spot_img

CASE AGAINST MICROFINANCE : ಉತ್ತರ ಕನ್ನಡದಲ್ಲೂ ಜೋರಾದ ಮೈಕ್ರೋ ಫೈನಾನ್ಸ್ ಹಾವಳಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Karwar News:

ರಾಜ್ಯದಲ್ಲಿ CASE AGAINST MICROFINANCE ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಜಾರಿಗೆ ಮುಂದಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 20, 30 ಸಾವಿರ ಸಾಲ ನೀಡಿ ಖಾಲಿ ಚೆಕ್​ಗೆ ಸಹಿ ಹಾಕಿಸಿಕೊಂಡು ಬಡ್ಡಿ, ಅಸಲು ಹಣ ಪಡೆದು ಕೊನೆಗೆ ಮತ್ತೆ ಹಣಕ್ಕೆ ಬೇಡಿಕೆ ಇಡುವ ಕೆಲವು CASE AGAINST MICROFINANCE  ಕಾಲಿ ಚೆಕ್ ಬಳಸಿ ಸಾಲ ಪಡೆದವರಿಗೆ ಕೋರ್ಟ್​ನಲ್ಲಿ ಪ್ರಕರಣ ದಾಖಲಿಸುವ ಬೆದರಿಕೆ ಒಡ್ಡುತ್ತಿವೆ.

ಉತ್ತರಕನ್ನಡ ಜಿಲ್ಲೆಯಲ್ಲಿಯೂ CASE AGAINST MICROFINANCE ದಂಧೆಕೋರರ ವ್ಯವಹಾರ ಜೋರಾಗಿದೆ. ಜಿಲ್ಲೆಯ ಹಳಿಯಾಳ, ಮುಂಡಗೋಡ ಹಾಗೂ ಯಲ್ಲಾಪುರದ ಕೆಲವೆಡೆ ಈ ಮೀಟರ್ ಬಡ್ಡಿ ದಂಧೆಗೆ ಸಿಲುಕಿರುವವರು ಶೇ.30ರಷ್ಟು ಬಡ್ಡಿಕಟ್ಟಿದರೂ ಅಸಲು ಚುಕ್ತಾ ಮಾಡಲು ಸಾಧ್ಯವಾಗದೇ ಕೆಲವರು ಊರನ್ನೇ ತೊರೆಯುವ ಹಂತಕ್ಕೆ ತಲುಪಿರುವುದು ಬೆಳಕಿಗೆ ಬಂದಿದೆ.

“ಹಳಿಯಾಳ, ದಾಂಡೇಲಿ, ಜೋಯಿಡಾ ಭಾಗದಲ್ಲಿ CASE AGAINST MICROFINANCE ದಂಧೆ ಕರಾಳವಾಗಿ ನಡೆಯುತ್ತಿದೆ. ಎಂಒಬಿ ಲೀಸ್ಟ್​ನಲ್ಲಿರುವ ರೌಡಿಗಳೇ ಇದರ ಕಿಂಗ್​​ಫಿನ್​​​ಗಳಾಗಿದ್ದು, ಪುಡಿ ರೌಡಿಗಳನ್ನು ಸಾಲ, ಬಡ್ಡಿ ವಸೂಲಿಗೆ ಬಿಡುತ್ತಿದ್ದಾರೆ. ಹಗಲು ರಾತ್ರಿ ಎನ್ನದೇ ಮನೆಗೆ ನುಗ್ಗಿ ಸಾಲ ವಸೂಲಿಗೆ ಇಳಿಯುತಿದ್ದು ಇದೀಗ ಸಾಲ ಪಡೆದವರು ಮನೆ ಬಿಡುವಂತಾಗಿದೆ. ಒಂದು ಕಾಲದಲ್ಲಿ ತಿನ್ನಲು ಏನು ಇಲ್ಲದಂತೆ ಸುತ್ತಾಡುತ್ತಿದ್ದವರು ಇದೀಗ ಈ ವ್ಯವಹಾರದಲ್ಲಿ ತೊಡಗಿಕೊಂಡು ಬಡವರ ರಕ್ತ ಹೀರುತ್ತಿದ್ದಾರೆ.

ಚೆಕ್​ ಬೌನ್ಸ್​ ಪ್ರಕರಣಗಳನ್ನು ಕೋರ್ಟ್​ನಲ್ಲಿ ಹಾಕಿ ಹಣ ವಸೂಲಾತಿ ಮಾಡುತ್ತಿದ್ದಾರೆ. ಅಲ್ಲದೇ 20-40 ಪರ್ಸೆಂಟ್​ವರೆಗೂ ಬಡ್ಡಿ ವಸೂಲಾತಿ ಮಾಡುತ್ತಿದ್ದಾರೆ. ಈ ಬಗ್ಗೆ ದೂರು ದಾಖಲಾದರೂ ಯಾವುದೇ ಕ್ರಮವಾಗಿಲ್ಲ. ಇನ್ನಾದರೂ ಈ ಬಗ್ಗೆ ಇಲಾಖೆಗಳು ಎಚ್ಚೆತ್ತಕೊಳ್ಳಬೇಕು. ಈ ಬಗ್ಗೆ ಸೂಕ್ತ ತನಿಖೆ ಕೂಡ ನಡೆಸಬೇಕು” ಎಂದು ಸ್ಥಳೀಯ ಯೋಗರಾಜ್ ಆಗ್ರಹಿಸಿದ್ದಾರೆ.

