spot_img
spot_img

ವೃಷಭಾವತಿ ನದಿ ಸ್ವಚ್ಛ : ಬೆಂಗಳೂರು ವಿವಿ ಮುಂದು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಮಲೀನಗೊಂಡಿರುವ ವೃಷಭಾವತಿ ನದಿ ಸ್ವಚ್ಛಗೊಳಿಸಲು ಬೆಂಗಳೂರು ವಿವಿ ಮುಂದಾಗಿದೆ. ಸ್ವಚ್ಛವಾದ ನದಿ ನೀರಲ್ಲಿ ಕೆರೆ ತುಂಬಿಸಿ, ವಿವಿ ಆವರಣದಲ್ಲಿ ತರಕಾರಿ ಮತ್ತು ಹಣ್ಣಿನ ಗಿಡಗಳನ್ನು ಸೆಳೆಯುವ ಯೋಜನೆ ಕೂಡ ಸಿದ್ಧಪಡಿಸಲಾಗಿದೆ.

ಕಲುಷಿತ ನೀರಿನಿಂದ ಮಲೀನವಾಗಿರುವ ವೃಷಭಾವತಿ ನದಿಯನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಮುಂದಾಗಿದ್ದು, ನೀಲನಕ್ಷೆಗೆ ಸಿದ್ಧಪಡಿಸಲು ಸಕಲ ತಯಾರಿ ನಡೆಸುತ್ತಿದೆ.

ನದಿಯ ನೀರನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ವಿಜ್ಞಾನ ವಿಭಾಗದ ಡೀನ್ ಪಿಎಂಇಬಿ ನಿರ್ದೇಶಕ ಪ್ರೊ.ಅಶೋಕ್ ಡಿ.ಹಂಜರಗಿ ನೇತೃತ್ವದ ತಂಡವನ್ನು ರಚಿಸಲಾಗಿದೆ. ಉಪಕುಲಪತಿ ಸೇರಿದಂತೆ ಸಿಬ್ಬಂದಿ ಈ ತಂಡದಲ್ಲಿ ಸಕ್ರಿಯ ಪಾತ್ರ ವಹಿಸಲಿದ್ದಾರೆ. ಆರ್ಟ್ ಆಫ್ ಲಿವಿಂಗ್‌ ಸಂಸ್ಥೆ ಮತ್ತು ಹಲವು ಕಂಪನಿಗಳ ಸಿಎಸ್‌ಆರ್​​ಫಂಡ್ ಸಹಾಯದೊಂದಿಗೆ ಸ್ವಚ್ಛತೆಗೆ ವಿವಿ ಮುಂದಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ಸುತ್ತಮುತ್ತ ವೃಷಭಾವತಿ ನದಿ ಹರಿಯುತ್ತಿದ್ದು, ಅದರ ಮಾಲಿನ್ಯದಿಂದ ಅನೇಕ ಸಮಸ್ಯೆಯಾಗುತ್ತಿದೆ. ಇದರಿಂದ ವಿವಿಯಲ್ಲಿರುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಹಲವು ಆರೋಗ್ಯ ಸಮಸ್ಯೆಯಾಗುತ್ತಿದೆ. ಆದ್ದರಿಂದ ಎಂಟ್ರಿ ಸಂಸ್ಥೆ ಹಾಗೂ ಆರ್ಟ್ ಆಫ್ ಲಿವೀಂಗ್ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಪ್ರೊ.ಅಶೋಕ್ ಡಿ.ಹಂಜರಗಿ ತಿಳಿಸಿದ್ದಾರೆ.

ವೃಷಭಾವತಿ ನದಿಯು ಕೋಳಚೆ ನೀರು, ಪ್ಲಾಸ್ಟಿಕ್, ಘನತ್ಯಾಜ್ಯಗಳಿಂದಾಗಿ ತುಂಬಿದೆ. ಇದರಿಂದಾಗಿ ಬೆಂಗಳೂರು ವಿವಿ ಕ್ಯಾಂಪಸ್​ನಲ್ಲಿರುವ ವಿದ್ಯಾರ್ಥಿಗಳು, ಬೋಧನಾ ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿಗೆ ಹಾಗೂ ಸುತ್ತಮುತ್ತ ವಾಸವಿರುವ ಸಾರ್ವಜನಿಕರಿಗೆ ಕಲುಷಿತವಾದ ನದಿ ನೀರಿನಿಂದಾಗಿ ಹಲವು ರೋಗಗಳು ಬರುತ್ತಿವೆ.

ಈ ಸಮಸ್ಯೆಗೆ ಪರಿಹಾರವಾಗಿ ವೃಷಭಾವತಿ ಸ್ವಚ್ಛತೆ ಮಾಡಲು ವಿವಿ ನಿರ್ಧರಿಸಿದೆ. ಅಷ್ಟೇ ಅಲ್ಲ ನದಿಯನ್ನು ಶುದ್ಧೀಕರಿಸಿ, ಆ ನೀರನ್ನು ಬಳಸಿಕೊಂಡು ಅಂತರ್ಜಲ ಮಟ್ಟ ಹೆಚ್ಚಿಸಲು ಹಾಗೂ ಹಸಿರೀಕರಣಗೊಳಿಸುವ ಯೋಜನೆ ಕೂಡ ಇದಾಗಿದೆ.

