spot_img
spot_img

CHIKALLUR FAIR : ಪ್ರಾಣಿ ಬಲಿ, ಟ್ಯಾಟೂ ಹಾಕುವುದಕ್ಕೆ ನಿಷೇಧ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Chamarajanagar News:

ಐದು ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ಚಂದ್ರಮಂಡಲೋತ್ಸವದಿಂದ ಆರಂಭಗೊಂಡು ಮುತ್ತತ್ತಿರಾಯನ ಸೇವೆಯಲ್ಲಿ ಸಂಪನ್ನವಾಗಲಿದೆ. ಜಾತ್ರೆಯ 4ನೇ ದಿನದಂದು ಪಂಕ್ತಿಸೇವೆ ಎಂಬ ವಿಶಿಷ್ಟ ಆಚರಣೆ ನಡೆಯಲಿದೆ. ಸಿದ್ದಪ್ಪಾಜಿ, ಮಂಟೇಸ್ವಾಮಿ ದೇವರಿಗೆ ಅನ್ನ, ಮುದ್ದೆ, ಮಾಂಸದ ಭಕ್ಷ್ಯಗಳನ್ನು ಎಡೆ ಇಟ್ಟು ಪೂಜೆ ಸಲ್ಲಿಸಿ ಸಹಪಂಕ್ತಿ ಭೋಜನ ಸವಿಯುವುದೇ ಪಂಕ್ತಿ ಸೇವೆಯಾಗಿದೆ.

ಪ್ರತಿ ಬಾರಿಯೂ ಜಿಲ್ಲಾಡಳಿತ ಮತ್ತು ಭಕ್ತರ ನಡುವೆ ಮಾಂಸಾಹಾರದ ವಿಚಾರಕ್ಕೆ ಜಟಾಪಟಿ ಇದ್ದೇ ಇರಲಿದೆ. ರಾಜ್ಯ ಅಷ್ಟೇ ಅಲ್ಲದೇ ಹೊರ ರಾಜ್ಯದವರನ್ನೂ ಸೆಳೆಯುವ ಕೊಳ್ಳೇಗಾಲ ತಾಲೂಕಿನ CHIKALLUR FAIR ಯು ಇದೇ ಜ. 13 ರಿಂದ 17ರ ವರೆಗೆ ನಡೆಯಲಿದ್ದು, ಲಕ್ಷಾಂತರ ಭಕ್ತರ ಆಗಮನಕ್ಕೆ ದಿನಗಣನೆ ಆರಂಭವಾಗಿದೆ.

DC orders to ban animal slaughter:

ಕರ್ನಾಟಕ ಪ್ರಾಣಿ ಬಲಿ ಪ್ರತಿಬಂಧಕ ಅಧಿನಿಯಮ ಅನ್ವಯ ಜನವರಿ 13 ರಿಂದ 17ರ ಮಧ್ಯರಾತ್ರಿಯವರೆಗೆ ದೇವರ ಹೆಸರಿನಲ್ಲಿ ಯಾವುದೇ ರೀತಿಯ ಪ್ರಾಣಿಬಲಿ ನೀಡುವುದನ್ನು ಮತ್ತು ಮಾರಕಾಸ್ತ್ರಗಳನ್ನು ತರುವುದನ್ನು ತಡೆಗಟ್ಟಲು ಹಾಗೂ ಇದರೊಂದಿಗೆ ಹೈಕೋರ್ಟ್ ನಿರ್ದೇಶನದಂತೆ ಪ್ರಾಣಿಬಲಿಯನ್ನು ನಿಷೇಧಿಸಲಾಗಿದೆ.

ಜೊತೆಗೆ, ಪ್ರಾಣಿ ಬಲಿ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು, ಪ್ರಾಣಿಬಲಿ ನಿಷೇಧದ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡಿ ಕ್ರಮ ಕೈಗೊಳ್ಳುವ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಘಟನೆಗಳು ಸಂಭವಿಸಿದರೆ ತಕ್ಷಣ ಆದೇಶಗಳನ್ನು ಮಾಡುವ ಸಲುವಾಗಿ ಕೊಳ್ಳೇಗಾಲ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್ ಅವರೊಂದಿಗೆ ಇನ್ನಿತರ ಅಧಿಕಾರಿಗಳನ್ನು ಹೆಚ್ಚುವರಿ ಸೆಕ್ಟರ್ ಅಧಿಕಾರಿಗಳನ್ನು ವಿವಿಧ ಪ್ರದೇಶದ ಸ್ಥಳಗಳಿಗೆ ನಿಯೋಜಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶಿಸಿದ್ದಾರೆ.

ಚಿಕ್ಕಲ್ಲೂರು ಹೊಸಮಠದ ಸುತ್ತಮುತ್ತಲಿನ ಪ್ರದೇಶ, ಹಳೆಮಠದ ಸುತ್ತಮುತ್ತಲಿನ ಪ್ರದೇಶ, ಸಿದ್ದಪ್ಪಾಜಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶ, ಕೊತ್ತನೂರು, ಬಾಣೂರು, ಸುಂಡಳ್ಳಿ ಗ್ರಾಮಗಳ ಸುತ್ತಮುತ್ತಲ ಪ್ರದೇಶ, ರಾಚಪ್ಪಾಜಿ ನಗರ ಬಂಡಳ್ಳಿ ರಸ್ತೆ ಮಾರ್ಗದ ಸುತ್ತಮುತ್ತಲ ಪ್ರದೇಶದಲ್ಲಿ ಮೂರು ಪಾಳಿಯಲ್ಲಿ ಕೆಲಸ ನಿರ್ವಹಿಸಲು ಸೆಕ್ಟರ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

Fear of skin disease- Prohibition on tattooing:

ಟ್ಯಾಟು ಹಾಕಲು ಒಂದೇ ಸೂಚಿ ಬಳಸುವುದರಿಂದ ಚರ್ಮರೋಗ ಸೇರಿದಂತೆ ಹೆಚ್​ಐವಿಯಂತಹ ಮಾರಣಾಂತಿಕ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜಾತ್ರೆಯಲ್ಲಿ ಟ್ಯಾಟೂ ಹಾಕುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶಿಸಿದ್ದಾರೆ.

ಜಾತ್ರೆ ಎಂದರೇ ಹಚ್ಚೆ ಹಾಕಿಸಿಕೊಳ್ಳುವುದು ಸಾಮಾನ್ಯವಾದ್ದರಿಂದ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಜಾತ್ರೆಯಲ್ಲಿ ಹಚ್ಚೆ ಹಾಕುವುದನ್ನು ನಿಷೇಧಿಸುವಂತೆ ಡಿಸಿಗೆ ಕೋರಿದ ಹಿನ್ನೆಲೆ ಈ ಬಾರಿ ಹಚ್ಚೆ ಹಾಕುವುದಕ್ಕೆ ನಿಷೇಧ ಹೇರಲಾಗಿದೆ.

ಇದನ್ನು ಓದಿರಿ : SILVER MEDAL IN YOGASANA : ಬೆಳ್ಳಿ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದ ಶ್ರೀಧರ್ ಹೊಸಮನಿ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...