ಬಳ್ಳಾರಿ : ರಾಜ್ಯದಲ್ಲಿ ಒಳಮೀಸಲಾತಿ ಆಗ್ರಹಿಸಿ ಪರಿಶಿಷ್ಟ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿ ಹಾಗೂ ವಿವಿಧ್ ದಲಿತ ಸಂಘಟನೆಗಳು ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ಕೈಗೊಳ್ಳಲಾಗುತ್ತದೆ ಎಂದು ಆದೇಶ ಹೊರಡಿಸಿದ್ದಾರೆ.
ಎಚ್. ಹನುಮಂತಪ್ಪ ಅವರು ಸುಪ್ರೀಂ ಕೋರ್ಟ್ ಆದೇಶ ನೀಡಿದಂತೆ ಜಾರಿಗೊಳಿಸಿ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಿಲ್ಲ ಎಂದು ಆರೋಪಿಸಿದರು.
ಕಳೆದ ಮೂವತ್ತು ವರ್ಷಗಳ ನಿರಂತರ ಹೋರಾಟದ ಫಲವಾಗಿ ಒಳ ಮೀಸಲಾತಿಯನ್ನು ನ್ಯಾಯಾಲಯ ಜಾರಿಗೊಳಿಸಿದೆ. ತೀರ್ಪು ಪ್ರಕಟವಾಗಿ ಮೂರು ತಿಂಗಳಾದರೂ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾಗಿಲ್ಲ ಎಂದು ಮುಖಂಡ ಎ.ಕೆ ಹುಲುಗಪ್ಪ ಹೇಳಿದರು.
ಈ ವೇಳೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಎಚ್. ಹನುಮಂತಪ್ಪ ಸೇರಿದಂತೆ ಹಲವಾರು ಗಣ್ಯವ್ಯಕ್ತಿಗಳು ಉಪಸ್ಥಿತರಿದ್ದರು.