spot_img
spot_img

DEVOTEES DIED : ರಾಮ ಮಂದಿರಕ್ಕೆ ಆಗಮಿಸಿದ್ದ ಇಬ್ಬರು ಭಕ್ತರು ಸಾವು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Ayodhya (Uttar Pradesh) News:

ಅಯೋಧ್ಯೆಯಲ್ಲಿನ ರಾಮಲಲ್ಲಾನ ದರ್ಶನಕ್ಕಾಗಿ ಆಗಮಿಸಿದ್ದ DEVOTEES DIED ಘಟನೆ ನಡೆದಿದೆ. ಕಾಲ್ತುಳಿತದಿಂದ ಈ ಸಾವು ಸಂಭವಿಸಿದೆ ಎಂದು ಜಾಲತಾಣದಲ್ಲಿ ಈ ಸುದ್ದಿ ಹರಿದಾಡುತ್ತಿದೆಯಾದರೂ ಪೊಲೀಸರು ಮಾತ್ರ ಈ ವದಂತಿಯನ್ನು ತಳ್ಳಿ ಹಾಕಿದ್ದಾರೆ. ಕಾಲ್ತುಳಿತದಿಂದ DEVOTEES DIED ಈ ಸಾವು ಸಂಭವಿಸಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿ ಹರಿದಾಡುತ್ತಿದೆಯಾದರೂ ಪೊಲೀಸರು ಈ ವದಂತಿಯನ್ನು ತಳ್ಳಿ ಹಾಕಿದ್ದಾರೆ.

ಅಯೋಧ್ಯೆಯ ರಾಮ ಮಂದಿರಕ್ಕೆ ಆಗಮಿಸಿದ್ದ ಹರಿಯಾಣದ ಇಬ್ಬರು ವೃದ್ಧ ಭಕ್ತರು ಸೋಮವಾರ ನಿಧನರಾಗಿರುವುದಾಗಿ ತಿಳಿದು ಬಂದಿದೆ. ”DEVOTEES DIED ರಾಮ ಮಂದಿರಕ್ಕೆ ಭೇಟಿ ನೀಡಲು ಸಾಲಿನಲ್ಲಿ ಕಾಯುತ್ತಿದ್ದಾಗ ಇಬ್ಬರೂ ಮೂರ್ಛೆ ಹೋಗಿದ್ದು, ಅವರನ್ನು ತಕ್ಷಣ ಶ್ರೀರಾಮ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟರಲ್ಲಾಗದೇ ಎಲ್ಲವೂ ಕೈಮೀರಿತ್ತು.

DEVOTEES DIED 60 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದು, ಸಾವಿಗೆ ನಿಖರವಾದ ಕಾರಣ ಕೂಡ ತಿಳಿದು ಬಂದಿಲ್ಲ. ಆದರೆ, ಅವರು ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ವೈದ್ಯರು ಅನುಮಾನ ವ್ಯಕ್ತಪಡಿಸಿರುವುದಾಗಿ” ಹಿರಿಯ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

”ರಾಮಲಲ್ಲಾ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದ 60 ವರ್ಷದ ಮಹಿಳೆ ಮತ್ತು ವೃದ್ಧರೊಬ್ಬರಿಗೆ ಉಸಿರಾಟದ ತೊಂದರೆ ಉಂಟಾಗಿದ್ದರಿಂದ ಅವರು ಸರದಿಯಲ್ಲಿ ಪ್ರಜ್ಞೆ ತಪ್ಪಿ ಬಿದ್ದರು. ಇಬ್ಬರನ್ನೂ ತಕ್ಷಣ ಶ್ರೀರಾಮ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು” ಎಂದು ಅಲ್ಲಿನ ಪೊಲೀಸರು ಖಚಿತಪಡಿಸಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ಮುಗಿಸಿಕೊಂಡು ಭಕ್ತರು ನೇರವಾಗಿ ಅಯೋಧ್ಯೆಯತ್ತ ಆಗಮಿಸುತ್ತಿರುವುದರಿಂದ ಹನುಮಾನ್ ಗರ್ಹಿ ಮತ್ತು ರಾಮ ದೇವಾಲಯಕ್ಕೆ ಹೋಗುವ ಎಲ್ಲಾ ರಸ್ತೆಗಳು ಜನದಟ್ಟಣೆಯಿಂದ ಮುಚ್ಚಿಹೋಗಿವೆ. ಸೋಮವಾರ ಅಯೋಧ್ಯೆಯಲ್ಲಿ ಭಕ್ತರ ದಂಡೇ ಇದ್ದುದರಿಂದ ಕುಂಭಮೇಳದಂತಹ ದೃಶ್ಯ ಕಂಡು ಬಂದಿತು.