ಪ್ರಕರಣವನ್ನು ಪರಿಗಣಿಸಿದ ಪೊಲೀಸ್​​​ ಇಲಾಖೆ ಕೂಡ ಫೈನಾನ್ಸ್​​ ಕಂಪನಿಗಳಿಗೆ ಎಚ್ಚರಿಕೆ ನೀಡಿದೆ. “ಜಿಲ್ಲೆಯಲ್ಲಿ ಈವರೆಗೆ ಮೈಕ್ರೋ ಫೈನಾನ್ಸ್​​, ಮೀಟರ್​​ ಬಡ್ಡಿ ದಂಧೆಕೋರರ ಕಿರುಕುಳ ಸಂಬಂಧ 7 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹಲವರು ಬಡ್ಡಿ ದಂಧೆಯಲ್ಲಿ ಸಿಲುಕಿದ್ದಾರೆ. ಆದರೆ, ದೂರು ಕೊಡುತ್ತಿಲ್ಲ. ಅನೇಕರು ಚೆಕ್​ ಬೌನ್ಸ್​ ಹಾಗೂ ಪುಡಿ ರೌಡಿಗಳಿಗೆ ಹೆದರುತ್ತಾರೆ. ಕೆಲವರು ನಮಗೆ ಗೌಪ್ಯವಾಗಿ ಮಾಹಿತಿ ಕೊಡುತ್ತಾರೆ. ಹೀಗೆ ಬಂದ ಮಾಹಿತಿ ಮೇರೆಗೆ ಓರ್ವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಮುಂಡಗೋಡ ಪಟ್ಟಣದ ನವಲೆ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 250ಕ್ಕೂ ಹೆಚ್ಚು ಖಾಲಿ ಚೆಕ್​ಗಳು ಪತ್ತೆಯಾಗಿವೆ”.

CASE AGAINST MICROFINANCE ದಾಂಡೇಲಿಯ ಹಸೀನಾ ಶೇಖ್​​ ಎಂಬುವವರು ಫೈನಾನ್ಸ್​​ನಲ್ಲಿ ಸಾಲ ಪಡೆದು ಬಡ್ಡಿ ಅಸಲು ಕಟ್ಟಿದ್ದರೂ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಇದೀಗ ಈ ಮಹಿಳೆ ಗ್ರಾಮ ತೊರೆದಿದ್ದಾಳೆ. ವಿಡಿಯೋ ಮಾಡಿ ನೋವು ತೋಡಿಕೊಂಡಿದ್ದು, ಮುಖ್ಯಮಂತ್ರಿಗಳಿಗೆ ತಮಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದಾಳೆ.

CASE AGAINST MICROFINANCE “ಜಿಲ್ಲೆಯಲ್ಲಿ ಮೀಟರ್​​ ಬಡ್ಡಿ ದಂಧೆಯಿಂದ ಜನ ಕಷ್ಟ ಅನುಭವಿಸುತ್ತಿದ್ದಾರೆ. ತಿಂಗಳಿಗೆ ಶೇ 30ರಷ್ಟು ಬಡ್ಡಿ ಕಟ್ಟುವ ದಂಧೆ ಜಿಲ್ಲೆಯಲ್ಲಿ ನಡೆಯುತ್ತಿದೆ. ಇದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಮೀಟರ್ ಬಡ್ಡಿ ಹಾಗೂ ಮೈಕ್ರೋ ಫೈನಾನ್ಸ್​​ನಿಂದ ಕಿರುಕುಳವಾದರೆ ತಮ್ಮ

ಮೊಬೈಲ್​ ಸಂಖ್ಯೆ 9480805201ಗೆ ಕರೆ ಮಾಡಿ ದೂರು ನೀಡಬಹುದು ಅಥವಾ ಎಸ್​ಪಿ ಕಚೇರಿಗೂ ಆಗಮಿಸಿ ಗೌಪ್ಯವಾಗಿ ಮಾಹಿತಿ ನೀಡಬಹುದು” ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎಂ. ನಾರಾಯಣ ತಿಳಿಸಿದ್ದಾರೆ.

ಇದನ್ನು ಓದಿರಿ : RASHMIKA MANDANNA : ರಶ್ಮಿಕಾರನ್ನು ವೀಲ್ಚೇರ್ನಲ್ಲಿ ಕರೆತಂದ ವಿಕ್ಕಿ ಕೌಶಲ್

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...