spot_img
spot_img

DK SHIVAKUMAR: ಬೆಳಗಾವಿಯಲ್ಲಿ ಕಪಿಲೇಶ್ವರನಿಗೆ ಡಿಸಿಎಂ ಡಿಕೆಶಿ ಕ್ಷೀರಾಭಿಷೇಕ.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Belgaum News:

ಕಪಿಲೇಶ್ವರ ಮಂದಿರದಲ್ಲಿ ಡಿ.ಕೆ.SHIVAKUMAR ಅವರು ಶಿವಲಿಂಗಕ್ಕೆ ಪಂಚಾಮೃತ ಅಭೀಷೇಕ ಮಾಡಿ, ಆರ್ಶೀವಾದ ಪಡೆದರು. ಬಳಿಕ ದೇವಸ್ಥಾನ‌ ಕಮೀಟಿಯು ಡಿಸಿಎಂ ಅವರನ್ನು ಸತ್ಕರಿಸಿತು.ಬೆಳಗಾವಿಯಲ್ಲಿ ನಡೆಯುವ ಗಾಂಧಿ ಭಾರತ ಕಾರ್ಯಕ್ರಮ ಯಾವ ಅಡಚಣೆ ಇಲ್ಲದೇ ಯಶಸ್ವಿಯಾಗಿ ನೆರವೇರಲಿ ಎಂದು ಡಿಸಿಎಂ ಡಿ.ಕೆ.SHIVAKUMAR ದೇವರ ಮೊರೆ ಹೋಗಿದ್ದಾರೆ.

ದಕ್ಷಿಣ ಕಾಶಿ ಎಂದೇ ಕರೆಸಿಕೊಳ್ಳುವ ಬೆಳಗಾವಿ ಕಪಿಲೇಶ್ವರ ಮಂದಿರದಲ್ಲಿ ಇಂದು ಡಿಸಿಎಂ ವಿಶೇಷ ಪೂಜೆ ಸಲ್ಲಿಸಿದರು.ಜೊತೆಗೆ ಶಾಂತಿ, ನೆಮ್ಮದಿಯಿಂದ ರಾಜ್ಯದ ಜನತೆಗೆ ಒಳ್ಳೆಯದು ಆಗಲಿ ಎಂದು ಪ್ರಾರ್ಥಿಸಿ 111 ಲೀಟರ್ ಹಾಲಿನಿಂದ ಕ್ಷೀರಾಭಿಷೇಕ ಮಾಡಿದ್ದೇನೆ.

ಭಗವಂತನಲ್ಲಿ ಬಹಳ ಭಕ್ತಿಪೂರ್ವಕವಾಗಿ ಪ್ರಾರ್ಥಿಸಿದ್ದೇನೆ. ಅದೇ ರೀತಿ ಕಾರ್ಯಕ್ರಮವೂ ಯಶಸ್ವಿಯಾಗಬೇಕು. ರಾಜ್ಯದ ಜನತೆಗೂ ಮತ್ತು ಮಾಧ್ಯಮಗಳಿಗೂ ಒಳ್ಳೆಯದು ಆಗಲಿ ಎಂದು ಪೂಜೆ ಮಾಡಿದ್ದೇನೆ ಎಂದರು.

ಈ ದೇಶಕ್ಕೆ ಹೊಸ ಇತಿಹಾಸ ಸೃಷ್ಟಿಯಾಗಬೇಕು. ಸಂವಿಧಾನ ರಕ್ಷಣೆ ಆಗಬೇಕು. ಮಹಾತ್ಮ ಗಾಂಧೀಜಿ, ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಆದರ್ಶ, ಆಚಾರ, ವಿಚಾರಗಳು ಉಳಿಯಬೇಕು ಎನ್ನುವ ನಿಟ್ಟಿನಲ್ಲಿ ದೊಡ್ಡ ಹೆಜ್ಜೆ ಇಟ್ಟಿದ್ದೇವೆ. ಆ ಹಿನ್ನೆಲೆಯಲ್ಲಿ ಈಶ್ವರನ ಆಶೀರ್ವಾದ ಸಿಗಲಿ.

ಕಪಿಲೇಶ್ವರ ದೇವಸ್ಥಾನವನ್ನು ದಕ್ಷಿಣ ಕಾಶಿ ಅಂತಾ ಕರೆಯುತ್ತಾರೆ. 1924ರಲ್ಲಿ ಕಾಂಗ್ರೆಸ್ ಅಧಿವೇಶನಕ್ಕೆ ಬಂದ ವೇಳೆ ಮಹಾತ್ಮ ಗಾಂಧೀಜಿ ಈ ಕಪಿಲೇಶ್ವರ ದೇವಸ್ಥಾನಕ್ಕೆ ಬಂದಿದ್ದರು. ಅದೇ ರೀತಿ ಬಾಲಗಂಗಾಧರ ತಿಲಕ್, ಸ್ವಾಮಿ ವಿವೇಕಾನಂದ, ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಇಲ್ಲಿಗೆ ಬಂದ ಇತಿಹಾಸವಿದೆ.

