spot_img
spot_img

Delhi assembly elections : 38 ಅಭ್ಯರ್ಥಿಗಳ ಹೆಸರು ಘೋಷಿಸಿದ ಎಎಪಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Assembly Elections in Delhi :

ಈ ಮೂಲಕ ಎಲ್ಲಾ 70 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದಂತಾಗಿದೆ. ಮಾಜಿ CM ಅರವಿಂದ್‌ ಕೇಜ್ರಿವಾಲ್‌ ಅವರು ಹೊಸದಿಲ್ಲಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದು, ಅವರ ಎದುರಾಳಿಯಾಗಿ ಮಾಜಿ CM ಶೀಲಾ ದೀಕ್ಷಿತ್‌ ಅವರ ಪುತ್ರ ಸಂದೀಪ್‌ ದೀಕ್ಷಿತ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.Delhi ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಆಡಳಿತರೂಢ ಆಮ್‌ ಆದ್ಮಿ ಪಕ್ಷ 38 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ.

ಹಾಲಿ ಮುಖ್ಯಮಂತ್ರಿ ಅತಶಿ ಅವರು ತಮ್ಮ ಮೂಲ ಕ್ಷೇತ್ರ ಕಲ್ಕಾಜಿಯಿಂದ ಮತ್ತೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಸಚಿವ ಸೌರಭ್‌ ಭಾರದ್ವಜ್‌ ಅವರಿಗೆ ಗ್ರೇಟರ್‌ ಕೈಲಾಶ್‌ ಕ್ಷೇತ್ರದ ಟಿಕೆಟ್‌ ನೀಡಲಾಗಿದೆ. ಮತ್ತೊಬ್ಬ ಸಚಿವ ಗೋಪಾಲ್‌ ರಾಯ್‌ ಅವರನ್ನು ಬಾಬರ್‌ಪುರದಿಂದ ಕಣಕ್ಕಿಳಿಸಲಾಗಿದೆ.

ಪ್ರಮುಖ ನಾಯಕರಾದ ಇಮ್ರಾನ್‌ ಹುಸೇನ್‌ ಅವರು ಬಲ್ಲಿಮಾರನ್‌, ರಘುವಿಂದರ್‌ ಶೋಕೀನ್‌ ಅವರು ನಂಗ್ಲೋಯ್‌ ಚಾಟ್‌, ಮುಖೇಶ್‌ ಕುಮಾರ್‌ ಅವರು ಸುಲ್ತಾನ್‌ಪುರ್‌ ಮಜ್ರಾ, ಅಮಾನತುಲ್ಲಾ ಖಾನ್‌ ಅವರು ಓಕ್ಲಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರು ಶಕುರ್‌ಬಸ್ತಿಯಿಂದ ಸ್ಪರ್ಧೆ ಮಾಡಲಿದ್ದಾರೆ. ವಿವಾದಿತ ನಾಯಕ ಸೋಮನಾಥ್‌ ಭಾರ್ತಿ ಅವರು ಮಾಳವಿಯಾ ನಗರದಿಂದ ಕಣಕ್ಕಿಳಿಯಲಿದ್ದಾರೆ.

The app has announced a huge guarantee :

ಆಟೋ ಚಾಲಕರ ಮಗಳ ಮದುವೆಗೆ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು, ಕುಟುಂಬಕ್ಕೆ 10 ಲಕ್ಷ ರೂಪಾಯಿ ಜೀವ ವಿಮೆ, ಚಾಲಕರಿಗೆ 5 ಲಕ್ಷ ರೂಪಾಯಿಗಳ ಅಪಘಾತ ವಿಮೆ, ದೀಪಾವಳಿ ಹಾಗೂ ಹೋಳಿ ಹಬ್ಬದ ವೇಳೆ ಚಾಲಕರ ಮಕ್ಕಳಿಗೆ ಶಾಲಾ ಸಮವಸ್ತ್ರ ಖರೀದಿಸಲು 2,500 ರೂಪಾಯಿ ನೆರವು, ಆಟೋ ಚಾಲಕರ ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸಲು ಉಚಿತ ಕೋಚಿಂಗ್‌ ನೀಡುವ ಭರವಸೆಯನ್ನೂ ಪಕ್ಷ ನೀಡಿದೆ.

