Jammu News:
ಪಾಕಿಸ್ತಾನದ ಕಡೆಗೆ ಆಗಿರುವ ಹಾನಿಯ ಪ್ರಮಾಣವೇನು ಎಂಬುದು ತಕ್ಷಣಕ್ಕೆ ತಿಳಿದಿಲ್ಲವಾದರೂ ಶತ್ರು ಪಡೆಗಳು ಭಾರಿ ಸಾವು – ನೋವುಗಳನ್ನು ಅನುಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಷ್ಟಾದರೂ ಭಾರತೀಯ ಸೇನೆಯು ಈ ಮಾಹಿತಿಯನ್ನು ದೃಢಪಡಿಸಿಲ್ಲ ಅಥವಾ ನಿರಾಕರಿಸಿಲ್ಲ.ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆ (ಎಲ್ಒಸಿ) ಉದ್ದಕ್ಕೂ ಭಾರತೀಯ ಪೋಸ್ಟ್ಗಳ ಮೇಲೆ ಪಾಕಿಸ್ತಾನ ಪಡೆಗಳು ಬುಧವಾರ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮವನ್ನು ಉಲ್ಲಂಘಿಸಿವೆ ಹಾಗೂ ಭಾರತೀಯ ಪಡೆಗಳು ಇದಕ್ಕೆ ತಕ್ಕ ಪ್ರತಿದಾಳಿ ನಡೆಸಿವೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಜಿಲ್ಲೆಯ ಅಖ್ನೂರ್ ಸೆಕ್ಟರ್ನ ನಿಯಂತ್ರಣ ರೇಖೆಯ ಬಳಿ ಶಂಕಿತ ಭಯೋತ್ಪಾದಕರು ನಡೆಸಿದ ಐಇಡಿ ಸ್ಫೋಟದಲ್ಲಿ ಕ್ಯಾಪ್ಟನ್ ಸೇರಿದಂತೆ ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಸಾವನ್ನಪ್ಪಿದ ಒಂದು ದಿನದ ನಂತರ ಕೃಷ್ಣ ಘಾಟಿ ವಲಯದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ.ಪಾಕಿಸ್ತಾನದ ಪಡೆಗಳು ಎಲ್ಒಸಿಯಲ್ಲಿ ಅಪ್ರಚೋದಿತ ದಾಳಿ ನಡೆಸಿವೆ.
Ceasefire Violation After 2021:ನಿಯಂತ್ರಣ ರೇಖೆಯ ಉದ್ದಕ್ಕೂ ತಾರ್ಕುಂಡಿ ಪ್ರದೇಶದ ಫಾರ್ವರ್ಡ್ ಪೋಸ್ಟ್ ಮೇಲೆ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಪಡೆಗಳು ಬಲವಾದ ಪ್ರತಿದಾಳಿ ನಡೆಸಿದೆ. ಇದರಿಂದ ಶತ್ರು ಪಡೆಗಳಿಗೆ ಭಾರಿ ಸಾವುನೋವು ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಫೆಬ್ರವರಿ 25, 2021 ರಂದು ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದವನ್ನು ನವೀಕರಿಸಿದಾಗಿನಿಂದ ನಿಯಂತ್ರಣ ರೇಖೆಯ ಉದ್ದಕ್ಕೂ ಕದನ ವಿರಾಮ ಉಲ್ಲಂಘನೆ ಬಹಳ ಅಪರೂಪ.ಪಾಕಿಸ್ತಾನದ ಸೇನಾಧಿಕಾರಿಯೊಬ್ಬರು ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Minor injury to JEO in landmine blast:ಕಳೆದ ಒಂದು ವಾರದಿಂದ ಗಡಿ ಉದ್ದಕ್ಕೂ ಪ್ರತಿಕೂಲ ಚಟುವಟಿಕೆಗಳು ಹೆಚ್ಚಾದ ನಂತರ ನಿಯಂತ್ರಣ ರೇಖೆಯ ಉದ್ದಕ್ಕೂ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಈ ವರ್ಷದ ಮೊದಲ ಕದನ ವಿರಾಮ ಉಲ್ಲಂಘನೆ ಮತ್ತು ಐದು ದಿನಗಳಲ್ಲಿ ಇದು ಗಡಿಯಾಚೆಯಿಂದ ನಡೆದ ನಾಲ್ಕನೇ ದಾಳಿಯಾಗಿದೆ.
ಏತನ್ಮಧ್ಯೆ, ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಇಂದು ಸಂಜೆ ಅದೇ ವಲಯದಲ್ಲಿ ಆಕಸ್ಮಿಕವಾಗಿ ನೆಲಬಾಂಬ್ ಮೇಲೆ ಕಾಲಿಟ್ಟಾಗ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೆಂಧರ್ ನಿವಾಸಿಯಾಗಿರುವ ಈ ಗಾಯಾಳು ಜೆಸಿಒ ಭಯೋತ್ಪಾದಕರ ಒಳನುಸುಳುವಿಕೆಯನ್ನು ತಡೆಗಟ್ಟಲು ಎಲ್ಒಸಿಯಲ್ಲಿ ನಿಯೋಜಿಸಲಾದ ಗಸ್ತು ತಂಡದ ಭಾಗವಾಗಿದ್ದರು. ಗಾಯಗೊಂಡ ಇವರನ್ನು ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇದನ್ನು ಓದಿರಿ :’ Police Tells Delhi HC In Feb 2020 Riots