spot_img
spot_img

ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆಯ ವಿರುದ್ಧ ಸಮರ ಸಾರಿದ್ದಾರೆ.!!

spot_img
spot_img

Share post:

ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಬೆಂಗಳೂರು: ಕೇಂದ್ರದ ತೆರಿಗೆ ಆದಾಯ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂಬ ವಿಚಾರದಲ್ಲಿ ಮತ್ತೆ ಹೋರಾಟ ಸಂಘಟಿಸಲು ರಾಜ್ಯ ಸರ್ಕಾರ ಮುಂದಾಗಿದೆ. ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳ ಜತೆಗೆ, ಕಡಿಮೆ ತೆರಿಗೆ ಪಾಲು ಪಡೆಯುತ್ತಿರುವ ಬಿಜೆಪಿ ಆಡಳಿತದ ರಾಜ್ಯಗಳನ್ನೂ ಈ ಹೋರಾಟಕ್ಕೆ ತರಲು ರಾಜ್ಯ ಕಾಂಗ್ರೆಸ್‌ ಮುಂದಾಗಿದೆ.

ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನದಡಿ ಪತ್ರ ಬರೆದಿದ್ದಾರೆ. ಈ ಅನ್ಯಾಯದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅತಿಹೆಚ್ಚು ತೆರಿಗೆ ಪಾವತಿಸಿಯೂ ಕಡಿಮೆ ಪಾಲು ಪಡೆಯುತ್ತಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಈ ಸಂಬಂಧ ಮಾಹಿತಿಯನ್ನು ಅವರು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಪತ್ರದ ಪ್ರತಿಯನ್ನು ಲಗತ್ತಿಸಿದ್ದಾರೆ.

ಕೇರಳ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತ್, ಹರಿಯಾಣ ಮತ್ತು ಪಂಜಾಬ್‌ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದು, ಆರ್ಥಿಕತೆ ಮತ್ತು ಇತರ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿರುವ ಕರ್ನಾಟಕದಂತಹ ಹಲವು ರಾಜ್ಯಗಳನ್ನು ಅವುಗಳ ಸಾಧನೆಯ ಕಾರಣಕ್ಕೇ ದಂಡಿಸಲಾಗುತ್ತಿದೆ. ಇದರ ವಿರುದ್ಧ ದನಿ ಎತ್ತಬೇಕಿದೆ ಎಂದಿದ್ದಾರೆ. ಈ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ಸಭೆ ಆಯೋಜಿಸಲಾಗುತ್ತದೆ. ಸಭೆಯ ದಿನಾಂಕ ಮತ್ತು ವಿವರಗಳನ್ನು ಶೀಘ್ರದಲ್ಲೇ ತಿಳಿಸಲಾಗುತ್ತದೆ. ತೆರಿಗೆ ಅನ್ಯಾಯವನ್ನು ಸರಿಪಡಿಸಿ ಎಂದು 16ನೇ ಹಣಕಾಸು ಆಯೋಗವನ್ನು ಒತ್ತಾಯಿಸಲು ತಾವೆಲ್ಲರೂ ಆ ಸಭೆಯಲ್ಲಿ ಭಾಗಿಯಾಗಬೇಕು’ ಎಂದು ಕೋರಿದ್ದಾರೆ.

16ನೇ ಹಣಕಾಸು ಆಯೋಗದ ಸಮಾಲೋಚನೆ ಆರಂಭವಾಗಿದೆ .ಕರ್ನಾಟಕ ಮತ್ತು ಇತರೆ ತಲಾವಾರು ಜಿಎಸ್​​ಡಿಪಿ ಹೆಚ್ಚಿರುವ ರಾಜ್ಯಗಳು ತಮ್ಮ ಆರ್ಥಿಕ ಕಾರ್ಯಕ್ಷಮತೆಗಾಗಿ ದಂಡವನ್ನು ಅನುಭವಿಸುತ್ತಿವೆ, ಅಸಮಾನವಾಗಿ ಕಡಿಮೆ ತೆರಿಗೆ ಹಂಚಿಕೆಗಳನ್ನು ಪಡೆಯುತ್ತಿವೆ. ಈ ಅನ್ಯಾಯದ ನಡೆ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುತ್ತೆ. ಪ್ರಗತಿಪರ ರಾಜ್ಯಗಳಿಗೆ ಆರ್ಥಿಕ ಸ್ವಾಯತ್ತತೆಗೆ ಧಕ್ಕೆ ತರುತ್ತೆ ಎಂದಿದ್ದಾರೆ.

ಹಣಕಾಸು ಆಯೋಗವು ಬದಲಾವಣೆಯನ್ನು ಹಾಗೂ ಬೆಳವಣಿಗೆ ಮತ್ತು ಉತ್ತಮ ತೆರಿಗೆ ದೃಢೀಕರಣಕ್ಕಾಗಿ ಉತ್ತೇಜಕಗಳನ್ನು ರಚಿಸುವ ಅಗತ್ಯವಿರುವಾಗ ಹಣಕಾಸಿನ ಒಕ್ಕೂಟದ ಸಮಸ್ಯೆಗಳ ಕುರಿತು ಒಟ್ಟಾಗಿ ಚರ್ಚಿಸಲು ಬೆಂಗಳೂರಿನಲ್ಲಿ ನಡೆಯುವ ಸಮಾವೇಶಕ್ಕೆ ನಾನು ಅವರನ್ನು ಆಹ್ವಾನಿಸಿದ್ದೇನೆ ಎಂದು ತಿಳಿಸಿದ್ದಾರೆ.

ಗುರುವಾರ ತಿರುವನಂತಪುರಂನಲ್ಲಿ ನಡೆಯಲಿರುವ ದಕ್ಷಿಣ ಭಾರತದ ಹಣಕಾಸು ಸಚಿವರ ಸಭೆಯಲ್ಲಿ ಭಾಗವಹಿಸಲಿರುವ ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಈ ಮೇಲಿನ ಸಂದೇಶವನ್ನು ಸಂಬಂಧಪಟ್ಟವರಿಗೆ ತಿಳಿಸಲಿದ್ದಾರೆ.

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...