10 ಲಕ್ಷಕ್ಕೂ ಹೆಚ್ಚು ಭಕ್ತರು ಏಕಕಾಲದಲ್ಲಿ ಬಂದಿದ್ದರಿಂದ ಎಲ್ಲಾ ರಸ್ತೆಗಳು ಮತ್ತು ಬೀದಿಗಳು ಭಕ್ತರ ಸಂಚಾರದಿಂದ ತುಂಬಿದ್ದವು. ಭಕ್ತರನ್ನು ಕಂಡು ಹನುಮಾನಗಿರಿ ದೇವಸ್ಥಾನದಲ್ಲಿ ಬೆಳಗ್ಗೆ 4:00 ಗಂಟೆಯಿಂದಲೇ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾಮಲಲ್ಲಾ ದರ್ಶನ ಪಡೆಯಲು ಎರಡು ಕಿಲೋಮೀಟರ್ ಉದ್ದದ ಸರತಿ ಸಾಲು ಇತ್ತು. ಶ್ರೀರಾಮ್ ಆಸ್ಪತ್ರೆಯ ಆಡಳಿತ ಅಧಿಕಾರಿ ವೈ.ಪಿ. ಸಿಂಗ್ ಮಾತನಾಡಿ, ”ಬೆಳಗ್ಗೆ 11 ಗಂಟೆಗೆ ಮೃತ ಸ್ಥಿತಿಯಲ್ಲಿ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ತರಲಾಯಿತು. ಆಕೆಯನ್ನು ಹರಿಯಾಣದ ಸೋನಿಪತ್ ನಿವಾಸಿ ಬಿಮ್ಲಾ ದೇವಿ (60) ಎಂದು ಗುರುತಿಸಲಾಗಿದೆ. ಅದೇ ಸಮಯದಲ್ಲಿ, 65 ವರ್ಷದ ಮತ್ತೊಬ್ಬನ ಅನಾಥ ವ್ಯಕ್ತಿಯ ಶವವನ್ನು ಸಹ ತರಲಾಯಿತು. ಇಬ್ಬರೂ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ಇದೆ” ಎಂದು ತಿಳಿಸಿದ್ದಾರೆ.

ಜನವರಿ 29 ರಂದು ಮೌನಿ ಅಮಾವಾಸ್ಯೆ ಇದ್ದು, ಅಮೃತ ಸ್ನಾನದ ನಂತರ ಭಾರೀ ಜನಸಮೂಹ ಸೇರುವ ನಿರೀಕ್ಷೆಯಿದೆ. ಹೆಚ್ಚುತ್ತಿರುವ ಜನಸಂದಣಿಯನ್ನು ನಿರ್ವಹಿಸಲು ಮತ್ತು ಭಕ್ತರಿಗೆ ಸ್ಥಳಾವಕಾಶ ಕಲ್ಪಿಸಲು ಹಾಗೂ ಶೀತ ವಾತಾವರಣದಲ್ಲಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವ್ಯವಸ್ಥೆಗಳನ್ನು ಮಾಡಲಾಗಿದೆ. ಮಹಾಕುಂಭಕ್ಕೆ ಬರುವ ಭಕ್ತರು ನಂತರ ದರ್ಶನಕ್ಕಾಗಿ ಅಯೋಧ್ಯೆಯ ದೇವಾಲಯವನ್ನು ತಲುಪುತ್ತಿದ್ದಾರೆ. ವಿಶೇಷವಾಗಿ ಪವಿತ್ರ ಸ್ನಾನದ ನಂತರ, ಇಲ್ಲಿ ಭಾರೀ ಜನಸಂದಣಿ ಕಂಡುಬರುತ್ತದೆ.

ಜನವರಿ 29ರ ಮೌನಿ ಅಮಾವಾಸ್ಯೆಯಂದು ಅಮೃತ ಸ್ನಾನದ ನಂತರ ಭಾರೀ ಜನಸಂದಣಿಯನ್ನು ನಿರೀಕ್ಷಿಸಲಾಗಿದೆ ಎಂದು ಅಯೋಧ್ಯೆಯ ಆಯುಕ್ತ ಗೌರವ್ ದಯಾಳ್ ಹೇಳಿದ್ದಾರೆ.

”ರಾಮನಗರಿ ಅಯೋಧ್ಯೆಯಲ್ಲಿ ಅದೆಷ್ಟು ಜನಸಂದಣಿ ಇತ್ತೆಂದರೆ, ನಯಾ ಘಾಟ್‌ನಿಂದ ತೀರಿ ಬಜಾರ್‌ವರೆಗೆ, ರಾಮಪಥಕ್ಕೆ ಸಂಪರ್ಕಿಸುವ ಎಲ್ಲಾ ಬೀದಿಗಳಲ್ಲಿ ಜನಸಂದಣಿಯಿಂದ ಭರ್ತಿಯಾಗಿದ್ದವು. ನನ್ನ ಜೀವನದಲ್ಲಿ ಮೊದಲ ಬಾರಿಗೆ ಈ ಪ್ರಮಾಣದ ಜನಸಂದಣಿ ನೋಡಿದೆ. ಮೌನಿ ಅಮವಾಸ್ಯೆಯಂದು ಇದಕ್ಕೂ ಹೆಚ್ಚಿನ ಜನಸಂದಣಿ ಸೇರುವ ಸಾಧ್ಯತೆಯಿದೆ. ಮಹಾ ಕುಂಭ ಮೇಳದಲ್ಲಿ ಸ್ನಾನ ಮಾಡಿ ಹೆಚ್ಚಿನ ಸಂಖ್ಯೆಯ ಜನರು ಬರುತ್ತಿರುವುದಾಗಿ” ಭಕ್ತ ರಾಮ್ ಚೇತ್ ವರ್ಮಾ ಎಂಬುವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿರಿ : DEATH FROM GBS : 100ರ ಗಡಿ ದಾಟಿದ ಗುಯಿಲಿನ್-ಬಾರ್ರೆ ಸಿಂಡ್ರೋಮ್ ಪ್ರಕರಣ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...