spot_img
spot_img

DELHI ASSEMBLY POLLS 2025 : ದೆಹಲಿ ವಿಧಾನಸಭಾ ಚುನಾವಣೆ

spot_img
spot_img

Share post:

New Delhi News:

ನಾಮಪತ್ರ ಸಲ್ಲಿಕೆಗೆ ಮುನ್ನ ಅರವಿಂದ್​​ ಕೇಜ್ರಿವಾಲ್​ ವಾಲ್ಮೀಕಿ ಮತ್ತು ಹನುಮಾನ್​ ದೇಗುಲಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಲಿದ್ದಾರೆ.ಈ ನಾಮಪತ್ರ ಸಲ್ಲಿಕೆ ವೇಳೆ ರಾಜಧಾನಿಯ ಅನೇಕ ತಾಯಂದಿರು ಮತ್ತು ಸಹೋದರಿಯರು ಜೊತೆಯಾಗಲಿದ್ದು, ತಮಗೆ ಆಶೀರ್ವಾದ ಮಾಡಲಿದ್ದಾರೆ ಎಂದು ಅರವಿಂದ್​ ಕೇಜ್ರಿವಾಲ್​ ತಿಳಿಸಿದ್ದಾರೆ.ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಇಂದು ನವDELHI ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

“ಇಂದು ನಾನು ಚುನಾವಣಾ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಅನೇಕ ತಾಯಂದಿರು ಮತ್ತು ಸಹೋದರಿಯರು ನನಗೆ ಆಶೀರ್ವದಿಸಲಿದ್ದಾರೆ. ಹಾಗೇ ಹನುಮಾನ್​ ಮತ್ತು ವಾಲ್ಮೀಕಿ ದೇಗುಲಕ್ಕೆ ಭೇಟಿ ನೀಡುವುದಾಗಿ ಅವರು ತಿಳಿಸಿದ್ದಾರೆ”.ನಾಮಪತ್ರ ಸಲ್ಲಿಕೆಗೆ ಮುನ್ನ ಅರವಿಂದ್​​ ಕೇಜ್ರಿವಾಲ್​ ವಾಲ್ಮೀಕಿ ಮತ್ತು ಹನುಮಾನ್​ ದೇಗುಲಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಲಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕೇಜ್ರಿವಾಲ್​ ವಿರುದ್ದ ನವDELHIವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಪ್ರವೇಶ್​ ವರ್ಮಾ ಅವರು ಕಣಕ್ಕೆ ಇಳಿಯಲಿದ್ದಾರೆ.

ಕಾಂಗ್ರೆಸ್​ನಿಂದ DELHI ಮಾಜಿ ಸಿಎಂ ಶೀಲಾ ದೀಕ್ಷಿತ್​ ಪುತ್ರ ಸಂದೀಪ್​ ದೀಕ್ಷಿತ್​ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ನಡುವೆ ಇಡಿ ಸುಳಿ ಕೂಡ ಕೇಜ್ರಿವಾಲ್ ಅವರನ್ನು​ ಸುತ್ತಿಕೊಂಡಿದ್ದು, ಅವರು ನಾಮಪತ್ರ ಸಲ್ಲಿಸುವ ದಿನವೇ ಜಾಮೀನಿನ ಮೇಲೆ ಹೊರಗೆ ಇರುವ ಕೇಜ್ರಿವಾಲ್​ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ ನೀಡಿದೆ. ಅಬಕಾರಿ ನೀತಿ ಹಗರಣದಲ್ಲಿ ಈಗಾಗಲೇ ಆರು ತಿಂಗಳ ಸೆರೆವಾಸ ಅನುಭವಿಸಿರುವ ಕೇಜ್ರಿವಾಲ್​ ಜಾಮೀನಿನ ಮೇಲೆ ಹೊರಗಿದ್ದಾರೆ.2013ರಿಂದ DELHIಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಆಮ್​ ಆದ್ಮಿ ಪಕ್ಷ, ಮೂರನೇ ಬಾರಿ ಕೂಡ ಅಧಿಕಾರ ಗದ್ದುಗೆ ಏರುವ ಆಕಾಂಕ್ಷೆ ಹೊಂದಿದೆ.

Nomination Paper Submission by BJP Candidate: ಇಂದು ಬೆಳಗ್ಗೆ ಬೃಹತ್​ ಬೆಂಬಲಿಗರೊಂದಿಗೆ ಗೌರಿ ಶಂಕ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಬೃಹತ್​ ರೋಡ್​ಶೋ ಮೂಲಕ ಆಗಮಿಸಿದ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ನಾಮಪತ್ರ ಸಲ್ಲಿಕೆ ಮಾಡಿದರು.

ಇನ್ನು ನವDELHI ವಿಧಾನಸಭಾ ಕ್ಷೇತ್ರದಿಂದ ಕೇಜ್ರಿವಾಲ್​ ವಿರುದ್ಧ ಕಣಕ್ಕೆ ಇಳಿದಿರುವ DELHI ಮಾಜಿ ಸಂಸದ ಪ್ರವೇಶ್​ ವರ್ಮಾ ಕೂಡ ಇಂದು ನಾಮಪತ್ರ ಸಲ್ಲಿಕೆ ಮಾಡಿದರು. 70 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ DELHI ಚುನಾವಣೆಯ ಮತದಾನವೂ ಫೆ. 5ಕ್ಕೆ ನಿಗದಿಯಾಗಿದ್ದು, ಫೆ. 8ರಂದು ಮತದಾನ ಹೊರ ಬೀಳಲಿದೆ.

ಇದನ್ನು ಓದಿರಿ : WALKING BENEFITS : 6-6-6 ವಾಕಿಂಗ್ ರೂಲ್ಸ್ ಬಗ್ಗೆ ಗೊತ್ತೇ?

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...