವಾಗಿವೆ. ಎಲ್ಲೆಲ್ಲೂ CONGRESS ಬಾವುಟಗಳು ಕಾಣುತ್ತಿದ್ದು, ಬಹುತೇಕ ಬೆಳಗಾವಿ CONGRESS ಮಯವಾಗಿದೆ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಮುಖ್ಯ ಕಾರ್ಯಕ್ರಮದ ವೇದಿಕೆವರೆಗೂ ಬ್ಯಾನರ್​ಗಳ ರಾರಾಜಿಸುತ್ತಿವೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ ಅವರ ಬೃಹದಾಕಾರದ ಕಟೌಟ್​ಗಳು ಗಮನ ಸೆಳೆಯುತ್ತಿವೆ.

DKshi Thikani in Belgaum:  ಅಲ್ಲದೇ ಕಾರ್ಯಕ್ರಮ ಯಶಸ್ಸಿಗೆ ಹಲವು ನಾಯಕರನ್ನು ಭೇಟಿಯಾಗುವುದು, ಸಭೆ ನಡೆಸುವುದು ಸೇರಿ ದಕ್ಷಿಣ ಕಾಶಿ ಕಪಿಲೇಶ್ವರ ಮಂದಿರದಲ್ಲಿ ಕ್ಷೀರಾಭಿಷೇಕ ಕೂಡ ಮಾಡಿದ್ದಾರೆ.ಕಳೆದ ಮೂರು ದಿನಗಳಿಂದ ಬೆಳಗಾವಿಯಲ್ಲೇ ಠಿಕಾಣಿ ಹೂಡಿರುವ ಡಿ.ಕೆ.ಶಿವಕುಮಾರ್​ ಸಮಾವೇಶದ ಯಶಸ್ಸಿಗೆ ರೂಪುರೇಷೆ ಸಿದ್ಧಪಡಿಸುತ್ತಿದ್ದಾರೆ. ಮುಖ್ಯ ವೇದಿಕೆ, ಪ್ರತಿಮೆ ಉದ್ಘಾಟನೆ ಸೇರಿ ಪ್ರತಿಯೊಂದು ಜವಾಬ್ದಾರಿಯನ್ನು ಖುದ್ದು ಡಿಕೆಶಿ ಅವರೇ ನಿರ್ವಹಿಸುತ್ತಿದ್ದಾರೆ.

CM Final Preparation Check: ಇಂದು ಸಾಯಂಕಾಲ ಬೆಳಗಾವಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮೊದಲಿಗೆ ಗಾಂಧೀಜಿ ಪ್ರತಿಮೆ ಉದ್ಘಾಟನೆ ಆಗಲಿರುವ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು‌. ಇದಾದ ಬಳಿಕ ಸಿಪಿಎಡ್ ಮೈದಾನಕ್ಕೆ ಹೋಗಿ ಮುಖ್ಯ ವೇದಿಕೆಯನ್ನು ವೀಕ್ಷಿಸಿದರು.

ಇದನ್ನು ಓದಿರಿ : CHOLESTEROL LEVEL ACCORDING TO AGE : ವಯಸ್ಸಿಗೆ ತಕ್ಕಂತೆ ಕೊಲೆಸ್ಟ್ರಾಲ್ ಮಟ್ಟ ಎಷ್ಟಿರಬೇಕು?

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...