New Delhi News:
ನಾಮಪತ್ರ ಸಲ್ಲಿಕೆಗೆ ಮುನ್ನ ಅರವಿಂದ್ ಕೇಜ್ರಿವಾಲ್ ವಾಲ್ಮೀಕಿ ಮತ್ತು ಹನುಮಾನ್ ದೇಗುಲಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಲಿದ್ದಾರೆ.ಈ ನಾಮಪತ್ರ ಸಲ್ಲಿಕೆ ವೇಳೆ ರಾಜಧಾನಿಯ ಅನೇಕ ತಾಯಂದಿರು ಮತ್ತು ಸಹೋದರಿಯರು ಜೊತೆಯಾಗಲಿದ್ದು, ತಮಗೆ ಆಶೀರ್ವಾದ ಮಾಡಲಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ನವDELHI ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
“ಇಂದು ನಾನು ಚುನಾವಣಾ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಅನೇಕ ತಾಯಂದಿರು ಮತ್ತು ಸಹೋದರಿಯರು ನನಗೆ ಆಶೀರ್ವದಿಸಲಿದ್ದಾರೆ. ಹಾಗೇ ಹನುಮಾನ್ ಮತ್ತು ವಾಲ್ಮೀಕಿ ದೇಗುಲಕ್ಕೆ ಭೇಟಿ ನೀಡುವುದಾಗಿ ಅವರು ತಿಳಿಸಿದ್ದಾರೆ”.ನಾಮಪತ್ರ ಸಲ್ಲಿಕೆಗೆ ಮುನ್ನ ಅರವಿಂದ್ ಕೇಜ್ರಿವಾಲ್ ವಾಲ್ಮೀಕಿ ಮತ್ತು ಹನುಮಾನ್ ದೇಗುಲಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಲಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕೇಜ್ರಿವಾಲ್ ವಿರುದ್ದ ನವDELHIವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಪ್ರವೇಶ್ ವರ್ಮಾ ಅವರು ಕಣಕ್ಕೆ ಇಳಿಯಲಿದ್ದಾರೆ.
ಕಾಂಗ್ರೆಸ್ನಿಂದ DELHI ಮಾಜಿ ಸಿಎಂ ಶೀಲಾ ದೀಕ್ಷಿತ್ ಪುತ್ರ ಸಂದೀಪ್ ದೀಕ್ಷಿತ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ನಡುವೆ ಇಡಿ ಸುಳಿ ಕೂಡ ಕೇಜ್ರಿವಾಲ್ ಅವರನ್ನು ಸುತ್ತಿಕೊಂಡಿದ್ದು, ಅವರು ನಾಮಪತ್ರ ಸಲ್ಲಿಸುವ ದಿನವೇ ಜಾಮೀನಿನ ಮೇಲೆ ಹೊರಗೆ ಇರುವ ಕೇಜ್ರಿವಾಲ್ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ ನೀಡಿದೆ. ಅಬಕಾರಿ ನೀತಿ ಹಗರಣದಲ್ಲಿ ಈಗಾಗಲೇ ಆರು ತಿಂಗಳ ಸೆರೆವಾಸ ಅನುಭವಿಸಿರುವ ಕೇಜ್ರಿವಾಲ್ ಜಾಮೀನಿನ ಮೇಲೆ ಹೊರಗಿದ್ದಾರೆ.2013ರಿಂದ DELHIಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಆಮ್ ಆದ್ಮಿ ಪಕ್ಷ, ಮೂರನೇ ಬಾರಿ ಕೂಡ ಅಧಿಕಾರ ಗದ್ದುಗೆ ಏರುವ ಆಕಾಂಕ್ಷೆ ಹೊಂದಿದೆ.
Nomination Paper Submission by BJP Candidate: ಇಂದು ಬೆಳಗ್ಗೆ ಬೃಹತ್ ಬೆಂಬಲಿಗರೊಂದಿಗೆ ಗೌರಿ ಶಂಕ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಬೃಹತ್ ರೋಡ್ಶೋ ಮೂಲಕ ಆಗಮಿಸಿದ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ನಾಮಪತ್ರ ಸಲ್ಲಿಕೆ ಮಾಡಿದರು.
ಇನ್ನು ನವDELHI ವಿಧಾನಸಭಾ ಕ್ಷೇತ್ರದಿಂದ ಕೇಜ್ರಿವಾಲ್ ವಿರುದ್ಧ ಕಣಕ್ಕೆ ಇಳಿದಿರುವ DELHI ಮಾಜಿ ಸಂಸದ ಪ್ರವೇಶ್ ವರ್ಮಾ ಕೂಡ ಇಂದು ನಾಮಪತ್ರ ಸಲ್ಲಿಕೆ ಮಾಡಿದರು. 70 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ DELHI ಚುನಾವಣೆಯ ಮತದಾನವೂ ಫೆ. 5ಕ್ಕೆ ನಿಗದಿಯಾಗಿದ್ದು, ಫೆ. 8ರಂದು ಮತದಾನ ಹೊರ ಬೀಳಲಿದೆ.
ಇದನ್ನು ಓದಿರಿ : WALKING BENEFITS : 6-6-6 ವಾಕಿಂಗ್ ರೂಲ್ಸ್ ಬಗ್ಗೆ ಗೊತ್ತೇ?