spot_img
spot_img

COURT JUDGMENT : ಪರಿಹಾರದ 55 ಲಕ್ಷ ರೂಪಾಯಿ ಬಾಕಿ ಇಟ್ಟುಕೊಂಡ ಸಂಸ್ಥೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Gangavati News:

ಪರಿಹಾರ ಮೊತ್ತ ನೀಡದ್ದರಿಂದ ಸಾರಿಗೆ ಇಲಾಖೆಯ ವಾಹನವನ್ನು ಜಪ್ತಿ ಮಾಡಿ COURTಕ್ಕೆ ಒಪ್ಪಿಸಲಾಗಿದೆ.ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ವಕೀಲರಾದ ಗೋವಿಂದರಾಜು, ಕವಿತಾ ನೇತೃತ್ವದಲ್ಲಿ ಆಗಮಿಸಿದ COURTದ ಸಿಬ್ಬಂದಿಗಳಾದ ಯಸೂಫ್ ಮಿಯಾ, ರಮೇಶ, ಉಸ್ಮಾನ್, ಸೈಯದ್ಖಾದರ್, ವೆಂಕಟೇಶ ಇತರರು, ಕೊಪ್ಪಳ ಘಟಕಕ್ಕೆ ಸೇರಿದ ವಾಹನವನ್ನು ಜಪ್ತಿ ಮಾಡಿಕೊಂಡು COURTದ ವಶಕ್ಕೆ ಒಪ್ಪಿಸಿದ್ದಾರೆ.

ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಸಂತ್ರಸ್ತರ ಕುಟುಂಬಕ್ಕೆ ನೀಡಬೇಕಿದ್ದ ಪರಿಹಾರ ಮೊತ್ತವನ್ನು ಕಳೆದ ಐದು ವರ್ಷದಿಂದ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ ಇಲ್ಲಿನ COURTದ ಸಿಬ್ಬಂದಿ, ಮಂಗಳವಾರ ಸಾರಿಗೆ ಇಲಾಖೆಯ ವಾಹನವನ್ನು ಜಪ್ತಿ ಮಾಡಿ COURTಕ್ಕೆ ಒಯ್ದಿದ್ದಾರೆ.ಇದೀಗ 55 ಲಕ್ಷ ಮೊತ್ತದ ಪರಿಹಾರಕ್ಕೆ ಸಾರಿಗೆ ಇಲಾಖೆಯ ವಾಹನ ಜಪ್ತಿ ಮಾಡಲಾಗಿದೆ. ನಿಗದಿತ ಅವಧಿಯಲ್ಲಿ ಇಲಾಖೆಯ ಅಧಿಕಾರಿಗಳು ಪರಿಹಾರದ ಮೊತ್ತ ಪಾವತಿಸದೇ ಹೋದಲ್ಲಿ ಜಪ್ತಿ ಮಾಡಿದ ವಾಹನವನ್ನು COURT ಹರಾಜು ಮಾಡಲಿದೆ.

ನಿರೀಕ್ಷಿತ ಪರಿಹಾರದ ಮೊತ್ತ ಸಿಗದಿದ್ದಲ್ಲಿ ಬಾಕಿ ಮೊತ್ತಕ್ಕೆ ಮತ್ತೆ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದರು.ಈ ಬಗ್ಗೆ ಮಾತನಾಡಿದ ವಕೀಲ ಗೋವಿಂದು, ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಸುರೇಶ ಮತ್ತು ಗಾಯಾಳು ನರಸಪ್ಪ ಎಂಬ ಇಬ್ಬರಿಗೆ COURTವು 55 ಲಕ್ಷ ಮೊತ್ತದ ಪರಿಹಾರಕ್ಕೆ ಆದೇಶಿಸಿದೆ. ಇನ್ನುಳಿದ ಗಾಯಾಳುಗಳ ಪ್ರಕರಣವು COURTದಲ್ಲಿ ವಿಚಾರಣೆಯ ಹಂತದಲ್ಲಿ ಬಾಕಿ ಇದೆ.

Incident Background:  2018ರಲ್ಲಿ ಮರಳಿ ಮತ್ತು ಜಂಗಮರ ಕಲ್ಗುಡಿ ಮಧ್ಯೆ ಇರುವ ಟೋಲ್​ಗೆಟ್​ ಸಮೀಪ ನಡೆದಿದ್ದ ರಸ್ತೆ ಅಪಘಾತದಲ್ಲಿ ಜಂಗಮರ ಕಲ್ಗುಡಿ ಗ್ರಾಮದ ಸುರೇಶ ಬಸಪ್ಪ ಹೊಸೂರು (25) ಎಂಬ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.ಆದರೆ, ಕಳೆದ ಐದು ವರ್ಷದಿಂದ ಯಾವುದೇ ಪರಿಹಾರ ನೀಡಲು ಸಾರಿಗೆ ಇಲಾಖೆ ಮುಂದಾಗದ ಹಿನ್ನೆಲೆ, COURT, ಈಶಾನ್ಯ ಸಾರಿಗೆ ಸಂಸ್ಥೆಗೆ ಯಾವುದೇ ವಾಹನ, ವಸ್ತುಗಳನ್ನು ಜಪ್ತಿ ಮಾಡಿಕೊಂಡು ಬರುವಂತೆ ಸಿಬ್ಬಂದಿಗೆ ಆದೇಶ ನೀಡಿತ್ತು.

ಇದೇ ಘಟನೆಯಲ್ಲಿ ನರಸಪ್ಪ ಗಿಡ್ಡಪ್ಪ ಮಂಗಳಾಪುರ, ಯಮನೂರಪ್ಪ ಲಿಂಗಪ್ಪ ಬಾಲವಂಚಿ, ಹನುಮಂತ ಕಲ್ಗುಡಿ ಎಂಬುವವರಿಗೆ ತೀವ್ರ ಗಾಯಗಳಾಗಿದ್ದವು. ಮೃತ ಸುರೇಶನ ಕುಟುಂಬಕ್ಕೆ 45 ಲಕ್ಷ ಹಾಗೂ ನರಸಪ್ಪ ಎಂಬ ಗಾಯಾಳುವಿಗೆ 10 ಲಕ್ಷ ಪಾವತಿ ಮಾಡುವಂತೆ 2019ರಲ್ಲಿ ಇಲ್ಲಿನ ಸಿನಿಯರ್ ಸಿವಿಲ್ ನ್ಯಾಯಾಲಯ ಆದೇಶ ಮಾಡಿತ್ತು.

ಇದನ್ನು ಓದಿರಿ : GANDHIJI STATUE UNVEILS : ಬೆಳಗಾವಿಯಲ್ಲಿ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿದ ಖರ್ಗೆ

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...