spot_img
spot_img

CT RAVI CASE : ಸಿ ಟಿ ರವಿ ಕೇಸ್ ರೂಲಿಂಗ್ ಬಳಿಕವೂ ಸಿಐಡಿ ತನಿಖೆಗೆ ವಹಿಸಿರುವುದಕ್ಕೆ ಆಕ್ಷೇಪ

spot_img
spot_img

Share post:

Bangalore News:

ರೂಲಿಂಗ್ ನೀಡಿದರೂ ವಿಧಾನ ಪರಿಷತ್​ ಬಿಜೆಪಿ ಸದಸ್ಯ CT RAVI CASEನ್ನು ಸಿಐಡಿ ತನಿಖೆಗೆ ವಹಿಸಿರುವ ಬಗ್ಗೆ ಆಕ್ಷೇಪಿಸಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಗೃಹ ಸಚಿವ ಜಿ. ಪರಮೇಶ್ವರ್​​ಗೆ ಪತ್ರ ಬರೆದಿದ್ದಾರೆ.‌ಸದನದಲ್ಲಿ ನಡೆದಂತಹ ಘಟನೆಯನ್ನು ಚರ್ಚಿಸುವುದು, ಮುಕ್ತಾಯ ಮಾಡುವುದು ಮತ್ತು ಅದರ ಬಗ್ಗೆ ತೀರ್ಮಾನಿಸುವುದರಲ್ಲಿ ಸದನಕ್ಕೆ ಸಾರ್ವಭೌಮತ್ವ ಅಧಿಕಾರವಿರುತ್ತದೆ ಎಂದು ಗೃಹ ಸಚಿವರಿಗೆ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ.

ಬೆಳಗಾವಿ ವಿಧಾನ ಪರಿಷತ್ ಕಲಾಪದಲ್ಲಿನ ಅವಾಚ್ಯ ಶಬ್ದ ಬಳಕೆ ಆರೋಪದ ಘಟನೆ ಕುರಿತು ಸಿಐಡಿ ತನಿಖೆ ಬಗ್ಗೆ ಪತ್ರ ಬರೆದಿರುವ ಸಭಾಪತಿ, ರೂಲಿಂಗ್ ನೀಡಿದ್ದರೂ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಕ್ರಮ ಪ್ರಶ್ನಿಸಿದ್ದಾರೆ. ಸಭಾಪತಿ ಅಧಿಕಾರಕ್ಕೆ ಚ್ಯುತಿ ಬರುವಂತೆ ಕಾರ್ಯಾಂಗ ವರ್ತಿಸಬಾರದು. ಸದನದ ಹಾಗೂ ಸಭಾಪತಿಗಳ ಸಾರ್ವಭೌಮತ್ವವನ್ನು ಬಲಿ ಕೊಡಬಾರದು.

ಇಂತಹ ತನಿಖೆ ಅಗತ್ಯತೆ ಬಗ್ಗೆ ಪ್ರಶ್ನಿಸಿ ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದಾರೆ.‌ CT RAVI CASEನ್ನು ಸಿಐಡಿಗೆ ಕೊಟ್ಟಿರುವುದು ತಿಳಿದುಬಂದಿದೆ. ನೀವು ಯಾವ ವಿಷಯವನ್ನು ಸಿಐಡಿಗೆ ಕೊಟ್ಟಿರಬಹುದು ಎಂಬ ಬಗ್ಗೆ ನಮಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ. ಸದನದಲ್ಲಿ ನಡೆದಂತಹ ಘಟನೆಯನ್ನು ಚರ್ಚಿಸುವುದು, ಮುಕ್ತಾಯ ಮಾಡುವುದು ಮತ್ತು ಅದರ ಬಗ್ಗೆ ತೀರ್ಮಾನಿಸುವುದರಲ್ಲಿ ಸದನಕ್ಕೆ ಸಾರ್ವಭೌಮತ್ವ ಅಧಿಕಾರವಿರುತ್ತದೆ ಎಂದಿದ್ದಾರೆ.‌

ಸಂಸದೀಯ ಪದ್ಧತಿ, ಪ್ರಕ್ರಿಯೆ ಹಾಗೂ ಭಾರತದ ಸಂವಿಧಾನದಲ್ಲಿ ಶಾಸಕಾಂಗಕ್ಕೆ ಮತ್ತು ಸಭಾಪತಿಯವರಿಗೆ ಪ್ರದತ್ತವಾಗಿರುವ ವಿಶೇಷ ಅಧಿಕಾರಕ್ಕೆ ಚ್ಯುತಿ ಬರುವಂತೆ ಕಾರ್ಯಾಂಗ CT RAVI CASEನ್ನು ಸಿಐಡಿಗೆ ವಹಿಸಿಕೊಡುವುದರ ಮೂಲಕ ಸಾಂವಿಧಾನಿಕ ಘರ್ಷಣೆಗೆ ಅವಕಾಶ ಮಾಡಿಕೊಡುತ್ತಿದೆ ಎಂದು ಭಾಸವಾಗುತ್ತಿದೆ ಎಂದು ಆಕ್ಷೇಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿನಾಕಾರಣ ಶಾಸಕಾಂಗ ಮತ್ತು ಕಾರ್ಯಾಂಗದ ನಡುವೆ ಸಂಘರ್ಷ ಉಂಟಾಗುವ ಪ್ರಮೇಯ ನಿರ್ಮಾಣವಾಗಬಾರದು.

