spot_img
spot_img

ಪೂರ್ವ ಪ್ರಧಾನಿ Manmohan Singh ಸ್ಮಾರಕ ವಿಚಾರದಲ್ಲಿ ವಿವಾದ? ಏನು?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Manmohan Singh ಅಂತಿಮ ಸಂಸ್ಕಾರವನ್ನು ರಾಜ್‌ಘಾಟ್‌ನಲ್ಲಿ ನಡೆಸಬೇಕು ಮತ್ತು ಸ್ಮಾರಕವನ್ನು ಕೂಡ ಅಲ್ಲಿಯೇ ನಿರ್ಮಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.ಅಂತ್ಯಕ್ರಿಯೆ ನವದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ನಡೆಯಲಿದೆ. ಇದು ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಇಲ್ಲಿವರೆಗಿನ ಒಟ್ಟು ಬೆಳವಣಿಗೆಗಳ ಮಾಹಿತಿ ಇಲ್ಲಿದೆ.ಮಾಜಿ ಪ್ರಧಾನಿ ಡಾ. Manmohan Singh ಸ್ಮಾರಕ ನಿರ್ಮಿಸುವುದಾಗಿಯೂ ಇದಕ್ಕಾಗಿ 3-4 ದಿನಗಳ ಸಮಯ ಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

New Delhi, ಡಿಸೆಂಬರ್ 28:

ಇದು ಕೇಂದ್ರ ಸರ್ಕಾರದ ಹಾಗೂ ಕಾಂಗ್ರೆಸ್ ಮಧ್ಯೆ ವಿವಾದಕ್ಕೆ ಕಾರಣವಾಗಿದೆ. ಮಾಜಿ ಪ್ರಧಾನಿ ಹೆಸರಿನಲ್ಲಿ ಕೊಳಕು ರಾಜಕಾರಣ ಮಾಡಬೇಡಿ ಎಂದು ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಆಗ್ರಹಿಸಿದೆ.ಮಾಜಿ ಪ್ರಧಾನಿ ಡಾ. Manmohan Singh ಅಂತ್ಯಕ್ರಿಯೆಗೆ ಕೆಲವೇ ಗಂಟೆಗಳ ಮೊದಲು, ಅವರ ಸ್ಮಾರಕದ ನಿರ್ಮಾಣದ ಸ್ಥಳದ ಬಗ್ಗೆ ಕಾಂಗ್ರೆಸ್ ತಗಾದೆ ತೆಗೆದಿದೆ.

ಇದನ್ನು ಓದಿರಿ:RICE HARVEST : ಕೊಡಗಿನ ಬೆಳೆಗಾರರಿಗೆ ಸವಾಲಾದ ಭತ್ತದ ಕೊಯ್ಲು

ಕೇಂದ್ರ ಗೃಹ ಸಚಿವ ಅಮಿತ್ ಶಾ, ಡಾ. ಸಿಂಗ್ ಅವರ ಸ್ಮಾರಕಕ್ಕೆ ಸ್ಥಳವನ್ನು ನಿಗದಿಪಡಿಸಲಾಗುವುದು ಎಂದು ಹೇಳಿದ್ದಾರೆ. ಅಂತ್ಯಕ್ರಿಯೆ ಮತ್ತು ಇತರ ವಿಧಿವಿಧಾನಗಳು ಮುಂದುವರಿಯಲಿದೆ. ಸ್ಮಾರಕಕ್ಕೆ ಜಾಗವನ್ನು 2-3 ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಶಾ ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇದು ರಾಜಕಾರಣಿಗಳು ಮತ್ತು ಮಾಜಿ ಪ್ರಧಾನ ಮಂತ್ರಿಗಳ ಅಂತ್ಯಕ್ರಿಯೆಯ ಸ್ಥಳದಲ್ಲಿ ಅವರ ಸ್ಮಾರಕಗಳನ್ನು ನಿರ್ಮಿಸುವ ಸಂಪ್ರದಾಯಕ್ಕೆ ಅನುಗುಣವಾಗಿದೆ ಎಂದು ಖರ್ಗೆ ಹೇಳಿದ್ದರು. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿಯೇ ಸ್ಮಾರಕ ನಿರ್ಮಿಸುವ ಸಾಧ್ಯತೆಯನ್ನು ಪರಿಶೀಲಿಸಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದರು.

