spot_img
spot_img

ಬೌದ್ಧ ಧರ್ಮ ಸ್ವೀಕಾರ: ಡಾ. ಎಚ್.ಸಿ.ಮಹದೇವಪ್ಪ

spot_img
spot_img

Share post:

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಎಚ್.ಸಿ.ಮಹದೇವಪ್ಪ ಅವರು ಹಿಂದೂ ಧರ್ಮವನ್ನು ತೊರೆಯುವುದಾಗಿ ತಮ್ಮ ಟ್ವಿಟ್ಟರ್ (ಎಕ್ಸ್) ಖಾತೆಯ ಮೂಲಕ ಮಾಹಿತಿ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತ ಸಚಿವರಲ್ಲಿ ಒಬ್ಬರಾದ ಇವರು ನಾಡಹಬ್ಬ ದಸರಾದ ಉಸ್ತುವಾರಿಯನ್ನು ವಹಿಸಿಕೊಂಡಿದ್ದ ಮಹದೇವಪ್ಪ, ದಸರಾ ಮುಗಿದ ಎರಡು ದಿನಗಳ ನಂತರ ಬೌದ್ದ ಧರ್ಮವನ್ನು ಸ್ವೀಕರಿಸುವುದಾಗಿ ಘೋಷಿಸಿ, ಅಚ್ಚರಿಯುಂಟು ಮಾಡಿದ್ದರು. ಹಿಂದೂ ಧರ್ಮವನ್ನು ತೊರೆಯಲು ಅವರು ಕಾರಣವನ್ನೂ ಸಹ ನೀಡಿದ್ದಾರೆ. ಹಿಂದೂ ಧರ್ಮದಲ್ಲಿನ ಮೇಲುಕೀಳು, ಜಾತೀಯತೆಯ ಬಗ್ಗೆ ಹಿಂದೆಯೂ ಮಹದೇವಪ್ಪ ಹಲವು ಬಾರಿ ಅಸಮಾಧಾನವನ್ನು ವ್ಯಕ್ತ ಪಡಿಸಿದ್ದುಂಟು. ಸೋಮವಾರ (ಅ 14), ಧರ್ಮ ಚಕ್ರ ಪರಿವರ್ತನಾ ದಿನದ ಅಂಗವಾಗಿ ಶುಭಾಶಯವನ್ನು ಕೋರುತ್ತಾ, ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಧರ್ಮದ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

” ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ, ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ. ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ ನನಗೆ ಕಾಣುತ್ತಿಲ್ಲ”. ಮತ್ತು ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಮತ್ತು ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ” ಎಂದು ಸಚಿವ ಮಹದೇವಪ್ಪ ಅವರು ಈ ರೀತಿಯಾಗಿ ಟ್ವೀಟ್‌ ಮಾಡಿದ್ದಾರೆ.

ತನ್ನ 3.5 ಲಕ್ಷ ಅನುಯಾಯಿಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದ ಬಾಬಾ ಸಾಹೇಬರ ಧಮ್ಮ ಚಕ್ರ ಪರಿವರ್ತನಾ ದಿನದಂದು ಎಲ್ಲರಿಗೂ ನನ್ನ ಆತ್ಮೀಯ ಶುಭಾಶಯಗಳು” ಎಂದು ಡಾ.ಮಹದೇವಪ್ಪ ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಬುದ್ಧಂಶರಣಂಗಚ್ಛಾಮಿ ಎಂದು ಹ್ಯಾಷ್ ಟ್ಯಾಗ್ ಅನ್ನು ಹಾಕಿದ್ದಾರೆ.

ಕಾಂಗ್ರೆಸ್ ಅಸ್ಪ್ರಶ್ಯತೆಯನ್ನು ನಿವಾರಿಸದಿದ್ದರೆ ತಾನು ಬೌದ್ಧಧರ್ಮ ಸ್ವೀಕರಿಸುತ್ತೇನೆಂದು ಮೊದಲೇ ಅಂಬೇಡ್ಕರ್ ಆಗ್ರಹಿಸಿದ್ದರು. ಕಾಂಗ್ರೆಸ್ ಈಗಿನಂತೆ ಆಗಲೂ ಅದನ್ನು ನಿರ್ಲಕ್ಷಿಸಿತ್ತು. ಅದಕ್ಕೆ ಬೌದ್ಧಮತ ಸ್ವೀಕರಿಸಿದ್ದರು. ಪರಕೀಯ ಧರ್ಮಗಳು ಎಲ್ಲಾ ಕಡೆ ಭ್ರಾತೃತ್ವಕ್ಕಿಂತ ತಮ್ಮ ಧರ್ಮವೇ ಮುಖ್ಯವೆಂಬ ಸಿದ್ಧಾಂತದಲ್ಲಿದೆ ಎಂದಿದ್ದರು” ಎನ್ನುವ ರಿಪ್ಲೈ ಕೂಡಾ ಬಂದಿದೆ.

ಹಿಂದೂ ಧರ್ಮದಲ್ಲಿ ಹುಟ್ಟಿದ್ದರಿಂದಲೇ ನಿಮ್ಮಂತಹ ಜನರಿಗೆ ಮೀಸಲಾತಿ ಫಲ ಸಿಕ್ಕಿದ್ದು ಮತ್ತು ಅದರಿಂದಲೇ ಇವತ್ತು ಮಂತ್ರಿಗಿರಿಯ ಸುಖವನ್ನು ಅನುಭವಿಸುತ್ತಿರುವುದು. ಈಗ ನಿಮ್ಮ ಮಗ ಸಹ ಅದೇ ಕೋಟಾದಲ್ಲಿ ಸಂಸದನಾಗಿದ್ದಾರೆ. ಓಟ್ ಬ್ಯಾಂಕಿಗಾಗಿ ಹಿಂದೂ ಧರ್ಮವನ್ನು ತೆಗಳಬೇಡಿ. ಒಂದಾಗಿ ಬಾಳೋಣ. ಜೈಭೀಮ್” ಎನ್ನುವ ಸಲಹೆ ಕೂಡಾ ಬಂದಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...