spot_img
spot_img

Children’s Day: ‘ಓದುವ ಬೆಳಕು’ ಕಾರ್ಯಕ್ರಮ ಮಕ್ಕಳ ದಿನಾಚರಣೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು : ಓದುವ ಬೆಳಕು ಕಾರ್ಯಕ್ರಮದಡಿ ಗ್ರಾಮ ಪಂಚಾಯತ್ ಅರಿವು ಕೇಂದ್ರಗಳಲ್ಲಿ ನವೆಂಬರ್ 14ರಂದು ‘ಮಕ್ಕಳ ದಿನಾಚರಣೆ’ ಕಾರ್ಯಕ್ರಮ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ, ಗ್ರಾಮೀಣ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಆರಂಭಿಸಿರುವ ಓದುವ ಕಾರ್ಯಕ್ರಮದಡಿ ನವೆಂಬರ್ 14ರಂದು ‘ಮಕ್ಕಳ ದಿನಾಚರಣೆ’ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಅದೇ ರೀತಿ ನ.20 ರಂದು ಅಂತರ್ರಾಷ್ಟ್ರೀಯ ಮಕ್ಕಳ ದಿನಾಚರಣೆ ಅಂಗವಾಗಿ ಕಾರ್ಯಕ್ರಮಗಳನ್ನು ಆಚರಿಸಲಾಗುವುದು ಎಂದು ಪ್ರಕಟಣೆ ನೀಡಿದ್ದಾರೆ.

ಮಕ್ಕಳ ಸೃಜನಶೀಲತೆ ಮತ್ತು ಗ್ರಹಿಸುವಿಕೆ ಸಾಮಥ್ರ್ಯವನ್ನು ವೃದ್ಧಿಸಲು ಈ ತಿಂಗಳು ಕಡಲತೀರದ ದೃಶ್ಯ, ಮಾರುಕಟ್ಟೆ, ಜಾತ್ರೆ, ಆಟದ ಮೈದಾನ ಮತ್ತು ಮಕ್ಕಳು ಆನಂದಿಸುವ ಇತರ ಸ್ಥಳಗಳಂತಹ ವರ್ಣರಂಜಿತ ಚಿತ್ರಗಳನ್ನು ಮುದ್ರಿಸಿ ಮಕ್ಕಳಿಗೆ ವಿವರಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಕ್ಕಳು ಇಂತಹ ಚಿತ್ರಗಳ ಬಗ್ಗೆ ತಮ್ಮ ಸ್ನೇಹಿತರಿಗೆ ವಿವರಿಸಲು ಅಥವಾ ಚರ್ಚೆ ನಡೆಸಲು ಹಾಗೂ ಈ ವಸ್ತುವನ್ನು ಇರಿಸಿಕೊಂಡು ಕಥೆಯನ್ನು ರಚಿಸಲು ಉತ್ತೇಜನ ನೀಡಲಾಗುವುದು ಎಂದು ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ತಮ್ಮ ಜೀವನದಲ್ಲಿ ಸ್ಫೂರ್ತಿ ತುಂಬಿದ ವಿವಿಧ ಶಿಕ್ಷಕರ ಕುರಿತು ಪ್ರಬಂಧ ಬರೆಯುವುದು ಸೇರಿದಂತೆ ಸೆ.5ರಂದು ಶಿಕ್ಷಕರ ದಿನದ ಅಂಗವಾಗಿ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ,

ಸೆಪ್ಟೆಂಬರ್‌ 8ರಂದು ಅಂತರ ರಾಷ್ಟ್ರೀಯ ಅಜ್ಜಿ-ತಾತಂದಿರ ದಿನವಾಗಿದ್ದು ಅಂದು ಊರಿನ ಹಿರಿಯರನ್ನು ಅರಿವು ಕೇಂದ್ರಗಳಿಗೆ ಆಹ್ವಾನಿಸಿ ಅವರಿಂದ ಕಥೆ ಹೇಳಿಸುವುದು ಅಥವಾ ಅನುಭವ ಹಂಚಿಕೊಳ್ಳಲು ವ್ಯವಸ್ಥೆ ಮಾಡಲಾಗುವುದು,

ಸೆಪ್ಟೆಂಬರ್‌ 8ರಂದು ಅಂತರ ರಾಷ್ಟ್ರೀಯ ಸಾಕ್ಷರತಾ ದಿನದ ಸಲುವಾಗಿ ‘ಗಟ್ಟಿ ಓದುʼ ಚಟುವಟಿಕೆ ಮೂಲಕ ಪ್ರತಿದಿನವೂ ಒಂದು ಕಥೆಯನ್ನು ಮಕ್ಕಳಿಂದ ಓದಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಸೆ. 15ರಂದು ಅಂತಾರಾಷ್ಟೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳಿಂದ ಭಾರತ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚನ ಮಾಡಿಸಲಾಗುವುದು, ಸೆ. 15ರಂದು ರಾಷ್ಟ್ರೀಯ ಇಂಜಿನಿಯರ್‌ಗಳ ದಿನದಂದು ಸರ್‌ ಎಂ.ವಿಶ್ವೇಶ್ವರಯ್ಯ ವಿವಿಧ ವಲಯಗಳಿಗೆ ನೀಡಿದ ಕೊಡುಗೆಯನ್ನು ಸ್ಮರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...