spot_img
spot_img

Birthday: ಶಂಕರ್ ನಾಗ್ ನವೆಂಬರ್ 9 ಜನ್ಮದಿನ

spot_img
spot_img

Share post:

ಕೇಳದೆ ನಿಮಗಾಗಿ ದೂರದಲ್ಲಿ ಯಾರೋ ಹಾಡು ಕೇಳಿದರೆ ಯಾರಿಗೆ ಇಷ್ಟವಿಲ್ಲ ಆ ಹಾಡಿನ ಮೂಲ ಸೂತ್ರಧಾರನ ನೆನಪು ಬರದೇ ಇರುವುದು ಅಸಾಧ್ಯ ಶಂಕರ ನಾಗ್ ಅವರು ಕರ್ನಾಟಕವನ್ನು ಆಗಲಿ ಕನ್ನಡ ಚಿತ್ರರಂಗಕ್ಕೆ ಸಂಪತ್ತು ಕಳೆದುಕೊಂಡಂತೆ ಕೇವಲ 35ನೇ ವಯಸ್ಸಿಗೆ ಶಂಕರ್ ನಾಗ್ ಅವರು ನಿಧನ ಹೊಂದಿದರು.

ಗೀತಾಂಜಲಿ ಹಾಲುಗೆನ್ನೆಗೆ ಹಾಡು ಎಲ್ಲರನ್ನು ಮನರಂಜಿಸುವ, ಮನವೊಲಿಸುವ ಶಂಕರ ನಾಗ್ ಅವರ ಹಾಡು ಮೊದಲು ನೆನಪಾಗುವುದು ಅವರು ಬದುಕಿದ್ದರೆ 70ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು.
ಶಂಕರ್ ನಾಗ್ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ಅವರು ಕನ್ನಡ ಚಿತ್ರರಂಗದಲ್ಲಿ ಹಲವು ಕ್ರಾಂತಿ ಮಾಡಿದ್ದರು. ಇದರಲ್ಲಿ ಸಾಂಗ್ ರೀರೆಕಾರ್ಡಿಂಗ್ ಸ್ಟುಡಿಯೋ ಮಾಡಿದ ಖ್ಯಾತಿಯೂ ಅವರಿಗೆ ಸಿಗುತ್ತದೆ ಎಂದರೆ ತಪ್ಪಾಗಲಾರದು.

ಮೊದಲು ಸಿನಿಮಾಗಳ ಹಾಡಿನ ರೀರೆಕಾರ್ಡಿಂಗ್ ಕೆಲಸಗಳು ಮದ್ರಾಸ್​ ಅಂದರೆ ಈಗಿನ ಚೆನ್ನೈನಲ್ಲಿ ನಡೆಯುತ್ತಿತ್ತು. ಕನ್ನಡ ಸಿನಿಮಾದ ಶೂಟಿಂಗ್ ಎಲ್ಲೇ ಆದರೂ, ಅದರ ಹಾಡಿಸ ಕೆಲಸಗಳಿಗೆ ಚೆನ್ನೈ ಅಥವಾ ಮುಂಬೈಗೆ ತೆರಳಬೇಕಿತ್ತು. ಸಿನಿಮಾ ಕೆಲಸಗಳ ಕೇಂದ್ರ ಬಿಂದುವು ಮದ್ರಾಸೇ ಆಗಿತ್ತು. ಈ ಬಗ್ಗೆ ಶಂಕರ್ ನಾಗ್​ಗೆ ಬೇಸರ ಇತ್ತು. ಸಿನಿಮಾ ನಿರ್ಮಾಣ ಮಾಡೋದು ಕನ್ನಡಿಗರು, ಸಿನಿಮಾ ನೋಡೋದು ಕನ್ನಡಿಗರು ಹೀಗಿರುವಾಗ ಅದರ ಕೆಲಸಗಳು ಏಕೆ ಚೆನ್ನೈನಲ್ಲಿ ನಡೆಯಬೇಕು ಎಂಬುದು ಅವರ ಪ್ರಶ್ನೆ ಆಗಿತ್ತು.

