spot_img
spot_img

COURT JUDGMENT : ಪರಿಹಾರದ 55 ಲಕ್ಷ ರೂಪಾಯಿ ಬಾಕಿ ಇಟ್ಟುಕೊಂಡ ಸಂಸ್ಥೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Gangavati News:

ಪರಿಹಾರ ಮೊತ್ತ ನೀಡದ್ದರಿಂದ ಸಾರಿಗೆ ಇಲಾಖೆಯ ವಾಹನವನ್ನು ಜಪ್ತಿ ಮಾಡಿ COURTಕ್ಕೆ ಒಪ್ಪಿಸಲಾಗಿದೆ.ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ವಕೀಲರಾದ ಗೋವಿಂದರಾಜು, ಕವಿತಾ ನೇತೃತ್ವದಲ್ಲಿ ಆಗಮಿಸಿದ COURTದ ಸಿಬ್ಬಂದಿಗಳಾದ ಯಸೂಫ್ ಮಿಯಾ, ರಮೇಶ, ಉಸ್ಮಾನ್, ಸೈಯದ್ಖಾದರ್, ವೆಂಕಟೇಶ ಇತರರು, ಕೊಪ್ಪಳ ಘಟಕಕ್ಕೆ ಸೇರಿದ ವಾಹನವನ್ನು ಜಪ್ತಿ ಮಾಡಿಕೊಂಡು COURTದ ವಶಕ್ಕೆ ಒಪ್ಪಿಸಿದ್ದಾರೆ.

ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಸಂತ್ರಸ್ತರ ಕುಟುಂಬಕ್ಕೆ ನೀಡಬೇಕಿದ್ದ ಪರಿಹಾರ ಮೊತ್ತವನ್ನು ಕಳೆದ ಐದು ವರ್ಷದಿಂದ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ ಇಲ್ಲಿನ COURTದ ಸಿಬ್ಬಂದಿ, ಮಂಗಳವಾರ ಸಾರಿಗೆ ಇಲಾಖೆಯ ವಾಹನವನ್ನು ಜಪ್ತಿ ಮಾಡಿ COURTಕ್ಕೆ ಒಯ್ದಿದ್ದಾರೆ.ಇದೀಗ 55 ಲಕ್ಷ ಮೊತ್ತದ ಪರಿಹಾರಕ್ಕೆ ಸಾರಿಗೆ ಇಲಾಖೆಯ ವಾಹನ ಜಪ್ತಿ ಮಾಡಲಾಗಿದೆ. ನಿಗದಿತ ಅವಧಿಯಲ್ಲಿ ಇಲಾಖೆಯ ಅಧಿಕಾರಿಗಳು ಪರಿಹಾರದ ಮೊತ್ತ ಪಾವತಿಸದೇ ಹೋದಲ್ಲಿ ಜಪ್ತಿ ಮಾಡಿದ ವಾಹನವನ್ನು COURT ಹರಾಜು ಮಾಡಲಿದೆ.

ನಿರೀಕ್ಷಿತ ಪರಿಹಾರದ ಮೊತ್ತ ಸಿಗದಿದ್ದಲ್ಲಿ ಬಾಕಿ ಮೊತ್ತಕ್ಕೆ ಮತ್ತೆ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದರು.ಈ ಬಗ್ಗೆ ಮಾತನಾಡಿದ ವಕೀಲ ಗೋವಿಂದು, ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಸುರೇಶ ಮತ್ತು ಗಾಯಾಳು ನರಸಪ್ಪ ಎಂಬ ಇಬ್ಬರಿಗೆ COURTವು 55 ಲಕ್ಷ ಮೊತ್ತದ ಪರಿಹಾರಕ್ಕೆ ಆದೇಶಿಸಿದೆ. ಇನ್ನುಳಿದ ಗಾಯಾಳುಗಳ ಪ್ರಕರಣವು COURTದಲ್ಲಿ ವಿಚಾರಣೆಯ ಹಂತದಲ್ಲಿ ಬಾಕಿ ಇದೆ.

Incident Background:  2018ರಲ್ಲಿ ಮರಳಿ ಮತ್ತು ಜಂಗಮರ ಕಲ್ಗುಡಿ ಮಧ್ಯೆ ಇರುವ ಟೋಲ್​ಗೆಟ್​ ಸಮೀಪ ನಡೆದಿದ್ದ ರಸ್ತೆ ಅಪಘಾತದಲ್ಲಿ ಜಂಗಮರ ಕಲ್ಗುಡಿ ಗ್ರಾಮದ ಸುರೇಶ ಬಸಪ್ಪ ಹೊಸೂರು (25) ಎಂಬ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.ಆದರೆ, ಕಳೆದ ಐದು ವರ್ಷದಿಂದ ಯಾವುದೇ ಪರಿಹಾರ ನೀಡಲು ಸಾರಿಗೆ ಇಲಾಖೆ ಮುಂದಾಗದ ಹಿನ್ನೆಲೆ, COURT, ಈಶಾನ್ಯ ಸಾರಿಗೆ ಸಂಸ್ಥೆಗೆ ಯಾವುದೇ ವಾಹನ, ವಸ್ತುಗಳನ್ನು ಜಪ್ತಿ ಮಾಡಿಕೊಂಡು ಬರುವಂತೆ ಸಿಬ್ಬಂದಿಗೆ ಆದೇಶ ನೀಡಿತ್ತು.

ಇದೇ ಘಟನೆಯಲ್ಲಿ ನರಸಪ್ಪ ಗಿಡ್ಡಪ್ಪ ಮಂಗಳಾಪುರ, ಯಮನೂರಪ್ಪ ಲಿಂಗಪ್ಪ ಬಾಲವಂಚಿ, ಹನುಮಂತ ಕಲ್ಗುಡಿ ಎಂಬುವವರಿಗೆ ತೀವ್ರ ಗಾಯಗಳಾಗಿದ್ದವು. ಮೃತ ಸುರೇಶನ ಕುಟುಂಬಕ್ಕೆ 45 ಲಕ್ಷ ಹಾಗೂ ನರಸಪ್ಪ ಎಂಬ ಗಾಯಾಳುವಿಗೆ 10 ಲಕ್ಷ ಪಾವತಿ ಮಾಡುವಂತೆ 2019ರಲ್ಲಿ ಇಲ್ಲಿನ ಸಿನಿಯರ್ ಸಿವಿಲ್ ನ್ಯಾಯಾಲಯ ಆದೇಶ ಮಾಡಿತ್ತು.

ಇದನ್ನು ಓದಿರಿ : GANDHIJI STATUE UNVEILS : ಬೆಳಗಾವಿಯಲ್ಲಿ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿದ ಖರ್ಗೆ

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...