spot_img
spot_img

BPL ರೇಷನ್‌ ಕಾರ್ಡ್‌ ರದ್ದಾದ್ರೆ ಗೃಹಲಕ್ಷ್ಮಿ ಯೋಜನೆ ಹಣವು ಬಂದ್‌ ಆಗುವುದಿಲ್ಲ

spot_img
spot_img

Share post:

ಬೆಳಗಾವಿ: ಬಿಪಿಎಲ್‌ ರೇಷನ್‌ ಕಾರ್ಡ್‌ ರದ್ದಾದರೆ ಗೃಹಲಕ್ಷ್ಮಿ ಯೋಜನೆ ಹಣವು ಬಂದ್‌ ಆಗುತ್ತಾ ಎಂಬ ಆತಂಕದಲ್ಲಿರುವ ಮಹಿಳೆಯರಿಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ ನೀಡಿದ್ದಾರೆ.

ಬುಧವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ, ” ಗೃಹಲಕ್ಷ್ಮಿ ವಿಚಾರವಾಗಿ ನಾನು ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಿದ್ದೇನೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್‌ ಹೊಂದಿದವರ ಪೈಕಿ ಯಾರು ತೆರಿಗೆ ಕಟ್ಟುವುದಿಲ್ಲವೋ ಅಂತವರಿಗೆ ಗೃಹಲಕ್ಷ್ಮಿ ಹಣ ಬರುತ್ತೆ.

80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನ ರದ್ದತಿ ಮಾಡೋ ಬದಲು ಎಪಿಎಲ್‌ಗೆ ವರ್ಗವಾಣೆ ಮಾಡಿದ್ದಾರೆ. ವರ್ಗವಣೆ ಮಾಡಿರೋದರಿಂದ ಯಾವುದೇ ಗೊಂದಲ ಇಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿ ವಿಚಾರಕ್ಕೆ ಮಾತನಾಡಿ, ಇಡೀ ದೇಶದಲ್ಲಿ ಈ ರೀತಿಯ ವ್ಯವಹಾರ ನಡೆಯುತ್ತಿದೆ, ಬಿಜೆಪಿಯವರು ನಿರಂತರವಾಗಿ ಇಂತಹ ಪ್ರಯತ್ನ ಮಾಡ್ತಿದ್ದಾರೆ, ನಾವು ಗಟ್ಟಿಯಾಗಿದ್ದೇವೆ, ಸುಭದ್ರವಾಗಿರೋ ಸರ್ಕಾರವನ್ನ ಏನು ಮಾಡಲಿಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು.

ಸಚಿವ ಸಂಪುಟದ ಖಾತೆ ಬದಲಾವಣೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ, ಖಾತೆ ಬದಲಾವಣೆ ಚರ್ಚೆ ಆಗಿಲ್ಲ, ಇನ್ನೂ ಬೆಳಗಾವ ವಿಭಜನೆ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ಬರಬಹುದು, ಎಲ್ಲ ಶಾಸಕರ ಜತೆಗೆ ಒಂದು ಸುತ್ತು ಮಾತನಾಡುತ್ತೇವೆ, ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ, ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

ನಗರದ ಬೀಮ್ಸ್‌ನ ಎಲ್ಲಾ ವ್ಯವಸ್ಥೆಯಲ್ಲೂ ಸರ್ಜರಿ ಆಗಬೇಕೆಂದು ನಾನು ಮೊದಲಿನಿಂದಲೂ ಹೇಳುತ್ತಿರುವೆ, ಶಿಸ್ತು, ಆರೋಗ್ಯ ದೃಷ್ಟಿಯಿಂದ ಡಾಕ್ಟರ್, ನರ್ಸಗಳು ಎಲ್ಲವನ್ನ ಸರಿಪಡಿಸುವ ಕೆಲಸವಾಗಬೇಕು ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ತಪ್ಪಿತಸ್ಥ ವೈದ್ಯರ ಮೇಲೆ ಆದಷ್ಟು ಬೇಗ ಕಠಿಣ ಕ್ರಮವಾಗಬೇಕು, ನಾವು ಬರೀ ಹೇಳೋದು ಆಗಬಾರದು,ಕಠಿಣ ಕ್ರಮವಾಗಬೇಕು, ನಾನು ಭೇಟಿ ನೀಡಿ ಪರಿಶೀಲನೆ ಮಾಡಿರುವೆ, ಮತ್ತೊಮ್ಮೆ ಭೇಟಿ ನೀಡಿ ಪರಿಶೀಲನೆ ಮಾಡುವೆ ಎಂದು ಹೇಳಿದರು.