‘ಒಂದು ಮುತ್ತಿನ ಕಥೆ’ ಚಿತ್ರದ ಶೂಟಿಂಗ್ ವಿದೇಶದಲ್ಲಿ ನಡೆದಿತ್ತು. ರಾಜ್​ಕುಮಾರ್ ನಟನೆಯ ಈ ಚಿತ್ರವನ್ನು, ಶಂಕರ್ ನಾಗ್ ನಿರ್ದೇಶನ ಮಾಡಿದ್ದರು. ಈ ಚಿತ್ರದ ಹಾಡಿನ ರೆಕಾರ್ಡ್ ಬೆಂಗಳೂರಿನಲ್ಲೇ ನಡೆದಿತ್ತು ಅನ್ನೋದು ವಿಶೇಷ. ‘ಮೊದಲು ಹಾಡುಗಳ ರೆಕಾರ್ಡಿಂಗ್ ಮಾಡಬೇಕು ಎಂದರೆ ಮದ್ರಾಸ್ ಅಥವಾ ಮುಂಬೈಗೆ ಹೋಗಬೇಕಿತ್ತು. ಆ ವ್ಯವಸ್ಥೆ ಕರ್ನಾಟಕದಲ್ಲಿ ಇರಲಿಲ್ಲ. ಪ್ರರಿ ಬಾರಿ ರೆಕಾರ್ಡಿಂಗ್ ಮಾಡಬೇಕಾದರೆ ತಿಂಗಳು ಗಟ್ಟಲೆ ನಿಂತು ಕಾಯಬೇಕಿತ್ತು’ ಎಂದಿದ್ದರು ಶಂಕರ್ ನಾಗ್.

‘ಸಿನಿಮಾ ನಿರ್ಮಾಪಕರ ಈ ಸ್ಥಿತಿ ಕಂಡು ಬೇಸರ ಆಗಿತ್ತು. ಹೀಗಾಗಿ ನಮ್ಮದೇ ಸ್ಟುಡಿಯೋ ಬೇಕು ಎನಿಸಿತು. ಅನಂತ್ ನಾಗ್​, ರಮೇಶ್ ಭಟ್, ಸೂರ್ಯ ರಾವ್ ಅವರಿಂದ ಆರ್ಥಿಕ ಸಹಾಯ ಪಡೆದು ರೀ-ರೆಕಾರ್ಡಿಂಗ್ ಸ್ಟುಡಿಯೋ ಮಾಡಿದೆವು. ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅದನ್ನು ಉದ್ಘಾಟನೆ ಮಾಡಿದರು. ನಮ್ಮಲ್ಲೂ ಎಲ್ಲಾ ಸೌಲಭ್ಯ ಇದೆ ಎಂಬುದರ ಸಂಕೇತವೇ ಈ ಸ್ಟುಡಿಯೋ’ ಎಂದಿದ್ದರು ಶಂಕರ್ ನಾಗ.

ಶಂಕರ್ ನಾಗ್ ಅವರು ಅನೇಕ ಕನಸನ್ನು ಕಂಡಿದ್ದರು. ಬೆಂಗಳೂರಲ್ಲಿ ಮೆಟ್ರೋ ನಿರ್ಮಾಣ ಮಾಡಬೇಕು ಎಂದು ಅವರು ಕನಸು ಕಂಡಿದ್ದರು. ನಂದಿ ಬೆಟ್ಟದಲ್ಲಿ ರೋಪ್​ವೇ ಬರಬೇಕು ಎಂಬುದು ಅವರ ಆಸೆ ಆಗಿತ್ತು. ಅವರು ಮೃತಪಟ್ಟ ಹಲವು ವರ್ಷಗಳ ಬಳಿಕ ಬೆಂಗಳೂರಿಗೆ ಮೆಟ್ರೋ ಬಂತು.

ಬಾಲ್ಯದ ನಂತರ ವಿದ್ಯಾಬ್ಯಾಸಕ್ಕಾಗಿ ಮುಂಬೈಗೆ ತೆರಳಿದ ಶಂಕರ್ ನಾಗ್, ಅಲ್ಲಿನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾಗಿ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತ ಅದರಲ್ಲಿಯೇ ತೀವ್ರವಾಗಿ ತೊಡಗಿಕೊಂಡರು.

ಅಣ್ಣ ಅನಂತ್​​ ನಾಗ್​ರಂತೆ ಶಂಕರ್ ನಾಗ್ ಕೂಡ ಬ್ಯಾಂಕ್ ನೌಕರನಾದರೂ. ಬ್ಯಾಂಕ್ ವೃತ್ತಿಯ ಜೊತೆಯಲ್ಲಿ ಸಂಗೀತ ಅಭಿರುಚಿ ಇದ್ದ ಕಾರಣ ತಬಲ , ಕೊಳಲು , ಹಾರ್ಮೋನಿಯಂ ಹೀಗೆ ಹಲವಾರು ವಾದ್ಯಗಳನ್ನು ನುಡಿಸಲು ಕಲಿತರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...