ವಿಧಾನ ಮಂಡಲ ಸದನದಲ್ಲಿ ನಡೆದ ಘಟನೆಯು ಸಭಾಪತಿಯವರ ಕಾರ್ಯವ್ಯಾಪ್ತಿಗೆ ನಿಹಿತವಾಗಿರುವುದು ತಮಗೆ ತಿಳಿದ ವಿಚಾರವಾಗಿದ್ದು, ಕಾರ್ಯಾಂಗ ಮತ್ತು ಶಾಸಕಾಂಗದ ನಾವಿಬ್ಬರು ಸಂವಿಧಾನದ ಚೌಕಟ್ಟಿನಲ್ಲಿ ಪರಸ್ಪರ ಗೌರವದೊಂದಿಗೆ ನಮ್ಮ ನಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕಾಗಿರುತ್ತದೆ. ತಾವೂ ಕೂಡ ಸಂವಿಧಾನದ ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿರುವ ಅಪಾರ ಅನುಭವವುಳ್ಳವರಾಗಿದ್ದೀರಿ. ಸಂವಿಧಾನದ ಅಡಿಯಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತೀರಿ ಎನ್ನುವ ಸಂಪೂರ್ಣ ವಿಶ್ವಾಸವಿದೆ.

ಅದರಂತೆ, ಸಂವಿಧಾನದ ಚೌಕಟ್ಟಿನಲ್ಲಿ ಶಾಸಕಾಂಗಕ್ಕೆ/ಶಾಸಕರಿಗೆ ಕಲ್ಪಿಸಿರುವ ವಿಶೇಷ ಹಕ್ಕು ಹಾಗೂ ಸಂಸದೀಯ ಪದ್ಧತಿ ಹಾಗೂ ಪ್ರಕ್ರಿಯೆಗಳಲ್ಲಿ ಸಭಾಪತಿಯವರಿಗೆ ನಿಹಿತವಾಗಿರುವ ಹಕ್ಕು ಹಾಗೂ ಸದನದ ಸಾರ್ವಭೌಮತ್ವವನ್ನು ಗಮನದಲ್ಲಿಟ್ಟುಕೊಂಡು ಈ ಪ್ರಕರಣವನ್ನು ನಿರ್ವಹಿಸುವುದಾಗಿ ನಂಬಿರುತ್ತೇನೆ ಎಂದು ಪತ್ರದಲ್ಲಿ ಬಸವರಾಜ ಹೊರಟ್ಟಿ ಉಲ್ಲೇಖಿಸಿದ್ದಾರೆ.

19.12.2024 ರಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನ ಪರಿಷತ್ತಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಭಾರತದ ಸಂವಿಧಾನ, ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯ ವಿಧಾನ ಹಾಗೂ ನಡವಳಿಕೆಯ ನಿಯಮಗಳು, ಲೋಕಸಭೆ ಮತ್ತು ರಾಜ್ಯ ಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳು, ಕೌಲ್ ಅಂಡ್ ಶಕ್ದರ್ ಅವರ ಪ್ರಾಕ್ಟಿಸ್ ಆಂಡ್ ಪ್ರೊಸಿಜರ್ ಆಫ್ ಪಾರ್ಲಿಮೆಂಟ್ ಮತ್ತು ಸುಭಾಷ್ ಕಶ್ಯಪ್ ಅವರ ಪಾರ್ಲಿಮೆಂಟರಿ ಪ್ರೊಸಿಜರ್‌ಗಳನ್ನು ಪರಾಮರ್ಶಿಸಿಕೊಂಡು ಪೀಠದಿಂದ ತೀರ್ಪು ನೀಡಲಾಗಿದೆ ಎಂದು ಸಭಾಪತಿಗಳು ಉಲ್ಲೇಖಿಸಿದ್ದಾರೆ.

ಸಾಂವಿಧಾನಿಕ ಹುದ್ದೆಯಾಗಿರುವ ಸಭಾಪತಿ ಅವರಿಗೆ ಸಂಸದೀಯ ಪದ್ಧತಿ ಮತ್ತು ಪ್ರಕ್ರಿಯೆಯಲ್ಲಿ ಸಾರ್ವಭೌಮತ್ವ ಅಧಿಕಾರ ಇದೆ. ಕಲಾಪ ನಡೆಯುತ್ತಿರುವಾಗ ಸದನದಲ್ಲಿ ಅವ್ಯವಸ್ಥಿತ ನಡತೆಗಾಗಿ ಅಥವಾ ಇತರೆ ನಿಂದನೆಗಳಿಗಾಗಿ ಅದರ ಸದಸ್ಯರನ್ನು ಶಿಕ್ಷಿಸುವ ಅಧಿಕಾರ ಸದನಕ್ಕೆ ಇರುತ್ತದೆ. ಈ ಪ್ರಕಾರದಲ್ಲಿ ಈವರೆಗೂ ಪಾಲಿಸಿಕೊಂಡು ಬಂದಿರುವ ಸತ್ಸಂಪ್ರದಾಯಗಳು ಮತ್ತು ಸದನದ ಆವರಣದ ಒಳಗೆ ಶಿಸ್ತು ಸಂರಕ್ಷಿಸುವುದು, ವ್ಯವಹರಣೆಗಳನ್ನು ನಿಯಂತ್ರಿಸುವ ಅಧಿಕಾರ ಸಭಾಪತಿಯವರಿಗೆ ಪ್ರದತ್ತವಾಗಿದ್ದು, ಅವರ ತೀರ್ಪು ಅಂತಿಮವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿರಿ : JAGADISH SHETTAR : ಸಿಎಂ ಕುರ್ಚಿ ಕಿತ್ತಾಟದಿಂದ ಕಾಂಗ್ರೆಸ್ ಸರ್ಕಾರದ ಪತನ ಖಚಿತ

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...