spot_img
spot_img

ನಗರದ ಎಲ್ಲ ಕೆರೆಗಳ ಒತ್ತುವರಿ ತೆರವು : ಹೈಕೋರ್ಟ್‌ಗೆ ಮಾಹಿತಿ

spot_img
spot_img

Share post:

ಬೆಂಗಳೂರು : 183 ಕೆರೆಗಳ ಪೈಕಿ 122 ಕೆರೆಗಳು ಖಾಸಗಿಯವರಿಂದ ಒತ್ತುವರಿಯಾಗಿವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ವ್ಯಾಪ್ತಿಯಲ್ಲಿ ಸದ್ಯ ಜೀವಂತವಾಗಿ ಉಳಿದಿರುವ 183 ಕೆರೆಗಳ ಪೈಕಿ 122 ಕೆರೆಗಳು ಖಾಸಗಿಯವರಿಂದ ಒತ್ತುವರಿಯಾಗಿವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಹೇಳಿದೆ.

ಬೆಂಗಳೂರಿನ ಕೆರೆಗಳು ಮತ್ತು ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸಿ ಅವುಗಳನ್ನು ರಕ್ಷಿಸಲು ಸರ್ಕಾರಕ್ಕೆ ಅಗತ್ಯ ನಿರ್ದೇಶನಗಳನ್ನು ನೀಡಬೇಕೆಂದು 2014ರಲ್ಲಿ ಸಲ್ಲಿಕೆಯಾಗಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

ಖಾಸಗಿಯವರಿಂದ ಒತ್ತುವರಿಯಾಗಿರುವ 122 ಕೆರೆಗಳ ಪೈಕಿ 88 ಕೆರೆಗಳಲ್ಲಿ ಕಟ್ಟಡ, 44 ಕೆರೆಗಳು ಧಾರ್ಮಿಕ ಕಟ್ಟಡ, 58 ಕೆರೆಗಳಲ್ಲಿ ಖಾಲಿ ಜಾಗ, ರಸ್ತೆಗಾಗಿ 7 ಕೆರೆ, ಅಘೋಷಿತ ಸ್ಲಂಗಳಿಗಾಗಿ 9 ಕೆರೆಗಳ ಒತ್ತುವರಿಯಾಗಿದೆ. 183 ಕೆರೆಗಳ ಪೈಕಿ ಒತ್ತುವರಿಯಾಗಿರುವ 122 ಕೆರೆಗಳ ಸರ್ವೆ ನಡೆಸಿ ನಕಾಶೆಗಳನ್ನು ಕಂದಾಯ ಇಲಾಖೆಗೆ ನೀಡಲಾಗಿದೆ.

ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಈ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಇದು ಅಂದಾಜು ಲೆಕ್ಕಾಚಾರವಾಗಿದ್ದು, ಖಚಿತ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಂದಾಜಿನ ಪ್ರಕಾರ ಬಿಬಿಎಂಪಿಯಲ್ಲಿ ಸದ್ಯ 183 ಕೆರೆಗಳಿದ್ದು, ಅವುಗಳ ವಿಸ್ತೀರ್ಣ 5,094 ಎಕರೆ ಇದೆ. ಇದರಲ್ಲಿ ಖಾಸಗಿಯವರಿಂದ 122 ಕೆರೆಗಳಲ್ಲಿ ಒತ್ತುವರಿಯಾಗಿದ್ದು, ಅದರ ವಿಸ್ತೀರ್ಣ 235 ಎಕರೆ ಇದೆ. ಇದಲ್ಲದೆ ರಸ್ತೆ, ಸರ್ಕಾರಿ ಕಟ್ಟಡ, ಸ್ಮಶಾನ, ಧಾರ್ಮಿಕ ಸ್ಥಳಗಳು, ಸಾರ್ವಜನಿಕ ಕಟ್ಟಡಗಳು, ಅಘೋಷಿತ ಸ್ಲಂ, ರೈಲ್ವೆ ಹಳಿ ಇತ್ಯಾದಿ ರೂಪದಲ್ಲಿ ಕೆರೆಗಳ ಒತ್ತುವರಿಯಾಗಿದೆ ಎಂದರು.

ಅರ್ಜಿದಾರರ ಮನವಿಯಂತೆ ಕೆರೆಗಳ ಒತ್ತುವರಿಗೆ ಸಂಬಂಧಿಸಿದ ಸಮಗ್ರ ಮಾಹಿತಿಯ ಜೊತೆಗೆ ಒತ್ತುವರಿ ತೆರವಿಗೆ ಕೈಗೊಂಡ ಕ್ರಮಗಳನ್ನು ನ್ಯಾಯಾಲಯ ಮತ್ತು ಅರ್ಜಿದಾರರಿಗೆ ಸಲ್ಲಿಸುವಂತೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್ 13ಕ್ಕೆ ಮುಂದೂಡಿತು.

ಒತ್ತುವರಿದಾರರಿಗೆ ನೋಟಿಸ್ ಕೊಟ್ಟು, ತೆರವು ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲಾ ಬಗೆಯ ಒತ್ತುವರಿಗಳನ್ನು ತೆರವುಗೊಳಿಸಲು ಸರ್ಕಾರ ಪ್ರಮಾಣಿಕ ಪ್ರಯತ್ನ ಮಾಡುತ್ತಿದೆ. ಇದಕ್ಕಾಗಿ ಕಾಲಾವಕಾಶಬೇಕು. ಆದರೆ, ಉಳಿದಿರುವ ಕೆರೆಗಳ ಸಂರಕ್ಷಣೆ ಮತ್ತು ನಿರ್ವಹಣೆಯೂ ಸರ್ಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಖಾಸಗಿಯವರಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಕೆರೆಗಳ ಮಾಲಿಕತ್ವವನ್ನು ಖಾಸಗಿಯವರಿಗೆ ಬಿಟ್ಟುಕೊಡುವುದಿಲ್ಲ ಎಂದು ಭರವಸೆ ನೀಡಿದರು.

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...