ಮಾಜಿ ಪ್ರಧಾನಿ ಡಾ. Manmohan Singhಗೆ ಅವಮಾನ:

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಮತ್ತು ಸ್ಮಾರಕಕ್ಕೆ ಸ್ಥಳ ನಿಗದಿಪಡಿಸದಿರುವುದು ಭಾರತದ ಮೊದಲ ಸಿಖ್ ಪ್ರಧಾನಿಗೆ ಮಾಡುತ್ತಿರುವ ಉದ್ದೇಶಪೂರ್ವಕ ಅವಮಾನವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ರಾಜ್‌ಘಾಟ್ ಬಳಿಯ ರಾಷ್ಟ್ರೀಯ ಸ್ಮಾರಕದಲ್ಲಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಮಾಡಲು ಏಕೆ ಅನುಮತಿ ಇಲ್ಲ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನು ಓದಿರಿ:ECLIPSES IN 2025 : 2025ರಲ್ಲಿ ಸಂಭವಿಸಲಿವೆ 4 ಗ್ರಹಣ

ಮೂಲಗಳ ಪ್ರಕಾರ, ಈ ಸಭೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಮನಮೋಹನ್ ಸಿಂಗ್ ಕುಟುಂಬಕ್ಕೆ ಸ್ಮಾರಕ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಮನಮೋಹನ್ ಸಿಂಗ್ ಅವರಿಗೆ 2 ನಿಮಿಷ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿ ಸಂತಾಪ ಸೂಚಕ ನಿರ್ಣಯವನ್ನು ಅಂಗೀಕರಿಸಲಾಯಿತು.ಅವರ (ಮನಮೋಹನ್ ಸಿಂಗ್) ಅವರ ಸ್ಥಾನಮಾನಕ್ಕೆ ಅನುಗುಣವಾಗಿ ಸ್ಮಾರಕವನ್ನು ನಿರ್ಮಿಸಲು ಸರ್ಕಾರಕ್ಕೆ 3-4 ದಿನಗಳ ಕಾಲಾವಕಾಶ ಬೇಕಾಗುತ್ತದೆ ಎಂದು ಶಾ ಹೇಳಿದ್ದರು. ಸ್ಮಾರಕದ ಬಗ್ಗೆ ಕುಟುಂಬವು ಸರ್ಕಾರದ ನಿರ್ಧಾರವನ್ನು ಒಪ್ಪಿಕೊಂಡಿತ್ತು.ವೀರಭೂಮಿ (ರಾಜೀವ್ ಗಾಂಧಿ ಸಮಾಧಿ ಸ್ಥಳ) ಮತ್ತು ಶಕ್ತಿ ಸ್ಥಳ (ಇಂದಿರಾ ಗಾಂಧಿ ಸಮಾಧಿ ಸ್ಥಳ) ಬಳಿ ಅವರ ಅಂತಿಮ ಸಂಸ್ಕಾರವನ್ನು ಮಾಡಬೇಕು ಮತ್ತು ಅಟಲ್ ಜೀ ಅವರಿಗೆ ಮಾಡಿದಂತೆ ಅಲ್ಲಿ ಸ್ಮಾರಕವನ್ನು ನಿರ್ಮಿಸಬೇಕು ಎಂದು ಪ್ರಿಯಾಂಕಾ ಹೇಳಿದ್ದರು. ಕಾಂಗ್ರೆಸ್ ಮೂಲಗಳ ಪ್ರಕಾರ, ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಮತ್ತು ಅವರ ಸ್ಮಾರಕ ಸ್ಥಳಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಅವರು ಕೇಂದ್ರ ಸರ್ಕಾರಕ್ಕೆ ಸಲಹೆಗಳನ್ನು ನೀಡಿದ್ದರು. ನಿಗಮಬೋಧ ಘಾಟ್ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದರು. ಆದರೆ ಕೇಂದ್ರ ಸರ್ಕಾರವು ದೇಶದ ಮೊದಲ ಸಿಖ್ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನಿಗಮಬೋಧ ಘಾಟ್‌ನಲ್ಲಿ ಅಂತ್ಯಸಂಸ್ಕಾರ ಮಾಡುವುದಾಗಿ ಘೋಷಿಸುವ ಮೂಲಕ ಅವಮಾನಿಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.

“ಮಾಜಿ ಪ್ರಧಾನಿ ನರಸಿಂಹ ರಾವ್ ಜೀ ಮರಣದ ನಂತರ ಕಾಂಗ್ರೆಸ್​ನವರು ಹೇಗೆ ನಡೆಸಿಕೊಂಡರು ಎಂಬುದನ್ನು ಕಾಂಗ್ರೆಸ್ ನೆನಪಿಸಿಕೊಳ್ಳಬೇಕು. ಪ್ರಣಬ್ ಮುಖರ್ಜಿ ಅವರ ಪುತ್ರಿ ಕೂಡ ಮಾಜಿ ರಾಷ್ಟ್ರಪತಿಯಾಗಿದ್ದ ತಮ್ಮ ತಂದೆಯನ್ನು ಕಾಂಗ್ರೆಸ್ ಎಷ್ಟು ಹೀನಾಯವಾಗಿ ನಡೆಸಿಕೊಂಡಿದೆ ಎಂದು ಟ್ವೀಟ್ ಮಾಡಿದ್ದರು” ಎಂದು ಬಿಜೆಪಿ ಪ್ರಕರಣೆಯಲ್ಲಿ ಉಲ್ಲೇಖಿಸಲಾಗಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...