spot_img
spot_img

BJP MANIFESTO SANKALP PATRA : ಮಹಿಳೆಯರಿಗೆ ಮಾಸಿಕ 2500 ರೂ, ಸಿಲಿಂಡರ್ಗೆ 500 ರೂ ಸಬ್ಸಿಡಿ ನೀಡೋ ಭರವಸೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

ಮಹಿಳೆಯರಿಗೆ ಮಾಸಿಕ 2500 ರೂಪಾಯಿ ನೀಡುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇದಲ್ಲದೇ ಬಡ ಮಹಿಳೆಯರಿಗೆ ಗ್ಯಾಸ್ ಸಿಲಿಂಡರ್ ಮೇಲೆ ₹ 500 ಸಬ್ಸಿಡಿ ನೀಡಲಾಗುವುದು ಎಂದು ಕೇಸರಿ ಪಕ್ಷ ಘೋಷಣೆ ಮಾಡಿದೆ.

BJP MANIFESTO SANKALP PATRA ಪ್ರಣಾಳಿಕೆ ಬಿಡುಗಡೆ ಮಾಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ದೆಹಲಿಯಲ್ಲಿ ಅಸ್ತಿತ್ವದಲ್ಲಿರುವ ಎಲ್ಲಾ ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಮುಂದುವರಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯ ‘ಸಂಕಲ್ಪ ಪತ್ರ’ದ ಮೊದಲ ಭಾಗವನ್ನು ಬಿಡುಗಡೆ ಮಾಡಿದರು. ದೆಹಲಿಯನ್ನು ಭ್ರಷ್ಟಾಚಾರ ಮುಕ್ತ ಮಾಡುವ ಗುರಿ ಹೊಂದಿದ್ದೇವೆ ಎಂದಿರುವ ನಡ್ಡಾ, ಸಂಕಲ್ಪ ಪತ್ರವನ್ನು ವಿಕಸಿತ್​ ದೆಹಲಿಯ ಮಾರ್ಗಸೂಚಿ.

ಅಭಿವೃದ್ಧಿ ಹೊಂದಿದ ದೆಹಲಿಗೆ ಪಕ್ಷದ ಪ್ರಣಾಳಿಕೆ ಅಡಿಪಾಯವಾಗಿದೆ ಎಂದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಬಡ ವರ್ಗದ ಮಹಿಳೆಯರಿಗೆ 500 ರೂ.ಗೆ ಎಲ್‌ಪಿಜಿ ಸಿಲಿಂಡರ್ ನೀಡಲಿದೆ. ಹೋಳಿ ಮತ್ತು ದೀಪಾವಳಿಯಂದು ತಲಾ ಒಂದು ಸಿಲಿಂಡರ್ ಆನ್ನು ಉಚಿತವಾಗಿ ನೀಡಲಾಗುವುದು.

60-70 ವರ್ಷದೊಳಗಿನ ಹಿರಿಯ ನಾಗರಿಕರಿಗೆ 2,500 ರೂಪಾಯಿ ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3,000 ರೂಪಾಯಿ ಪಿಂಚಣಿ ನೀಡಲಾಗುವುದು ಎಂದು ತಿಳಿಸಿದರು. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅಸ್ತಿತ್ವದಲ್ಲಿರುವ ಸಾರ್ವಜನಿಕ ಕಲ್ಯಾಣ ಯೋಜನೆಗಳಲ್ಲಿನ ಎಲ್ಲಾ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದರು.

A total of Rs 10 lakh health insurance for Delhiites from state-centre:

ದೆಹಲಿಯಲ್ಲಿ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಆಯುಷ್ಮಾನ್ ಭಾರತ್ ಯೋಜನೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಅದರ ಸಮರ್ಪಕ ಅನುಷ್ಠಾನ ಮಾಡುವುದಾಗಿ ನಡ್ಡಾ ಘೋಷಿಸಿದ್ದಾರೆ.

ಈ ಯೋಜನೆಯಡಿ ದೆಹಲಿ ಸರ್ಕಾರವು ಪ್ರತ್ಯೇಕವಾಗಿ ₹ 500000 ವಿಮೆಯನ್ನು ನೀಡುತ್ತದೆ ಮತ್ತು ಕೇಂದ್ರ ಸರ್ಕಾರವು ₹ 5 ಲಕ್ಷ ವಿಮೆಯನ್ನು ನೀಡುತ್ತದೆ. ಈ ಮೂಲಕ ದೆಹಲಿ ಜನರಿಗೆ 10 ಲಕ್ಷರೂಗಳ ಆರೋಗ್ಯ ವಿಮೆ ದೊರೆಯಲಿದೆ.

Declarations of BJP Manifesto :

1) – ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ ತಿಂಗಳಿಗೆ 2500 ರೂ.

2) – ಬಡ ಮಹಿಳೆಯರಿಗೆ ಗ್ಯಾಸ್ ಸಿಲಿಂಡರ್‌ನಲ್ಲಿ ₹ 500 ಸಬ್ಸಿಡಿ

3) – ಬಡ ಕುಟುಂಬಗಳಿಗೆ ಹೋಳಿ ಮತ್ತು ದೀಪಾವಳಿಯಂದು ಉಚಿತ ಸಿಲಿಂಡರ್

4) – ಗರ್ಭಿಣಿಯರಿಗೆ ₹ 21000ರೂ ಅನುದಾನ

5) – 70 ವರ್ಷ ಮೇಲ್ಪಟ್ಟವರಿಗೆ 10 ಲಕ್ಷ ರೂ.ಗಳ ವಿಮಾ ರಕ್ಷಣೆ

6) – 60 ರಿಂದ 70 ವರ್ಷ ವಯೋಮಾನದವರ ಪಿಂಚಣಿಯನ್ನು ₹ 500 ಹೆಚ್ಚಳ

7) – 70 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರು ಮತ್ತು ವಿಧವೆಯ ಮಹಿಳೆಯರಿಗೆ ₹ 2500 ರ ಬದಲಿಗೆ ₹ 3000 ಪಿಂಚಣಿ

8) – ದೆಹಲಿಯಲ್ಲಿ ಅಟಲ್ ಕ್ಯಾಂಟೀನ್ ಯೋಜನೆಯನ್ನು ಪ್ರಾರಂಭಿಸಲಾಗುವುದು, ಇದರ ಅಡಿ ಕೊಳಚೆ ಪ್ರದೇಶಗಳಲ್ಲಿ ₹ 5ಕ್ಕೆ ಆಹಾರ ನೀಡುವುದಾಗಿ ಘೋಷಣೆ

ದೆಹಲಿಯಲ್ಲಿ ಫೆಬ್ರವರಿ 5 ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನು ಓದಿರಿ : LEMON WITH HONEY WATER BENEFITS : ಬೆಳಗ್ಗೆ ಜೇನುತುಪ್ಪ & ನಿಂಬೆ ರಸ ಕುಡಿದರೆ ದೊರೆಯುತ್ತೆ ಆರೋಗ್ಯದ ಹಲವು ಲಾಭಗಳು

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...