ಹಾಗಾಗಿ, ನಾನು ಬಂದು ಪೂಜೆ ಸಲ್ಲಿಸಿದ್ದೇನೆ ಎಂದು ಡಿ.ಕೆ.SHIVAKUMAR ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಭಕ್ತನಿಗೂ ಭಗವಂತನಿಗೂ ವ್ಯವಹಾರ ನಡೆಯುವ ಸ್ಥಳವೇ ದೇವಾಲಯ. ನಮ್ಮ ಹಿಂದೂ ಧರ್ಮದಲ್ಲಿ ಎಲ್ಲ ದೇವರಗಿಂತ ದೊಡ್ಡ ದೇವರು ಪರಮೇಶ್ವರ. ಪರಮೇಶ್ವರನ ಪ್ರತಿರೂಪ ಈಶ್ವರ.

Going to Kumbh Mela:ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶಕ್ಕೆ 100 ವರ್ಷವಾದ ಹಿನ್ನೆಲೆಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಜ.21ರಂದು ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ.ನಾನು ಕೂಡ ಈ ಬಾರಿ ಕುಂಭಮೇಳಕ್ಕೆ ಹೋಗುತ್ತಿದ್ದೇನೆ. ಉತ್ತರಪ್ರದೇಶ ಸರ್ಕಾರದ ಹಿರಿಯ ಸಚಿವರು ನನಗೆ ಆಹ್ವಾನಿಸಿದ್ದಾರೆ‌.

ಯಾವುದೇ ಧರ್ಮದವರು ಆಗಲಿ, ಎಲ್ಲರಿಗೂ ಒಂದೊಂದು ನಂಬಿಕೆ ಇರುತ್ತದೆ ಎಂದ ಡಿ.ಕೆ.SHIVAKUMAR ತಿಳಿಸಿದರು.ಈ ವೇಳೆ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್​, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಹೆಬ್ಬಾಳ್ಕರ್ ಸೇರಿ ಮತ್ತಿತರರು ಇದ್ದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

WOMAN DONATES 35 YEARS OF SAVINGS:35 ವರ್ಷದ ಉಳಿತಾಯದ ಹಣವನ್ನು ಶಿಕ್ಷಣ ಸಂಸ್ಥೆಗೆ ದಾನ ಮಾಡಿದ ಮಹಿಳೆ.

Tirupati (Andhra Pradesh) News: ರೇಣಿಗುಂಟದ ಸಿ.ಮೋಹನ ದಾನ ಮಾಡಿದ WOMAN. ಇವರು ವಿಶ್ವಸಂಸ್ಥೆಯ ಅಭಿವೃದ್ಧಿ ಮತ್ತು ನಿರ್ವಹಣೆ ವಲಯದಲ್ಲಿ ಕೊಸೊವೊ, ಅಲ್ಬೇನಿಯಾ, ಯೆಮೆನ್, ಸೌದಿ...

BOMB THREAT CALLS TO AIRLINES : 2024ರಲ್ಲಿ ವಿಮಾನಗಳಿಗೆ ಬಂದಿದ್ದು ಬರೋಬ್ಬರಿ 728 ಹುಸಿ ಬಾಂಬ್ ಕರೆ, ಇಂಡಿಗೋಗೆ ಅತಿ ಹೆಚ್ಚು

New Delhi News: 2024ರಲ್ಲಿ ಒಟ್ಟು 728 ಹುಸಿ ಬಾಂಬ್​ ಕರೆಗಳು ವಿವಿಧ ವಿಮಾನಯಾನ ಸಂಸ್ಥೆಗಳಿಗೆ ಬಂದಿವೆ. ಅದರಲ್ಲಿ 714 ದೇಶಿಯ ವಿಮಾನ ಸಂಸ್ಥೆಗಳಿಗೆ ಬಂದಿವೆ....

HOUSE BURGLAR ARREST : ಪ್ರೊಪೆಷನಲ್ ಬಾಕ್ಸರ್ನಿಂದ 150ಕ್ಕೂ ಹೆಚ್ಚು ಮನೆಗಳ್ಳತನ

Bangalore News: HOUSE BURGLAR ARREST  ಬಾಕ್ಸಿಂಗ್ ಬಿಟ್ಟು ಕಳ್ಳತನಕ್ಕಿಳಿದು, 150ಕ್ಕೂ ಹೆಚ್ಚು ಮನೆಗೆ ಕನ್ನ ಹಾಕಿದ್ದ ಕುಖ್ಯಾತ ಅಂತಾರಾಜ್ಯ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.ಸೋಲ್ಹಾಪುರದ ಮಂಗಳವಾರ್...

IRAN SATELLITES : ದೇಶೀಯವಾಗಿ ತಯಾರಿಸಿದ 3 ಉಪಗ್ರಹಗಳನ್ನು ಅನಾವರಣಗೊಳಿಸಿದ ಇರಾನ್

Tehran News: IRAN SATELLITES ತಾನು ದೇಶೀಯವಾಗಿ ತಯಾರಿಸಿದ ಮೂರು ಉಪಗ್ರಹಗಳನ್ನು ಅನಾವರಣಗೊಳಿಸಿದೆ. ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸಚಿವ...