spot_img
spot_img

CYBER CRIME : ನಕಲಿ ಕಾಲ್ ಸೆಂಟರ್ ಪತ್ತೆ, 11 ಜನರ ಬಂಧನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Gurugram News:

ನಕಲಿ ಆಯುರ್ವೇದ ಔಷಧಿ ಮಾರುತ್ತಿದ್ದ ಆರೋಪದ ಮೇಲೆ ಪೊಲೀಸರು 11 ಜನರನ್ನು ಬಂಧಿಸಿದ್ದಾರೆ.ಬಂಧಿತರಿಂದ ವಿವಿಧ ಅಪರಾಧಗಳಿಗೆ ಬಳಸಿದ ಎರಡು ಲ್ಯಾಪ್ ಟಾಪ್​ಗಳು ಮತ್ತು ನಾಲ್ಕು ಮೊಬೈಲ್ ಫೋನ್​ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.ಲೈಂಗಿಕ ಆರೋಗ್ಯ ಸಮಸ್ಯೆಗಳಿಗೆ ಗಿಡಮೂಲಿಕೆ ಔಷಧಿಗಳನ್ನು ಮಾರಾಟ ಮಾಡುವ ನೆಪದಲ್ಲಿ ಜನರನ್ನು ವಂಚಿಸುತ್ತಿದ್ದ ನಾಲ್ವರು ಮಹಿಳೆಯರು ಸೇರಿದಂತೆ ಹನ್ನೊಂದು ಜನರನ್ನು ಗುರುಗ್ರಾಮ್ ಪೊಲೀಸರು ಬಂಧಿಸಿದ್ದಾರೆ.

ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಆರೋಪಿಗಳಾದ ಅಮನ್ ದೀಪ್, ರಂಜಿತ್ ಕುಮಾರ್, ಮೊಹಮ್ಮದ್ ಕಾಸಿಮ್, ಪ್ರತುಶ್ ಕುಮಾರ್ ಮಿಶ್ರಾ, ಸುಶೀಲ್ ಕುಮಾರ್, ಬ್ರಿಜೇಶ್ ಶರ್ಮಾ, ಅನೂಪ್ ಕುಮಾರ್, ರಶಿಕಾ ರಾಣಾ, ಇಶಾ, ಸೋನಾಲಿ ಕನ್ನೋಜಿಯಾ ಮತ್ತು ಮೇಘಾ ಎಂಬುವರನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜನರನ್ನು ವಂಚಿಸಲು ಈ ಆರೋಪಿಗಳು ದುಂಡಹೇರಾ ಗ್ರಾಮದಲ್ಲಿ ಸ್ಥಾಪಿಸಿಕೊಂಡಿದ್ದ ನಕಲಿ ಕಾಲ್ ಸೆಂಟರ್​ ಅನ್ನು ಜನವರಿ 6 ರಂದು ಪತ್ತೆ ಮಾಡಲಾಗಿದೆ ಎಂದು ಗುರುಗ್ರಾಮ್ ಜಿಲ್ಲೆಯ CYBER CRIMEದ ಸಹಾಯಕ ಪೊಲೀಸ್ ಆಯುಕ್ತ ಪ್ರಿಯಾಂಶು ದಿವಾನ್ ತಿಳಿಸಿದರು.ಗುರುಗ್ರಾಮದ ಸೈಬರ್ ಅಪರಾಧ (ಪಶ್ಚಿಮ) ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಮತ್ತು 66 ಡಿ ಐಟಿ ಕಾಯ್ದೆಯ ಸೆಕ್ಷನ್ 318, 319 ಮತ್ತು 612 ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಅಮನ್ ದೀಪ್ ಮತ್ತು ರಂಜಿತ್ ಕಾಲ್ ಸೆಂಟರ್​ ನಡೆಸುತ್ತಿದ್ದು, ಇತರ ಆರೋಪಿಗಳನ್ನು ಅವರು ನೌಕರಿಗೆ ನೇಮಿಸಿಕೊಂಡಿದ್ದರು ಎಂದು ವಿಚಾರಣೆಯ ವೇಳೆ ತಿಳಿದುಬಂದಿದೆ.ಜಾಹೀರಾತುಗಳಲ್ಲಿ ನೀಡಲಾದ ಫೋನ್ ನಂಬರಿಗೆ ಗ್ರಾಹಕರು ಕರೆ ಮಾಡಿದಾಗ ಔಷಧಿಗಾಗಿ ಆರ್ಡರ್ ಪಡೆದು ಅವರಿಂದ ತಮ್ಮ ಬ್ಯಾಂಕ್ ಖಾತೆಗಳಿಗೆ ಆರೋಪಿಗಳು ಹಣ ಹಾಕಿಸಿಕೊಳ್ಳುತ್ತಿದ್ದರು.

ನಂತರ ಅವರಿಗೆ ನಕಲಿ ಔಷಧಿಗಳನ್ನು ಕಳುಹಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.ಡಾ. ರಾಜೀವ್ ದೀಕ್ಷಿತ್ ಎಂಬುವರ ಹೆಸರಿನಲ್ಲಿ ‘ದಿ-ವೇದಿಕ್ ಆಯುರ್ವೇದಿಕ್’ ಎಂಬ ಫೇಸ್ ಬುಕ್ ಪೇಜ್ ರಚಿಸಿ, ಅದರಲ್ಲಿ ಉತ್ತಮ ಲೈಂಗಿಕ ಆರೋಗ್ಯಕ್ಕಾಗಿ ಗಿಡಮೂಲಿಕೆ ಔಷಧಿಗಳನ್ನು ಮಾರಾಟ ಮಾಡುವ ಜಾಹೀರಾತುಗಳನ್ನು ಹಾಕುತ್ತಿರುವ ಬಗ್ಗೆ ಆರೋಪಿಗಳು ಬಹಿರಂಗಪಡಿಸಿದ್ದಾರೆ. ಇದಲ್ಲದೆ, ಕ್ಯೂಆರ್ ಕೋಡ್ ಮತ್ತು ಯುಪಿಐ ಐಡಿಗಳ ಮೂಲಕವೂ ಆರೋಪಿಗಳು ಜನರಿಂದ ಹಣ ಜಮೆ ಮಾಡಿಕೊಳ್ಳುತ್ತಿದ್ದರು.

ಕಳೆದ ಸುಮಾರು 9 ರಿಂದ 10 ತಿಂಗಳುಗಳಿಂದ ಈ ವಂಚನೆಯ ವ್ಯವಹಾರ ನಡೆಯುತ್ತಿತ್ತು. ಕಾಲ್ ಸೆಂಟರ್​ನಲ್ಲಿ ಕೆಲಸ ಮಾಡುವವರಿಗೆ ತಿಂಗಳಿಗೆ 18 ರಿಂದ 20 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತಿತ್ತು ಮತ್ತು ಹೆಚ್ಚು ಸರಕು ಮಾರಾಟ ಮಾಡಿದವರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿರಿ : ONE RUPEE FEE CONVENT : ಮಕ್ಕಳಿಗೆ ಪುಸ್ತಕ, ಸಮವಸ್ತ್ರ, ಶೂ ಉಚಿತ!

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...