‘ವೃಷಭಾವತಿಯನ್ನು ಶುದ್ಧೀಕರಣಗೊಳಿಸಿದ ಬಳಿಕ ಈ ಶುದ್ಧೀಕರಣಗೊಂಡ ನೀರನ್ನು ಕ್ಯಾಂಪಸ್​​ನಲ್ಲಿರುವ ಸಣ್ಣ ಕೆರೆಗೆ ಹರಿಸಲಾಗುತ್ತದೆ. ಈ ನೀರನ್ನು ಹಸಿರೀಕರಣಕ್ಕೆ ಉಪಯೋಗಿಸಿಕೊಂಡು ಕಾಲೇಜಿನ ಆವರಣದಲ್ಲಿ ಗಿಡಗಳನ್ನು, ವಿವಿಧ ಸಸಿಗಳನ್ನು ನೆಡಲು ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ಹಲಸಿನ ಹಣ್ಣು, ಅತ್ತಿ ಹಣ್ಣು, ತರಕಾರಿ, ಸೊಪ್ಪು ಬೆಳೆಸುವ ಯೋಜನೆ ರೂಪಿಸಲಾಗಿದೆ. ಜೊತೆಗೆ ಹಾವು, ಕಪ್ಪೆ, ಏಡಿ, ಮೀನುಗಳಿಗೆ ಕೆರೆಯ ನೀರು ಆಸರೆ ಆಗುವುದರಿಂದ ಪಕ್ಷಿಗಳಿಗೂ ಆಶ್ರಯ ಕಲ್ಪಿಸುವ ಉದ್ದೇಶವಿದೆ’ ಎಂದು ಮಾಹಿತಿ ನೀಡಿದರು.

ಸ್ವಚ್ಛಗೊಳಿಸುವ ಮೊದಲ ಹಂತದಲ್ಲಿ ಮೆಷ್ ನೆಟ್‌ಗಳನ್ನು ಬಳಸಿಕೊಂಡು ತ್ಯಾಜ್ಯಗಳನ್ನು ತೆಗೆಯಲಾಗುವುದು. ಬಳಿಕ ಸಣ್ಣ ಸಣ್ಣ ತಡೆಗೋಡೆಗಳ ಮಾದರಿ ನಿರ್ಮಿಸಿ ಸಣ್ಣ ಪ್ರಮಾಣದಲ್ಲಿ ನೀರನ್ನು ಶುದ್ಧೀಕರಿಸಲಾಗುವುದು. ಕಲ್ಲು, ಮರಳುಗಳನ್ನು ಬಳಸಿಕೊಂಡು ಸಹ ಸ್ವಚ್ಛತೆ ನಡೆಯಲಿದೆ ಎಂದು ಅಶೋಕ್ ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RAVI BASRUR : ‘ಪ್ರತಿಭೆಗಳನ್ನು ಪ್ರೋತ್ಸಾಹಿಸಿ, ನಿಮ್ಮ ಹೆಸರೇಳಿ ಬದುಕೊಳ್ತಾರೆ’

Bagalkote News: ಸಿದ್ದನಕೊಳ್ಳ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರಂಭ ಜರುಗಿತು. ಜ್ಯೋತಿ ಬೆಳಗಿಸುವ ಮೂಲಕ ಶಾಸಕ...

BUS FIRE INCIDENT : ಹೊತ್ತಿ ಉರಿದ ಬಸ್, ತೆಲಂಗಾಣದ ಓರ್ವ ಸಾವು

Mathura (Uttar Pradesh) News: ಉತ್ತರಪ್ರದೇಶದ ಮಥುರಾದಲ್ಲಿ ತೆಲಂಗಾಣದ 50ಕ್ಕೂ ಹೆಚ್ಚು ಜನರಿದ್ದ BUS​ವೊಂದು ಬೆಂಕಿಗಾಹುತಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.ತೆಲಂಗಾಣದ ಜನರಿಂದ ತುಂಬಿದ್ದ ಬಸ್​ವೊಂದು ಮಥುರಾದಲ್ಲಿ...

NEW PRESIDENT FOR KPCC : ಕೆಪಿಸಿಸಿಗೆ ಪೂರ್ಣ ಪ್ರಮಾಣದ ಹೊಸ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಲಿ

Bangalore News: ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನನ್ನನ್ನು ನಾನು NEW PRESIDENT FOR KPCC ಎಂದು ಮಾಡಿ ಎಂದು ಹೇಳಿಲ್ಲ. ನಾವುಗಳೆಲ್ಲ ಸಚಿವರಾದ...

HOMEOWNERS NOTE TO THIEVES : ಸಂಕ್ರಾಂತಿಗೆ ಊರಿಗೆ ಹೋಗುವಾಗ ಜಾಣತನ ಮೆರೆದ ಮನೆ ಮಾಲೀಕ

Hyderabad News: ಈ ರೀತಿಯ ವಿಚಿತ್ರ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುವ ಜೊತೆಗೆ ಮನೆ ಮಾಲೀಕನ ಹಾಸ್ಯ ಮತ್ತು ಬುದ್ದಿವಂತಿಕೆಗೆ ಮೆಚ್ಚುಗೆ ಕೂಡ ವ್ಯಕ್ತವಾಗುತ್ತಿದೆ.ಇಂತಹುದೇ...