spot_img
spot_img

BELAGAVI CONGRESS SESSION : ಬೆಳಗಾವಿ ಜನರಿಗೆ ನಿರಾಸೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

BELAGAVI NEWS :

ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗೆ ನಗರಕ್ಕೆ ರಾಷ್ಟ್ರೀಯ ನಾಯಕರು ಆಗಮಿಸಿದ್ದಾರೆ. 1924ರಲ್ಲಿ ಕಾಂಗ್ರೆಸ್ ಅಧಿವೇಶನ ನಡೆದ ಜಾಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ವೀರಸೌಧದಲ್ಲಿ ಕರೆದಿದ್ದ ವಿಸ್ತೃತ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್ ಸೇರಿ ನಾಯಕರ ದಂಡೇ ಹರಿದು ಬಂದಿತ್ತು. ಮುಖ್ಯರಸ್ತೆಯಿಂದ ಸೌಧದವರೆಗೆ 100 ಮೀಟರ್ ನಡೆದುಕೊಂಡೇ ನಾಯಕರು ಬಂದರು. ಈ ವೇಳೆ ಅವರನ್ನು ತಮ್ಮ‌ ಮನೆಗಳ ಕಿಟಕಿಯಿಂದ‌ ಇಣುಕಿ ಅಕ್ಕಪಕ್ಕದವರು ನೋಡುತ್ತಿರುವುದು ಸಾಮಾನ್ಯವಾಗಿತ್ತು.

ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ರಾಷ್ಟ್ರೀಯ ನಾಯಕರನ್ನು ನೋಡಲು ಜನ ನಿಂತಿದ್ದರು. ಆದರೆ ಭದ್ರತೆ ದೃಷ್ಟಿಯಿಂದ ವೀರಸೌಧ ಬಳಿ ದೂರದಲ್ಲೇ ನಿಲ್ಲಿಸಿದ್ದರಿಂದ ಜನರಿಗೆ ನಿರಾಸೆ ಉಂಟಾಯಿತು. ವೀರಸೌಧ ಮುಂಭಾಗದ ಮನೆಗಳ ಗ್ಯಾಲರಿಯಲ್ಲಿ ನಿಂತಿದ್ದವರಿಗೆ ಮಾತ್ರ ಕೈ ನಾಯಕರ ದರ್ಶನ‌ ಸಿಗಲಿಲ್ಲ. ಏಕೆಂದರೆ ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತಿದ್ದ ಜನರನ್ನು ಪೊಲೀಸರು ಅಲ್ಲಿಂದ ತೆರವುಗೊಳಿಸಿದರು. ಇದರಿಂದ ನಾಯಕರನ್ನು ನೋಡಲು ಆಗದೇ ನಿರಾಸೆಯಿಂದ ಮನೆಯತ್ತ ಜನರು ಹೆಜ್ಜೆ ಹಾಕಿದರು. ಇದಕ್ಕೂ ಮೊದಲು ಮಾತನಾಡಿದ ಸ್ಥಳೀಯರಾದ ರೇಖಾ ಕೋರಿಶೆಟ್ಟಿ, ನಮ್ಮ ಏರಿಯಾಕ್ಕೆ ನೂರು ವರ್ಷಗಳ ಹಿಂದೆ ಗಾಂಧೀಜಿ ಆಗಮಿಸಿದ್ದರು. ಇಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಅವರು ವಹಿಸಿದ್ದು, ನಮಗೆ ಅತ್ಯಂತ ಹೆಮ್ಮೆ ಮತ್ತು ಖುಷಿ ವಿಚಾರ.

ಈಗ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ನೋಡಬೇಕೆಂದು ನಿಂತಿದ್ದೆವು. ಆದರೆ ನೋಡಲು ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸುಮಾರು 2 ಗಂಟೆಯಿಂದ ನಿಂತಿದ್ದೇವೆ. ಆದರೆ, ರಾಹುಲ್ ಗಾಂಧಿ ಅವರನ್ನು ನೋಡಲು ನಮಗೆ ಪೊಲೀಸರು ಅವಕಾಶ ನೀಡುತ್ತಿಲ್ಲ.‌ ಅವರಷ್ಟಕ್ಕೆ ಅವರು ಬಂದು ಹೋದರೆ ಏನು ಉಪಯೋಗ.? ನಮಗೆ ತುಂಬಾ ನಿರಾಸೆಯಾಗಿದೆ ಎಂದು ಸ್ಥಳೀಯ ಮಲ್ಲಿಕಾರ್ಜುನ ಪ್ರತಿಕ್ರಿಯೆ ನೀಡಿದರು.

ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದಿದ್ದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ರಾಷ್ಟ್ರೀಯ ನಾಯಕರ ದಂಡೇ ಕುಂದಾನಗರಿಯಲ್ಲಿ ನೆರೆದಿದೆ. ಮತ್ತೋರ್ವ ಯುವತಿ ಮಾತನಾಡಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿ ದೊಡ್ಡ ದೊಡ್ಡ ಕಾಂಗ್ರೆಸ್ ನಾಯಕರು ನಮ್ಮ ಏರಿಯಾಕೆ ಬಂದಿದ್ದಾರೆ ಅಂತಾ ನಾವು ನೋಡಲು ತುಂಬಾ ಆಸೆಯಿಂದ ನಿಂತಿದ್ದೆವು. ಆದರೆ, ನಮಗೆ ಇಲ್ಲಿ ನಿಲ್ಲಬೇಡಿ ಅಂತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SHIVASENA SUPPORT TO BJP : ಬಿಜೆಪಿ ಅಭ್ಯರ್ಥಿಗಳಿಗೆ ಶಿಂಧೆ ಬಣದ ಶಿವಸೇನೆ ಬೆಂಬಲ ಘೋಷಣೆ

New Delhi News: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಔಪಚಾರಿಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಾಗಿ SHIVASENA SUPPORT TO BJP...

SIGANDUR BRIDGE : ಅಂತಿಮ ಹಂತದಲ್ಲಿ ಸಿಗಂದೂರು ಸೇತುವೆ ಕಾಮಗಾರಿ, ಕೆಲವೇ ತಿಂಗಳಲ್ಲಿ ಲೋಕಾರ್ಪಣೆShimoga News: ಸಾಗರ ತಾಲೂಕಿನ ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ...

Shivamogga News: ಸಾಗರ ತಾಲೂಕಿನ SIGANDUR BRIDGE ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ ಮೇ ನಲ್ಲಿ ಲೋಕಾರ್ಪಣೆಯಾಗಲಿದೆ. ಹೌದು ನಾಡಿಗೆ...

HOW TO AWARE OF CYBER FRAUD : ಹಾಗಿದ್ರೆ ಮಾತ್ರ ಸೈಬರ್ ವಂಚನೆಯಿಂದ ಬಚಾವ್ ಆಗಲು ಸಾಧ್ಯ

Hyderabad News: ನಿಜವೆಂದು ತೋರುವ ಈ ನಕಲಿ ವೆಬ್​​ಸೈಟ್​ ಪತ್ತೆ ಮಾಡುವುದು ಹೇಗೆ, ಎಚ್ಚರಿಕೆ ಹೇಗೆ ವಹಿಸಬೇಕು, ವಂಚನೆಗೆ ಗುರಿಯಾಗದಂತೆ ಇರುವುದು ಹೇಗೆ ಎಂಬ ಇಲ್ಲಿದೆ...

COFFEE EXPORTS : 1.29 ಶತಕೋಟಿ ಡಾಲರ್ಗೆ ತಲುಪಿದ ಭಾರತದ ಕಾಫಿ ರಫ್ತು

New Delhi News: ಭಾರತದ COFFEE ರಫ್ತು ದ್ವಿಗುಣಗೊಂಡಿದೆ. ಈ ಮೂಲಕ ದೇಶದ ರಫ್ತಿನ ಪ್ರಮಾಣ ಹೆಚ್ಚಿಸಲು ತನ್ನದೇ ಕೊಡುಗೆ ನೀಡಿದೆ.ಉತ್ತಮ ಗುಣಮಟ್ಟ ಮತ್ತು ಅನನ್ಯ...