ಬಿಪಿಎಲ್‌ಗೆ ಅರ್ಹರಲ್ಲದ ಕಾರ್ಡ್‌ಗಳು ಬದಲಾವಣೆ ಆಗುತ್ತೆ. ಬಿಪಿಎಲ್‌ ಕಾರ್ಡ್ ರದ್ದು ಮಾಡಲ್ಲ, ಅವರನ್ನು ಎಪಿಎಲ್‌ ಕಾರ್ಡ್‌ಗೆ ಬದಲಾವಣೆ ಮಾಡ್ತೇವೆ ಎಂದು ಆಹಾರ ಸಚಿವ ಕೆಎಚ್‌ ಮುನಿಯಪ್ಪ ಹೇಳಿದ್ದಾರೆ.

ಈ ಬಗ್ಗೆ ಕೋಲಾರದಲ್ಲಿ ಮಾತನಾಡಿದ ಅವರು, ದಕ್ಷಿಣ ಭಾರತದ ರಾಜ್ಯಗಳಲ್ಲಿ ಶೇಕಡಾ 50 ಗೂ ಹೆಚ್ಚು ಬಿಪಿಎಲ್‌ ಕಾರ್ಡ್ ಇಲ್ಲ.

ಕರ್ನಾಟಕ ಆರ್ಥಿಕವಾಗಿ ಸುಭದ್ರವಿರುವ ರಾಜ್ಯ, ತೆರಿಗೆ ಪಾವತಿಯಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. 10 ವರ್ಷಗಳಿಂದ ಎಲ್ಲಾ ಸರ್ಕಾರಗಳಲ್ಲಿ ಕಾರ್ಡ್ ನೀಡಲಾಗಿದೆ.

ಐಟಿ ಪಾವತಿದಾರರು, ಸರ್ಕಾರಿ ಕೆಲಸದವರು, 1 ಲಕ್ಷ 20 ಸಾವಿರ ಆದಾಯ ಮೀರಿದವರನ್ನು ಎಪಿಎಲ್‌ ಕಾರ್ಡ್ ಗೆ ಬದಲಾವಣೆ ಮಾಡಲಾಗಿದೆ.

ಅಂಕಿ ಅಂಶಗಳ ಜೊತೆ ನಾಳೆ ಸುದ್ದಿಗೋಷ್ಠಿ ಮಾಡ್ತೇನೆ. ಅಕಸ್ಮಾತ್ ಬಡವರ ಕಾರ್ಡ್ ರದ್ದಾಗಿದ್ರೆ ತಹಸೀಲ್ದಾರ್‌ಗೆ ಅರ್ಜಿ ಹಾಕಲಿ, ಕಾರ್ಡ್ ಸಿಗುತ್ತೆ. ಅರ್ಹರಿಗೆ ಬಿಪಿಎಲ್‌ ಕಾರ್ಡ್ ಗಳು ತಪ್ಪೋದಿಲ್ಲ ಎಂದು ಹೇಳಿದರು.

ಸಿಎಂ ಹಾಗೂ ಅಧ್ಯಕ್ಷರು ಜೊತೆ ಸಭೆ ಮಾಡಿದ್ದೇವೆ, ಸೂಚನೆ ನೀಡಿದ್ದಾರೆ. ಅಪ್ಪಿತಪ್ಪಿ ಬಿಪಿಎಲ್‌ ರದ್ದು ಆಗಿದ್ರೆ ವಾಪಸ್ಸು ಕೊಡಲು ಸೂಚಿಸಿದ್ದಾರೆ. ಅರೋಗ್ಯಕ್ಕಾಗಿ ಕಾರ್ಡ್ ಬೇಕು ಅಂದ್ರೆ ಒಂದೇ ವಾರದಲ್ಲಿ ನೀಡ್ತೇವೆ.

ಬಿಜೆಪಿ ಮಾಡ್ತಿರುವ ಆರೋಪದಲ್ಲಿ ವಾಸ್ತವಾಂಶ ಇಲ್ಲ ಎಂದು ಹೇಳಿದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...