spot_img
spot_img

CAB AGGREGATORS : ಫೋನ್ ಮಾಡೆಲ್ ಆಧರಿಸಿ ಪ್ರಯಾಣ ದರ ನಿಗದಿ ಆರೋಪ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

ಓಲಾ ಮತ್ತು ಉಬರ್​ಗೆ ಸಿಸಿಪಿಎ ನೋಟಿಸ್ ನೀಡಿದೆ. ಕಾರಣ ಏನು ಇಲ್ಲಿ ತಿಳಿಯಿರಿ ಗ್ರಾಹಕರು ಬಳಸುವ ಸ್ಮಾರ್ಟ್ ಫೋನ್​ನ ಮಾಡೆಲ್ ಅನ್ನು ಆಧರಿಸಿ ವಿಭಿನ್ನ ದರ ವಿಧಿಸುತ್ತಿರುವ ಆರೋಪದ ಮೇಲೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (ಸಿಸಿಪಿಎ) ಪ್ರಮುಖ CAB AGGREGATORS ಓಲಾ ಮತ್ತು ಉಬರ್​ಗೆ ನೋಟಿಸ್ ನೀಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಗುರುವಾರ ಪ್ರಕಟಿಸಿದ್ದಾರೆ.ಒಂದು ನಿರ್ದಿಷ್ಟ ಪ್ರದೇಶಕ್ಕೆ ಹೋಗಲು ಕ್ಯಾಬ್ ಬುಕ್ ಮಾಡಿದಾಗ ಬೇರೆ ಬೇರೆ ಸ್ಮಾರ್ಟ್​ಫೋನ್​ಗಳಲ್ಲಿ ವಿಭಿನ್ನ ಶುಲ್ಕ ವಿಧಿಸುತ್ತಿರುವ ಬಗ್ಗೆ ಹಲವಾರು ಗ್ರಾಹಕರು ದೂರು ನೀಡಿದ ನಂತರ ಕ್ಯಾಬ್ ಅಗ್ರಿಗೇಟರ್​ಗಳ ಈ ವಂಚನೆ ಬೆಳಕಿಗೆ ಬಂದಿದೆ.

ಕೆಲ ಮಾದರಿಯ ಫೋನ್​ಗಳಲ್ಲಿ ಹೆಚ್ಚಿನ ಶುಲ್ಕ ತೋರಿಸಿದರೆ, ಇನ್ನು ಕೆಲ ಮಾದರಿಗಳಲ್ಲಿ ಕಡಿಮೆ ದರಗಳನ್ನು ತೋರಿಸಲಾಗುತ್ತಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ.ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಜೋಶಿ. “ಗ್ರಾಹಕರು ಬಳಸುವ ಮೊಬೈಲ್ ಫೋನ್​ಗಳ (ಐಫೋನ್​/ ಆಂಡ್ರಾಯ್ಡ್) ವಿವಿಧ ಮಾದರಿಗಳ ಆಧಾರದ ಮೇಲೆ ವಿಭಿನ್ನ ಪ್ರಯಾಣ ದರ ವಸೂಲಿ ಮಾಡುತ್ತಿರುವ ವಿಷಯದ ಹಿಂದಿನ ಅವಲೋಕನದ ಅನುಸರಣೆಯಾಗಿ, ಗ್ರಾಹಕ ವ್ಯವಹಾರಗಳ ಇಲಾಖೆ ಸಿಸಿಪಿಎ ಪ್ರಮುಖ CAB AGGREGATORS​ಗಳಾದ ಓಲಾ ಮತ್ತು ಉಬರ್​ಗೆ ನೋಟಿಸ್ ನೀಡಿದೆ” ಎಂದು ಹೇಳಿದ್ದಾರೆ.

ಸದ್ಯ ಗ್ರಾಹಕರ ಕುಂದುಕೊರತೆ ಪರಿಹರಿಸಲು ಮತ್ತು CAB AGGREGATORS​ಗಳು ನ್ಯಾಯಯುತ ಶುಲ್ಕ ವಿಧಿಸುವುದನ್ನು ಖಚಿತಪಡಿಸಿಕೊಳ್ಳಲು ಸಿಸಿಪಿಎ ಓಲಾ ಮತ್ತು ಉಬರ್​ಗೆ ನೋಟಿಸ್ ನೀಡಿದೆ. ಕಂಪನಿಗಳು ಈಗ ಬೆಲೆ ನಿಗದಿಯ ಕಾರ್ಯವಿಧಾನ ಮತ್ತು ಈ ಶುಲ್ಕ ವ್ಯತ್ಯಾಸಗಳ ಮೇಲೆ ಪ್ರಭಾವ ಬೀರುವ ಅಂಶಗಳ ಬಗ್ಗೆ ಸ್ಪಷ್ಟೀಕರಣಗಳನ್ನು ಒದಗಿಸಬೇಕಾಗಿದೆ.ಐಒಎಸ್ 18 ಅಥವಾ ನಂತರದ ಆವೃತ್ತಿಗಳಿಗೆ ಅಪ್ಡೇಟ್ ಮಾಡಿಕೊಂಡ ನಂತರ ಐಫೋನ್​ನ ಕಾರ್ಯಕ್ಷಮತೆ ಹಾಳಾಗಿದೆ ಎಂದು ಗ್ರಾಹಕರು ದೂರಿದ್ದರು.

ಇಲಾಖೆಯು ಈ ಕುಂದುಕೊರತೆಗಳನ್ನು ಪರಿಶೀಲಿಸಿ, ಪ್ರತಿಕ್ರಿಯೆ ನೀಡುವಂತೆ ಆ್ಯಪಲ್​​ಗೆ ನೋಟಿಸ್ ನೀಡಿತ್ತು.ತಂತ್ರಜ್ಞಾನ ಕಂಪನಿಗಳನ್ನು ಒಳಗೊಂಡ ಗ್ರಾಹಕ ಸಂಬಂಧಿತ ವಿಷಯಗಳಲ್ಲಿ ಇಲಾಖೆ ಮಧ್ಯಪ್ರವೇಶಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ, ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯಲ್ಲಿ ಸ್ವೀಕರಿಸಿದ ದೂರುಗಳಿಗೆ ಸಂಬಂಧಿಸಿದಂತೆ ಸಿಸಿಪಿಎ ಆಪಲ್​ಗೆ ನೋಟಿಸ್ ನೀಡಿತ್ತು.

ಇದನ್ನು ಓದಿರಿ : RAHUL GANDHI CANCELS RALLY : ಎಎಪಿಗೆ ಸಹಾಯ ಮಾಡುವ ಉದ್ದೇಶವಿಲ್ಲ

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...

MATSYA 6000 : ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಯಶಸ್ವಿ

Matsya 6000: ದೇಶದ ನಾಲ್ಕನೇ ತಲೆಮಾರಿನ ಆಳ ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಪೂರ್ಣಗೊಂಡಿದ್ದು, 2025ರ ಅಂತ್ಯದ ವೇಳೆಗೆ 500 ಮೀಟರ್ ಪ್ರಯೋಗ ನಡೆಯಲಿದೆ. ಇದು...