spot_img
spot_img

CM SIDDARAMAIAH : ಕಂಬಳಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಹೂಮಳೆ ಸುರಿಸಿ ಭರ್ಜರಿ ಸ್ವಾಗತ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mangalore News:

ವಿಧಾನಸಭೆಯ ಸ್ಪೀಕರ್ ಯು. ಟಿ. ಖಾದರ್ ಅವರ ನೇತೃತ್ವದಲ್ಲಿ ನಡೆಯುವ ನರಿಂಗಾನ ಕಂಬಳದಲ್ಲಿ ಭಾಗಿಯಾಗಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ CM SIDDARAMAIAH ಬಳಿಕ ರಸ್ತೆ ಮಾರ್ಗವಾಗಿ ನರಿಂಗಾನ ಕಂಬಳಕ್ಕೆ ಆಗಮಿಸಿದ್ದರು. ಕಾರು ನಾಟೆಕಲ್ ತಲುಪುತ್ತಿದ್ದಂತೆ ಅಭಿಮಾನಿಗಳ ಜೈಕಾರ ಮುಗಿಲು ಮುಟ್ಟಿತ್ತು.  ನಗರದ ಹೊರವಲಯದಲ್ಲಿ ನಡೆಯುವ ನರಿಂಗಾನ ಕಂಬಳಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯರಿಗೆ ದಾರಿ ಮಧ್ಯೆ ನಾಟೆಕಲ್‌ನಲ್ಲಿ ಅಭಿಮಾನಿಗಳು ಹೂಮಳೆ ಸುರಿಸಿ ಭರ್ಜರಿ ಸ್ವಾಗತ ನೀಡಿದರು.ನಾಟೆಕಲ್‌ನಲ್ಲಿ ಕಾರಿನಿಂದ ಇಳಿದ ಸಿಎಂ ಸಿದ್ದರಾಮಯ್ಯ ಅವರಿಗೆ ಬೃಹತ್ ಗಾತ್ರದ ಹೂವಿನ ಮಾಲೆ ಹಾಕಿ ಅಭಿಮಾನಿಗಳಿಂದ ಸ್ವಾಗತ ಮಾಡಲಾಯಿತು. ಬಳಿಕ ಹೂವಿನ ಮಳೆ ಸುರಿಸಿದರು. ಬಳಿಕ ನರಿಂಗಾನ ಕಂಬಳಕ್ಕೆ ಆಗಮಿಸುತ್ತಿದ್ದಂತೆ ಸಿಎಂ ನೋಡಲು ಮುಗಿಬಿದ್ದರು. ಈ ವೇಳೆ ಅಭಿಮಾನಿಗಳಿಗೆ ಸಿಎಂ ಶೇಕ್ ಹ್ಯಾಂಡ್ ಮಾಡಿದರು.

CM who distributed relief:

ಮುಖ್ಯಮಂತ್ರಿ CM SIDDARAMAIAH ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಮಂಜಿನಾಡಿ ಗ್ರಾಮದಲ್ಲಿ ಸಿಲಿಂಡರ್ ಸೋರಿಕೆಯಿಂದ ಉಂಟಾದ ಅಗ್ನಿ ಅನಾಹುತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದರು. ಒಂದೇ ಕುಟುಂಬದ ಖತೀಜತ್ತುಲ್ ಖುಬ್ರ, ಝಲೈಕಾ ಮೆಹ್ದಿ, ಸಲ್ಮಾ ಮಝಿಯಾ ಮೃತಪಟ್ಟವರಾಗಿದ್ದು, ಇವರ ಪರವಾಗಿ ತಲಾ ಐದು ಲಕ್ಷದ ಚೆಕ್ ಅನ್ನು (ಒಟ್ಟು 15 ಲಕ್ಷ) ಇವರ ಕುಟುಂಬದ ಸದಸ್ಯರಿಗೆ ಮುಖ್ಯಮಂತ್ರಿಗಳು ನೀಡಿದರು. ನಾಟೆಕಲ್ ಮಂಜನಾಡಿ ಎಂಬಲ್ಲಿನ ಮನೆಯೊಂದರಲ್ಲಿ ಇತ್ತೀಚೆಗೆ ಉಂಟಾದ ಭಾರೀ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಇಬ್ಬರು ಪುತ್ರಿಯರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಮಂಜನಾಡಿಯ ಖಂಡಿಗ ನಿವಾಸಿ ವಿದೇಶದಲ್ಲಿರುವ ಮುತ್ತಲಿಬ್ ಎಂಬವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿತ್ತು. ಗಾಯದ ನಡುವೆಯೂ ಓರ್ವ ಪುತ್ರಿ ಮನೆ ಬಾಗಿಲು ತೆಗೆದಿದ್ದಾಳೆ. ತಕ್ಷಣ ನೆರವಿಗೆ ಧಾವಿಸಿದ ಸ್ಥಳೀಯರು, ಬೆಂಕಿ ನಂದಿಸಿ ಗಂಭೀರ ಸ್ಥಿತಿಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದರು. ಮನೆಯೊಳಗಿದ್ದ ಅಡುಗೆ ಅನಿಲ ತುಂಬಿದ್ದ ಸಿಲಿಂಡ‌ರ್ ಸ್ಫೋಟಿಸಿ ಈ ಘಟನೆ ನಡೆದಿತ್ತು. ಮುತ್ತಲಿಬ್ ಪತ್ನಿ ಖುಬ್ರಾ ಮತ್ತು ಮೂವರು ಪುತ್ರಿಯರಾದ ಮೆಅದಿಯಾ, ಮಝಿಯಾ, ಮಾಯಿದಾ ಮನೆಯಲ್ಲಿ ಒಂದೇ ಕೋಣೆಯಲ್ಲಿ ಮಲಗಿದ್ದರು. ಮಧ್ಯರಾತ್ರಿ ಮನೆಯೊಳಗಡೆ ಭಾರೀ ಸ್ಫೋಟಗೊಂಡ ಶಬ್ಧ ಕೇಳಿಬಂದಿತ್ತು. ಸ್ಫೋಟದ ತೀವ್ರತೆಗೆ ಆರ್‌ಸಿಸಿ ಮನೆಯ ಮೇಲ್ಭಾಗದಲ್ಲಿನ ಸಿಮೆಂಟ್ ಶೀಟ್ ಮೇಲ್ಚಾವಣಿ ಸಂಪೂರ್ಣ ಹಾರಿ ಹೋಗಿದೆ. ತಾಯಿ ಮಕ್ಕಳು ಮಲಗಿದ್ದ ಕೊಠಡಿ, ಮಂಚ, ಕಿಟಕಿ ಸಂಪೂರ್ಣ ಛಿದ್ರಗೊಂಡು ಸುಟ್ಟು ಕರಕಲಾಗಿದ್ದವು.

ಇದನ್ನು ಓದಿರಿ : CHEMICAL LEAK : ರಾಸಾಯನಿಕ ಸೋರಿಕೆಯಿಂದ ಅಸ್ವಸ್ಥಗೊಂಡ ಕಾರ್ಮಿಕರ ಸಂಖ್ಯೆ 19ಕ್ಕೆ ಏರಿಕೆ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...