ಇದೇ ವೇಳೆ ಆಪ್‌ ಉಚಿತ ಕೊಡುಗೆಗಳ ಮಹಾಪೂರವನ್ನೇ ಹರಿಸಿದೆ. ನೋಂದಾಯಿತ ಆಟೋ ಚಾಲಕರಿಗೆ 10 ಲಕ್ಷ ರೂಪಾಯಿ ಜೀವ ವಿಮೆ, 5 ಲಕ್ಷ ರೂಪಾಯಿ ಅಪಘಾತ ವಿಮೆ ಸೇರಿ ಐದು ಗ್ಯಾರಂಟಿ ಘೋಷಣೆ ಮಾಡಿದೆ. ಅಲ್ಲದೆ ಮಹಿಳಾ ಸಮ್ಮಾನ್ ಯೋಜನೆ ಅಡಿ ಮಹಿಳೆಯರಿಗೆ ಪ್ರತಿ ತಿಂಗಳು 2,100 ರೂ.

ಆರ್ಥಿಕ ನೆರವು ನೀಡುವುದಾಗಿಯೂ ಭರವಸೆ ನೀಡಿದೆ. Delhi ನಾಗರಿಕರ ಜೀವನ ಸುಧಾರಣೆಗೆ ಅಗತ್ಯ ಇರುವ ಕಾರ್ಯಕ್ರಮ ರೂಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.ಮೂರನೇ ಅವಧಿಗೆ ಪಕ್ಷವನ್ನು ಅಧಿಕಾರಕ್ಕೆ ತರಲು ವ್ಯವಸ್ಥಿತವಾಗಿ ಪ್ರಚಾರ ಕೈಗೊಳ್ಳಲಾಗಿದೆ ಎಂದಿರುವ ಮಾಜಿ CM ಅರವಿಂದ್‌ ಕೇಜ್ರಿವಾಲ್‌, ನಿರ್ದಿಷ್ಟ ವರ್ಗದ ಜನರ ಅನುಕೂಲಕ್ಕೆ ಹೊಸ ಯೋಜನೆ ಘೋಷಿಸಲಾಗಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SPECIAL VILLAGE SAGA : 20 ಕುಟುಂಬ, 60 ಜನರಿರುವ ಒಂದು ಹಳ್ಳಿಯ ಕಥೆ: ಸ್ವಾವಲಂಬನೆಯ ಯಶೋಗಾಥೆ

Nalgonda, Telangana News: ಮೂಡು ಗುಡಿಸೆಲಾ ತಾಂಡಾ ಅಂದರೆ ಮೂರು ಗುಡಿಸಲುಗಳ ತಾಂಡಾ ಎಂಬ ಈ ವಿಶಿಷ್ಟ ತಾಂಡಾವನ್ನು 70 ವರ್ಷಗಳ ಹಿಂದೆ ನೇನಾವತ್ ಚಂದ್ರು...

ULLAL BANK ROBBERY : ಎಲ್ಲ ಟೋಲ್ಗಳಲ್ಲಿ ತಪಾಸಣೆ ಮಾಡುವಂತೆ ಸಿಎಂ ಸೂಚನೆ

Mangalore News: ಕೋಟೆಕಾರು ULLAL BANK ROBBERY ಪ್ರಕರಣ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಿಎಂ, ಎಲ್ಲ ಟೋಲ್​ಗಳಲ್ಲಿ ತಪಾಸಣೆ ಹಾಗೂ ಕೇರಳ ಗಡಿಯಲ್ಲಿನ ಸಿಸಿ...

HIGH COURT : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ

Bangalore News: HIGH COURT ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ...

SAIF ALI KHAN : ಸೈಫ್ ಐಸಿಯುನಿಂದ ಹೊರಕ್ಕೆ, ತನಿಖೆಗೆ 20 ಪೊಲೀಸ್ ತಂಡಗಳ ರಚನೆ

Mumbai (Maharashtra) News: ಬಾಲಿವುಡ್​​ ನಟ SAIF ಅಲಿ ಖಾನ್ ಅವರ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.ಈ ಘಟನೆ ಬಾಲಿವುಡ್ ಮಾತ್ರವಲ್ಲದೇ...